<p><strong>ಶಿಡ್ಲಘಟ್ಟ:</strong> ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜೀತ ವಿಮುಕ್ತರು, ಜೀತ ವಿಮುಕ್ತ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ತಾಲ್ಲೂಕಿನ ದಿಬ್ಬೂರಹಳ್ಳಿಯಿಂದ ಶಿಡ್ಲಘಟ್ಟ ತಾಲ್ಲೂಕು ಕಚೇರಿವರೆಗೆ ಬುಧವಾರ ಪಾದಯಾತ್ರೆ ನಡೆಸಿದರು. ತಾಲ್ಲೂಕು ಕಚೇರಿ ಆವರಣದಲ್ಲಿ ಅನಿರ್ದಿಷ್ಟ ಧರಣಿ ಆರಂಭಿಸಿದ್ದಾರೆ.</p>.<p>ಜೀತ ವಿಮುಕ್ತ ತಾಲ್ಲೂಕು ಸಂಚಾಲಕ ಪಿ.ಶ್ರೀನಿವಾಸ್ ಮಾತನಾಡಿ, ‘ಜೀತ ವಿಮುಕ್ತರಿಗೆ ಭೂಮಿ, ವಸತಿ ಮತ್ತು ಸಮಗ್ರ ಪುನರ್ವಸತಿ ಸವಲತ್ತುಗಳನ್ನು ಕಲ್ಪಿಸಲು ಒತ್ತಾಯಿಸಿ ಅನಿರ್ದಿಷ್ಟ ಧರಣಿ ಆರಂಭಿಸಿದ್ದೇವೆ’ ಎಂದರು.</p>.<p>‘ಜೀತದಿಂದ ಬಿಡುಗಡೆ ಮಾಡಿ ಆದೇಶಿಸಿರುವ ಉಪ ವಿಭಾಗಾಧಿಕಾರಿ ಸ್ಥಳಕ್ಕೆ ಬಂದು ನಮ್ಮ ಹಕ್ಕೊತ್ತಾಯವನ್ನು ಕೇಳಿಸಿಕೊಂಡು ಪರಿಹಾರ ನೀಡಬೇಕು. ಅದುವರೆಗೂ ನಮ್ಮ ಹೋರಾಟವನ್ನು ಕೈಬಿಡುವ ಪ್ರಶ್ನೆಯೆ ಇಲ್ಲ’ ಎಂದು ಹೇಳಿದರು.</p>.<p>‘ರಾಜ್ಯದಲ್ಲಿ 7,500 ಜನ ಜೀತದಿಂದ ಬಿಡುಗಡೆಗೊಂಡಿದ್ದಾರೆ. ಆದರೆ ಸರ್ಕಾರವು ಇವರಿಗೆ ಇದುವರೆಗೆ ಯಾವುದೇ ಪುನರ್ವಸತಿ ಕಲ್ಪಿಸಿಲ್ಲ’ ಎಂದು ದೂರಿದರು.</p>.<p>‘ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಇದುವರೆಗೂ 432 ಮಂದಿಯನ್ನು ಸರ್ಕಾರವೇ ಜೀತದಿಂದ ಬಿಡುಗಡೆ ಮಾಡಿದೆ. ಇದುವರೆಗೂ ಪಾರ್ಕಸ್ ನಿಧಿ, ಮಾಶಾಸನ ಹೊರತುಪಡಿಸಿ ಕಾನೂನು ಪ್ರಕಾರ ಯಾವುದೇ ಸೌಲಭ್ಯ ಮತ್ತು ಪುನರ್ವಸತಿ ಕಲ್ಪಿಸಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಜೀತದಿಂದ ವಿಮುಕ್ತರಾದವರಿಗೆ ಕಾನೂನಿನಡಿ ಯಾವುದೆ ಸವಲತ್ತುಗಳನ್ನು ಒದಗಿಸದ ಕಾರಣ ಮತ್ತೆ ಅವರು ಜೀತಕ್ಕೆ ಹೋಗುವಂತಿಲ್ಲ. ಸ್ವಾಭಿಮಾನದ ಬದುಕು ನಡೆಸಲೂ ಆಗದೆ ಅತಂತ್ರ ಸ್ಥಿತಿಯಲ್ಲಿ ಪರದಾಡುವಂತಾಗಿದೆ. ಇದಕ್ಕೆ ಸರ್ಕಾರ ಮತ್ತು ಜಿಲ್ಲಾಡಳಿತವು ಜೀತ ವಿಮುಕ್ತರ ಬಗ್ಗೆ ತೋರುವ ಅಸಡ್ಡೆ ಕಾರಣ’ ಎಂದು ದೂರಿದರು.</p>.<p>‘ಜೀತದಿಂದ ಬಿಡುಗಡೆ ಆಗಿರುವವರಿಗೆ ಕನಿಷ್ಠ 2 ಎಕರೆ ಜಮೀನು ನೀಡಬೇಕು. ಈ ಎಲ್ಲ ಬೇಡಿಕೆಗಳನ್ನು ಈಡೇರಿಸುವವರೆಗೂ ಪ್ರತಿಭಟನೆ ನಡೆಸಲಾಗುವುದು’ ಎಂದರು.</p>.<p>ಜೀವಿಕ ಒಕ್ಕೂಟದ ಅಧ್ಯಕ್ಷ ರಾಜ್ಯ ಗೌರವಾಧ್ಯಕ್ಷ ಗೊಲ್ಲಹಳ್ಳಿ ನರಸಿಂಹಪ್ಪ, ತಾಲ್ಲೂಕು ಅಧ್ಯಕ್ಷ ಮುನಿಯಪ್ಪ, ಮುನಿರಾಜು, ಮುನಿಕೃಷ್ಣಪ್ಪ, ಗಂಗಪ್ಪ, ಆಂಜಿನಪ್ಪ, ನಾರಾಯಣಪ್ಪ, ಕೃಷ್ಣಪ್ಪ, ಅನಿಲ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ:</strong> ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜೀತ ವಿಮುಕ್ತರು, ಜೀತ ವಿಮುಕ್ತ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ತಾಲ್ಲೂಕಿನ ದಿಬ್ಬೂರಹಳ್ಳಿಯಿಂದ ಶಿಡ್ಲಘಟ್ಟ ತಾಲ್ಲೂಕು ಕಚೇರಿವರೆಗೆ ಬುಧವಾರ ಪಾದಯಾತ್ರೆ ನಡೆಸಿದರು. ತಾಲ್ಲೂಕು ಕಚೇರಿ ಆವರಣದಲ್ಲಿ ಅನಿರ್ದಿಷ್ಟ ಧರಣಿ ಆರಂಭಿಸಿದ್ದಾರೆ.</p>.<p>ಜೀತ ವಿಮುಕ್ತ ತಾಲ್ಲೂಕು ಸಂಚಾಲಕ ಪಿ.ಶ್ರೀನಿವಾಸ್ ಮಾತನಾಡಿ, ‘ಜೀತ ವಿಮುಕ್ತರಿಗೆ ಭೂಮಿ, ವಸತಿ ಮತ್ತು ಸಮಗ್ರ ಪುನರ್ವಸತಿ ಸವಲತ್ತುಗಳನ್ನು ಕಲ್ಪಿಸಲು ಒತ್ತಾಯಿಸಿ ಅನಿರ್ದಿಷ್ಟ ಧರಣಿ ಆರಂಭಿಸಿದ್ದೇವೆ’ ಎಂದರು.</p>.<p>‘ಜೀತದಿಂದ ಬಿಡುಗಡೆ ಮಾಡಿ ಆದೇಶಿಸಿರುವ ಉಪ ವಿಭಾಗಾಧಿಕಾರಿ ಸ್ಥಳಕ್ಕೆ ಬಂದು ನಮ್ಮ ಹಕ್ಕೊತ್ತಾಯವನ್ನು ಕೇಳಿಸಿಕೊಂಡು ಪರಿಹಾರ ನೀಡಬೇಕು. ಅದುವರೆಗೂ ನಮ್ಮ ಹೋರಾಟವನ್ನು ಕೈಬಿಡುವ ಪ್ರಶ್ನೆಯೆ ಇಲ್ಲ’ ಎಂದು ಹೇಳಿದರು.</p>.<p>‘ರಾಜ್ಯದಲ್ಲಿ 7,500 ಜನ ಜೀತದಿಂದ ಬಿಡುಗಡೆಗೊಂಡಿದ್ದಾರೆ. ಆದರೆ ಸರ್ಕಾರವು ಇವರಿಗೆ ಇದುವರೆಗೆ ಯಾವುದೇ ಪುನರ್ವಸತಿ ಕಲ್ಪಿಸಿಲ್ಲ’ ಎಂದು ದೂರಿದರು.</p>.<p>‘ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಇದುವರೆಗೂ 432 ಮಂದಿಯನ್ನು ಸರ್ಕಾರವೇ ಜೀತದಿಂದ ಬಿಡುಗಡೆ ಮಾಡಿದೆ. ಇದುವರೆಗೂ ಪಾರ್ಕಸ್ ನಿಧಿ, ಮಾಶಾಸನ ಹೊರತುಪಡಿಸಿ ಕಾನೂನು ಪ್ರಕಾರ ಯಾವುದೇ ಸೌಲಭ್ಯ ಮತ್ತು ಪುನರ್ವಸತಿ ಕಲ್ಪಿಸಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಜೀತದಿಂದ ವಿಮುಕ್ತರಾದವರಿಗೆ ಕಾನೂನಿನಡಿ ಯಾವುದೆ ಸವಲತ್ತುಗಳನ್ನು ಒದಗಿಸದ ಕಾರಣ ಮತ್ತೆ ಅವರು ಜೀತಕ್ಕೆ ಹೋಗುವಂತಿಲ್ಲ. ಸ್ವಾಭಿಮಾನದ ಬದುಕು ನಡೆಸಲೂ ಆಗದೆ ಅತಂತ್ರ ಸ್ಥಿತಿಯಲ್ಲಿ ಪರದಾಡುವಂತಾಗಿದೆ. ಇದಕ್ಕೆ ಸರ್ಕಾರ ಮತ್ತು ಜಿಲ್ಲಾಡಳಿತವು ಜೀತ ವಿಮುಕ್ತರ ಬಗ್ಗೆ ತೋರುವ ಅಸಡ್ಡೆ ಕಾರಣ’ ಎಂದು ದೂರಿದರು.</p>.<p>‘ಜೀತದಿಂದ ಬಿಡುಗಡೆ ಆಗಿರುವವರಿಗೆ ಕನಿಷ್ಠ 2 ಎಕರೆ ಜಮೀನು ನೀಡಬೇಕು. ಈ ಎಲ್ಲ ಬೇಡಿಕೆಗಳನ್ನು ಈಡೇರಿಸುವವರೆಗೂ ಪ್ರತಿಭಟನೆ ನಡೆಸಲಾಗುವುದು’ ಎಂದರು.</p>.<p>ಜೀವಿಕ ಒಕ್ಕೂಟದ ಅಧ್ಯಕ್ಷ ರಾಜ್ಯ ಗೌರವಾಧ್ಯಕ್ಷ ಗೊಲ್ಲಹಳ್ಳಿ ನರಸಿಂಹಪ್ಪ, ತಾಲ್ಲೂಕು ಅಧ್ಯಕ್ಷ ಮುನಿಯಪ್ಪ, ಮುನಿರಾಜು, ಮುನಿಕೃಷ್ಣಪ್ಪ, ಗಂಗಪ್ಪ, ಆಂಜಿನಪ್ಪ, ನಾರಾಯಣಪ್ಪ, ಕೃಷ್ಣಪ್ಪ, ಅನಿಲ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>