‘ಸರ್ಕಾರಿ ಆಸ್ಪತ್ರೆಯಲ್ಲಿ ಚುಚ್ಚುಮದ್ದು’
ರೇಬಿಸ್ ಕಾಯಿಲೆಯು ಮಾರಣಾಂತಿಕವಾದುದು. ನಾಯಿ ಕಡಿತಕ್ಕೆ ಒಳಗಾದ ಕೂಡಲೆ ಸರ್ಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿ ಚುಚ್ಚು ಮದ್ದು ಪಡೆಯಬೇಕು. ವೈದ್ಯರು ಸೂಚಿಸಿದ ಪ್ರಕಾರವೇ ಚಿಕಿತ್ಸೆ ಪಡೆಯುವುದು ಮುಖ್ಯ. ಒಮ್ಮೆ ರೇಬಿಸ್ ಕಾಯಿಲೆ ಬಂದರೆ ಗುಣಪಡಿಸಲು ಸಾಧ್ಯವಿಲ್ಲ. ಇದನ್ನು ಅರಿತು ಯಾವುದೇ ವ್ಯಕ್ತಿಗಳು ನಾಯಿ ಕಡಿತಕ್ಕೆ ಒಳಗಾದರೆ ಕೂಡಲೆ ಆರೋಗ್ಯ ಚಿಕಿತ್ಸೆ ಪಡೆಯಬೇಕು ಎಂದು ಪಿ.ಎನ್.ರವೀಂದ್ರ ಹೇಳಿದರು.