ಪ್ರಸ್ತುತ ಕೆಲವು ಇಲಾಖೆಗಳಲ್ಲಿ ಚಾಲಕರಾಗಿ, ಬೆರಳಚ್ಚುಗಾರರಾಗಿ, ಸ್ವಚ್ಛತೆಗಾರರಾಗಿ ಹಾಗೂ ವಿವಿಧ ಹುದ್ದೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ನೌಕರರಿಗೆ ನೀಡುತ್ತಿರುವ ವೇತನದಲ್ಲಿ ಭವಿಷ್ಯ ನಿಧಿಯ ಮೊತ್ತವನ್ನು ಕಟಾಯಿಸಿ ಅವರಿಗೆ ಸೌಲಭ್ಯಗಳನ್ನು ಕೊಡದಿದ್ದರೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲು ಕಾರ್ಮಿಕರ ಕಾಯ್ದೆಯಡಿ ಅವಕಾಶವಿದೆ. ಅಂತಹ ಪರಿಸ್ಥಿತಿ ತಂದುಕೊಳ್ಳಬೇಡಿ ಎಂದು ತಿಳಿಸಿದರು.