<p><strong>ಬಾಗೇಪಲ್ಲಿ</strong>: ಪಟ್ಟಣದ ಗುರು ರಾಘವೇಂದ್ರಸ್ವಾಮಿ ಮಠದಲ್ಲಿ ರಾಘವೇಂದ್ರಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ ರಾಘವೇಂದ್ರಸ್ವಾಮಿಯ 353ನೇ ಆರಾಧನ ಮಹೋತ್ಸವ ಮೂರು ದಿನಗಳ ಕಾಲ ನೂರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಿಂದ ನಡೆಯಿತು.</p>.<p>ಪಟ್ಟಣದ ಮುಖ್ಯರಸ್ತೆಯಲ್ಲಿನ ರಾಘವೇಂದ್ರಸ್ವಾಮಿ ಮಠದಲ್ಲಿ ತಳಿರು ತೋರಣಗಳಿಂದ ಹಾಗೂ ವಿದ್ಯೂತ್ ದೀಪಾಲಂಕಾರದಿಂದ ಸಿಂಗರಿಸಲಾಗಿತ್ತು.</p>.<p>ಆರಾಧನಾ ಮಹೋತ್ಸವದ ಅಂಗವಾಗಿ ರಾಘವೇಂದ್ರಸ್ವಾಮಿ ಬೃಂದಾವನಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಯಿತು.</p>.<p>ರಾಘವೇಂದ್ರಸ್ವಾಮಿ ಮಠದ ಸುತ್ತ ಪ್ರಾಕಾರ ರಥೋತ್ಸವ, ತೊಟ್ಟಿಲಸೇವೆ, ಮಹಾಮಂಗಳಾರತಿ, ಭಕ್ತರಿಗೆ ಪ್ರಸಾದ ವಿನಿಯೋಗ ಹಮ್ಮಿಕೊಳ್ಳಲಾಗಿತ್ತು. ವಿಪ್ರ ಹಾಗೂ ಆರ್ಯವೈಶ್ಯ ಮಹಿಳೆಯರು ಸೇರಿದಂತೆ ಭಕ್ತರು ದೇವರ ನಾಮ ಹಾಗೂ ಭಜನೆ ಮಾಡಿದರು.</p>.<p>ರಾಘವೇಮದ್ರಸ್ವಾಮಿ ಸೇವಾ ಟ್ರಸ್ಟ್ ಆಡಳಿತ ಮಂಡಲಿ ಅಧ್ಯಕ್ಷ, ನಿವೃತ್ತ ಕೆಎಸ್ ಅಧಿಕಾರಿ ಎಚ್.ಚಿತ್ತರಂಜನ್, ಉಪಾಧ್ಯಕ್ಷ ಪಾಂಡುರಂಗ, ಕಾರ್ಯದರ್ಶಿ ಸಿ.ವಿ.ವೆಂಕಟರಾವ್, ಸಹಕಾರ್ಯದರ್ಶಿ ಎಂ.ಎ.ಶ್ರೀನಿವಾಸತಂತ್ರಿ, ಬಂಗಾರುಬದ್ರಿ, ಎಸ್.ಮುನಿರಾಮಯ್ಯ, ಡಿ.ಎ.ಅಮರನಾಥ್, ಎಚ್.ಎನ್.ರವೀಂದ್ರನಾಥ್, ಬಿ.ಎಸ್.ನಂಜುಂಡಶರ್ಮ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗೇಪಲ್ಲಿ</strong>: ಪಟ್ಟಣದ ಗುರು ರಾಘವೇಂದ್ರಸ್ವಾಮಿ ಮಠದಲ್ಲಿ ರಾಘವೇಂದ್ರಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ ರಾಘವೇಂದ್ರಸ್ವಾಮಿಯ 353ನೇ ಆರಾಧನ ಮಹೋತ್ಸವ ಮೂರು ದಿನಗಳ ಕಾಲ ನೂರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಿಂದ ನಡೆಯಿತು.</p>.<p>ಪಟ್ಟಣದ ಮುಖ್ಯರಸ್ತೆಯಲ್ಲಿನ ರಾಘವೇಂದ್ರಸ್ವಾಮಿ ಮಠದಲ್ಲಿ ತಳಿರು ತೋರಣಗಳಿಂದ ಹಾಗೂ ವಿದ್ಯೂತ್ ದೀಪಾಲಂಕಾರದಿಂದ ಸಿಂಗರಿಸಲಾಗಿತ್ತು.</p>.<p>ಆರಾಧನಾ ಮಹೋತ್ಸವದ ಅಂಗವಾಗಿ ರಾಘವೇಂದ್ರಸ್ವಾಮಿ ಬೃಂದಾವನಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಯಿತು.</p>.<p>ರಾಘವೇಂದ್ರಸ್ವಾಮಿ ಮಠದ ಸುತ್ತ ಪ್ರಾಕಾರ ರಥೋತ್ಸವ, ತೊಟ್ಟಿಲಸೇವೆ, ಮಹಾಮಂಗಳಾರತಿ, ಭಕ್ತರಿಗೆ ಪ್ರಸಾದ ವಿನಿಯೋಗ ಹಮ್ಮಿಕೊಳ್ಳಲಾಗಿತ್ತು. ವಿಪ್ರ ಹಾಗೂ ಆರ್ಯವೈಶ್ಯ ಮಹಿಳೆಯರು ಸೇರಿದಂತೆ ಭಕ್ತರು ದೇವರ ನಾಮ ಹಾಗೂ ಭಜನೆ ಮಾಡಿದರು.</p>.<p>ರಾಘವೇಮದ್ರಸ್ವಾಮಿ ಸೇವಾ ಟ್ರಸ್ಟ್ ಆಡಳಿತ ಮಂಡಲಿ ಅಧ್ಯಕ್ಷ, ನಿವೃತ್ತ ಕೆಎಸ್ ಅಧಿಕಾರಿ ಎಚ್.ಚಿತ್ತರಂಜನ್, ಉಪಾಧ್ಯಕ್ಷ ಪಾಂಡುರಂಗ, ಕಾರ್ಯದರ್ಶಿ ಸಿ.ವಿ.ವೆಂಕಟರಾವ್, ಸಹಕಾರ್ಯದರ್ಶಿ ಎಂ.ಎ.ಶ್ರೀನಿವಾಸತಂತ್ರಿ, ಬಂಗಾರುಬದ್ರಿ, ಎಸ್.ಮುನಿರಾಮಯ್ಯ, ಡಿ.ಎ.ಅಮರನಾಥ್, ಎಚ್.ಎನ್.ರವೀಂದ್ರನಾಥ್, ಬಿ.ಎಸ್.ನಂಜುಂಡಶರ್ಮ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>