<p><strong>ಶಿಡ್ಲಘಟ್ಟ:</strong> ‘ಇನ್ನೇನು ಕೆಲವೇ ತಿಂಗಳುಗಳಲ್ಲಿ ನಮ್ಮ ತಾಲ್ಲೂಕಿನ ಕೆರೆಗಳಿಗೆ ನೀರು ಹರಿದು ಬರಲಿದೆ. ಅದರಿಂದ ಅಂತರ್ಜಲ ವೃದ್ಧಿಯಾಗಲಿದೆ. ಕೊಳವೆಬಾವಿಗಳಲ್ಲಿಯೂ ನೀರು ತುಂಬಲಿದ್ದು, ರೈತರಿಗೆ ವರದಾನವಾಗಲಿದೆ’ ಎಂದು ಶಾಸಕ ವಿ. ಮುನಿಯಪ್ಪ ತಿಳಿಸಿದರು.</p>.<p>ಶಿಡ್ಲಘಟ್ಟದ ಪರಿವೀಕ್ಷಣಾ ಮಂದಿರದ ಆವರಣದಲ್ಲಿ ಸೋಮವಾರ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ವಾಲ್ಮೀಕಿ ಮಹರ್ಷಿ ಅಭಿವೃದ್ಧಿ ನಿಗಮದ ವತಿಯಿಂದ ಗಂಗಾ ಕಲ್ಯಾಣ ಯೋಜನೆಯಡಿ ಫಲಾನುಭವಿಗಳಿಗೆ ಪಂಪ್ -ಮೋಟಾರ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯದ ರೈತರಿಗೆ ಕೃಷಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ದೃಷ್ಟಿಯಿಂದ ಗಂಗಾ ಕಲ್ಯಾಣ ಯೋಜನೆಯನ್ನು ಜಾರಿಗೊಳಿಸಿದೆ. ಸರ್ಕಾರದ ಯೋಜನೆಯನ್ನು ಸದುಪಯೋಗಪಡಿಸಿಕೊಂಡು ಆರ್ಥಿಕ ಅಭಿವೃದ್ಧಿ ಹೊಂದಬೇಕು ಎಂದರು.</p>.<p>ಮಾರುಕಟ್ಟೆಯಲ್ಲಿ ಸಾವಿರಾರು ರೂಪಾಯಿ ಸುರಿದು ಪಂಪ್, ಮೋಟಾರ್ ಮತ್ತು ಪೈಪ್ಗಳನ್ನು ಕೊಂಡುಕೊಳ್ಳಲಾಗದ ಬಡರೈತರನ್ನು ಗುರುತಿಸಿ ಸರ್ಕಾರ ಪ್ರತಿವರ್ಷ ಫಲಾನುಭವಿ ರೈತರಿಗೆ ಉಚಿತವಾಗಿ ಪಂಪ್, ಮೋಟಾರ್, ಪೈಪ್ ಮತ್ತು ಕೇಬಲ್ಗಳನ್ನು ನೀಡುತ್ತಿದೆ. ಈ ಬಾರಿಯೂ ತಾಲ್ಲೂಕಿನ ಅರ್ಹ ಫಲಾನುಭವಿಗಳಿಗೆ ಉಚಿತ ಪಂಪ್ಸೆಟ್ ಹಾಗೂ ಪರಿಕರಗಳನ್ನು ನೀಡುತ್ತಿದ್ದು, ರೈತರು ಸದುಪಯೋಗಪಡಿಸಿ ಕೊಳ್ಳುವಂತೆ ಹೇಳಿದರು.</p>.<p>ತಾಲ್ಲೂಕು ಮಟ್ಟದ ಅಧಿಕಾರಿಗಳು, ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿ ರೈತರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ:</strong> ‘ಇನ್ನೇನು ಕೆಲವೇ ತಿಂಗಳುಗಳಲ್ಲಿ ನಮ್ಮ ತಾಲ್ಲೂಕಿನ ಕೆರೆಗಳಿಗೆ ನೀರು ಹರಿದು ಬರಲಿದೆ. ಅದರಿಂದ ಅಂತರ್ಜಲ ವೃದ್ಧಿಯಾಗಲಿದೆ. ಕೊಳವೆಬಾವಿಗಳಲ್ಲಿಯೂ ನೀರು ತುಂಬಲಿದ್ದು, ರೈತರಿಗೆ ವರದಾನವಾಗಲಿದೆ’ ಎಂದು ಶಾಸಕ ವಿ. ಮುನಿಯಪ್ಪ ತಿಳಿಸಿದರು.</p>.<p>ಶಿಡ್ಲಘಟ್ಟದ ಪರಿವೀಕ್ಷಣಾ ಮಂದಿರದ ಆವರಣದಲ್ಲಿ ಸೋಮವಾರ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ವಾಲ್ಮೀಕಿ ಮಹರ್ಷಿ ಅಭಿವೃದ್ಧಿ ನಿಗಮದ ವತಿಯಿಂದ ಗಂಗಾ ಕಲ್ಯಾಣ ಯೋಜನೆಯಡಿ ಫಲಾನುಭವಿಗಳಿಗೆ ಪಂಪ್ -ಮೋಟಾರ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯದ ರೈತರಿಗೆ ಕೃಷಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ದೃಷ್ಟಿಯಿಂದ ಗಂಗಾ ಕಲ್ಯಾಣ ಯೋಜನೆಯನ್ನು ಜಾರಿಗೊಳಿಸಿದೆ. ಸರ್ಕಾರದ ಯೋಜನೆಯನ್ನು ಸದುಪಯೋಗಪಡಿಸಿಕೊಂಡು ಆರ್ಥಿಕ ಅಭಿವೃದ್ಧಿ ಹೊಂದಬೇಕು ಎಂದರು.</p>.<p>ಮಾರುಕಟ್ಟೆಯಲ್ಲಿ ಸಾವಿರಾರು ರೂಪಾಯಿ ಸುರಿದು ಪಂಪ್, ಮೋಟಾರ್ ಮತ್ತು ಪೈಪ್ಗಳನ್ನು ಕೊಂಡುಕೊಳ್ಳಲಾಗದ ಬಡರೈತರನ್ನು ಗುರುತಿಸಿ ಸರ್ಕಾರ ಪ್ರತಿವರ್ಷ ಫಲಾನುಭವಿ ರೈತರಿಗೆ ಉಚಿತವಾಗಿ ಪಂಪ್, ಮೋಟಾರ್, ಪೈಪ್ ಮತ್ತು ಕೇಬಲ್ಗಳನ್ನು ನೀಡುತ್ತಿದೆ. ಈ ಬಾರಿಯೂ ತಾಲ್ಲೂಕಿನ ಅರ್ಹ ಫಲಾನುಭವಿಗಳಿಗೆ ಉಚಿತ ಪಂಪ್ಸೆಟ್ ಹಾಗೂ ಪರಿಕರಗಳನ್ನು ನೀಡುತ್ತಿದ್ದು, ರೈತರು ಸದುಪಯೋಗಪಡಿಸಿ ಕೊಳ್ಳುವಂತೆ ಹೇಳಿದರು.</p>.<p>ತಾಲ್ಲೂಕು ಮಟ್ಟದ ಅಧಿಕಾರಿಗಳು, ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿ ರೈತರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>