‘ಈ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ನನಗೆ ಹಲವು ರೀತಿಯಲ್ಲಿ ಅವಮಾನಿಸಿ, ಕಿರುಕುಳ ಕೊಟ್ಟಿದ್ದಾರೆ. ಅದನ್ನೆಲ್ಲ ಮನಸ್ಸಿನಲ್ಲಿ ಇಟ್ಟುಕೊಳ್ಳದೆ ನಾನು ಬಡವರು ಮತ್ತು ರೈತರ ₹25 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದೇನೆ. ಇವತ್ತು ದೇಶದಲ್ಲಿ ಆರ್ಥಿಕತೆ ಹದಗೆಟ್ಟು, ನಿರುದ್ಯೋಗ ತಾಂಡವವಾಡುತ್ತಿದೆ. ರಾಜ್ಯದಲ್ಲಿ ನೆರೆ ಸಂತ್ರಸ್ತರ ಗೋಳು ಕೇಳುವವರಿಲ್ಲದಂತಾಗಿದೆ. ಸಂತ್ರಸ್ತರ ನೆರವಿಗೆ ಬಾರದವರ ಜತೆ ಕೈಜೋಡಿಸುವವರನ್ನು ಸೋಲಿಸಬೇಕು’ ಎಂದು ಮನವಿ ಮಾಡಿದರು.