<p><strong>ಚಿಕ್ಕಬಳ್ಳಾಪುರ:</strong> ಬೆಂಬಲ ಬೆಲೆ ಯೋಜನೆಯಡಿ ಸರ್ಕಾರಕ್ಕೆ ರಾಗಿ ಮಾರಾಟ ಮಾಡಿದ ಜಿಲ್ಲೆಯ 2,232 ರೈತರಿಗೆ ಮೂರು ತಿಂಗಳಾದರೂ ಹಣವೇ ಬಿಡುಗಡೆಯಾಗಿಲ್ಲ! ಇಷ್ಟು ರೈತರಿಗೆ ₹ 13.18 ಕೋಟಿ ಹಣ ಬಿಡುಗಡೆಯಾಗಬೇಕು. ಕೋವಿಡ್ನ ಈ ದುರಿತ ಕಾಲದಲ್ಲಿ ಬಹಳಷ್ಟು ರೈತರು ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಿ ಬದುಕು ಸಾಗಿಸುತ್ತಿದ್ದಾರೆ.</p>.<p>ಇಂತಹ ಸಮಯದಲ್ಲಿಯೂ ರಾಜ್ಯ ಸರ್ಕಾರ ಹಣವನ್ನು ಬಾಕಿ ಉಳಿಸಿಕೊಂಡಿದೆ. ಬಹಳಷ್ಟು ರೈತರು ಯಾವಾಗ ಹಣ ಬಿಡುಗಡೆ ಆಗುತ್ತದೆ ಎಂದು ಅಧಿಕಾರಿಗಳನ್ನು ಕೇಳುತ್ತಲೇ ಇದ್ದಾರೆ. ಅಧಿಕಾರಿಗಳು ನಮ್ಮದೇನಿಲ್ಲ ಎಂದು ಸರ್ಕಾರದತ್ತ ಬೆರಳು ತೋರುತ್ತಿದ್ದಾರೆ. ಹಣ ಬಿಡುಗಡೆಗೆ ಆಗ್ರಹಿಸಿ ಈಗಾಗಲೇ ರೈತರು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೂ ಮನವಿ ಸಲ್ಲಿಸಿದ್ದಾರೆ.</p>.<p>ಈಗ ಮತ್ತೆ ಮುಂಗಾರು ಚಟುವಟಿಕೆಗಳು ಆರಂಭವಾಗಿವೆ. ಮುಂಗಾರಿಗೆ ರೈತರು ಬಿತ್ತನೆ ಬೀಜ, ರಸಗೊಬ್ಬರ ಖರೀದಿ, ಉಳುಮೆಗೆ ಹಣ ಅಗತ್ಯವಾಗಿದೆ. ಬಹಳಷ್ಟು ರೈತರು ಒಂದಿಷ್ಟು ಉತ್ಪನ್ನಗಳನ್ನು ಮಾರಾಟ ಮಾಡಿ ಮುಂಗಾರು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವರು. ಹಣ ಬಿಡುಗಡೆ ಆಗದಿರುವುದರಿಂದ ಮುಂಗಾರಿನ ಈ ಸಂದರ್ಭದಲ್ಲಿ ರೈತರು ಸಂಕಷ್ಟ ಸಹ ಎದುರಿಸಬೇಕಾಗಿದೆ.</p>.<p>ಜಿಲ್ಲೆಯ ಬಾಗೇಪಲ್ಲಿ, ಗೌರಿಬಿದನೂರು, ಚಿಕ್ಕಬಳ್ಳಾಪುರ, ಚಿಂತಾಮಣಿ ಮತ್ತು ಶಿಡ್ಲಘಟ್ಟದಲ್ಲಿ ಬೆಂಬಲ ಬೆಲೆ ಯೋಜನೆಯಡಿ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಮೂಲಕ ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿತ್ತು. ಏಪ್ರಿಲ್ 30ರವರೆಗೆ ಈ ಐದು ಕೇಂದ್ರಗಳಿಗೆ ಒಟ್ಟು 7,404 ರೈತರು 1,41,303 ಕ್ವಿಂಟಲ್ ರಾಗಿ ಮಾರಾಟ ಮಾಡಿದ್ದರು. ಇದರ ಒಟ್ಟು ಮೌಲ್ಯ ₹ 46.55 ಕೋಟಿಯಾಗಿತ್ತು. ಇಷ್ಟೊಂದು ಪ್ರಮಾಣದಲ್ಲಿ ರೈತರು ರಾಗಿ ಮಾರಾಟ ಮಾಡಿದ್ದು ದಾಖಲೆಯೂ ಆಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಮೂರು ಪಟ್ಟು ಹೆಚ್ಚು ರಾಗಿಯನ್ನು ರೈತರು ಮಾರಾಟ ಮಾಡಿದ್ದಾರೆ.</p>.<p>ರಾಗಿ ಮಾರಾಟ ಮಾಡಿದ 5,1719 ರೈತರಿಗೆ ಮೊದಲ ಮತ್ತು ಎರಡನೇ ಹಂತದಲ್ಲಿ ₹ 33.37 ಕೋಟಿ ಬಿಡುಗಡೆಯಾಗಿದೆ.</p>.<p>ಮಾ.16ರ ಮೊದಲು ರಾಗಿಯನ್ನು ಮಾರಾಟ ಮಾಡಿದ ರೈತರಿಗೆ ಹಣ ಬಿಡುಗಡೆಯಾಗಿದೆ. ನಂತರ ಮಾರಾಟ ಮಾಡಿದ ರೈತರು ಹಣ ಬಿಡುಗಡೆಯ ನಿರೀಕ್ಷೆ ಹೊತ್ತಿದ್ದಾರೆ. ಮೇ ಮೊದಲ ವಾರದಲ್ಲಿ ಎರಡನೇ ಹಂತದ ಹಣ ಬಿಡುಗಡೆ ಆಗಿತ್ತು. ಆ ವೇಳೆ ಈ 2,232 ರೈತರು ತಮಗೆ ಮೂರನೇ ಕಂತಿನಲ್ಲಿ ಹಣ ಆದಷ್ಟು ಬೇಗ ಬಿಡುಗಡೆ ಆಗುತ್ತದೆ ಎನ್ನುವ ಆಸೆಯನ್ನು ಹೊತ್ತಿದ್ದರು. ಆದರೆ ಆ ಆಸೆ ಇನ್ನೂ ಕೈಗೂಡಿಲ್ಲ.</p>.<p>ಕೊರೊನಾ ಮತ್ತು ಲಾಕ್ಡೌನ್ನ ಈ ಸಂಕಷ್ಟದ ಸಮಯದಲ್ಲಿಯೂ ಹಣ ಬಂದಿಲ್ಲ. ಸರ್ಕಾರ ಆದಷ್ಟು ಬೇಗ ಹಣ ಬಿಡುಗಡೆಗೆ ಕ್ರಮವಹಿಸಬೇಕು ಎಂದು ರೈತರು ಆಗ್ರಹಿಸುವರು.</p>.<p>***</p>.<p><strong>ತಾಲ್ಲೂಕು; ಹಣ ಬಿಡುಗಡೆಯಾಗಬೇಕಾದ ರೈತರ ಸಂಖ್ಯೆ</strong></p>.<p>ಬಾಗೇಪಲ್ಲಿ;222<br />ಗೌರಿಬಿದನೂರು;58<br />ಚಿಂತಾಮಣಿ;434<br />ಶಿಡ್ಲಘಟ್ಟ;712<br />ಚಿಕ್ಕಬಳ್ಳಾಪುರ;806<br />ಒಟ್ಟು;2,232</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಬೆಂಬಲ ಬೆಲೆ ಯೋಜನೆಯಡಿ ಸರ್ಕಾರಕ್ಕೆ ರಾಗಿ ಮಾರಾಟ ಮಾಡಿದ ಜಿಲ್ಲೆಯ 2,232 ರೈತರಿಗೆ ಮೂರು ತಿಂಗಳಾದರೂ ಹಣವೇ ಬಿಡುಗಡೆಯಾಗಿಲ್ಲ! ಇಷ್ಟು ರೈತರಿಗೆ ₹ 13.18 ಕೋಟಿ ಹಣ ಬಿಡುಗಡೆಯಾಗಬೇಕು. ಕೋವಿಡ್ನ ಈ ದುರಿತ ಕಾಲದಲ್ಲಿ ಬಹಳಷ್ಟು ರೈತರು ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಿ ಬದುಕು ಸಾಗಿಸುತ್ತಿದ್ದಾರೆ.</p>.<p>ಇಂತಹ ಸಮಯದಲ್ಲಿಯೂ ರಾಜ್ಯ ಸರ್ಕಾರ ಹಣವನ್ನು ಬಾಕಿ ಉಳಿಸಿಕೊಂಡಿದೆ. ಬಹಳಷ್ಟು ರೈತರು ಯಾವಾಗ ಹಣ ಬಿಡುಗಡೆ ಆಗುತ್ತದೆ ಎಂದು ಅಧಿಕಾರಿಗಳನ್ನು ಕೇಳುತ್ತಲೇ ಇದ್ದಾರೆ. ಅಧಿಕಾರಿಗಳು ನಮ್ಮದೇನಿಲ್ಲ ಎಂದು ಸರ್ಕಾರದತ್ತ ಬೆರಳು ತೋರುತ್ತಿದ್ದಾರೆ. ಹಣ ಬಿಡುಗಡೆಗೆ ಆಗ್ರಹಿಸಿ ಈಗಾಗಲೇ ರೈತರು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೂ ಮನವಿ ಸಲ್ಲಿಸಿದ್ದಾರೆ.</p>.<p>ಈಗ ಮತ್ತೆ ಮುಂಗಾರು ಚಟುವಟಿಕೆಗಳು ಆರಂಭವಾಗಿವೆ. ಮುಂಗಾರಿಗೆ ರೈತರು ಬಿತ್ತನೆ ಬೀಜ, ರಸಗೊಬ್ಬರ ಖರೀದಿ, ಉಳುಮೆಗೆ ಹಣ ಅಗತ್ಯವಾಗಿದೆ. ಬಹಳಷ್ಟು ರೈತರು ಒಂದಿಷ್ಟು ಉತ್ಪನ್ನಗಳನ್ನು ಮಾರಾಟ ಮಾಡಿ ಮುಂಗಾರು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವರು. ಹಣ ಬಿಡುಗಡೆ ಆಗದಿರುವುದರಿಂದ ಮುಂಗಾರಿನ ಈ ಸಂದರ್ಭದಲ್ಲಿ ರೈತರು ಸಂಕಷ್ಟ ಸಹ ಎದುರಿಸಬೇಕಾಗಿದೆ.</p>.<p>ಜಿಲ್ಲೆಯ ಬಾಗೇಪಲ್ಲಿ, ಗೌರಿಬಿದನೂರು, ಚಿಕ್ಕಬಳ್ಳಾಪುರ, ಚಿಂತಾಮಣಿ ಮತ್ತು ಶಿಡ್ಲಘಟ್ಟದಲ್ಲಿ ಬೆಂಬಲ ಬೆಲೆ ಯೋಜನೆಯಡಿ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಮೂಲಕ ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿತ್ತು. ಏಪ್ರಿಲ್ 30ರವರೆಗೆ ಈ ಐದು ಕೇಂದ್ರಗಳಿಗೆ ಒಟ್ಟು 7,404 ರೈತರು 1,41,303 ಕ್ವಿಂಟಲ್ ರಾಗಿ ಮಾರಾಟ ಮಾಡಿದ್ದರು. ಇದರ ಒಟ್ಟು ಮೌಲ್ಯ ₹ 46.55 ಕೋಟಿಯಾಗಿತ್ತು. ಇಷ್ಟೊಂದು ಪ್ರಮಾಣದಲ್ಲಿ ರೈತರು ರಾಗಿ ಮಾರಾಟ ಮಾಡಿದ್ದು ದಾಖಲೆಯೂ ಆಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಮೂರು ಪಟ್ಟು ಹೆಚ್ಚು ರಾಗಿಯನ್ನು ರೈತರು ಮಾರಾಟ ಮಾಡಿದ್ದಾರೆ.</p>.<p>ರಾಗಿ ಮಾರಾಟ ಮಾಡಿದ 5,1719 ರೈತರಿಗೆ ಮೊದಲ ಮತ್ತು ಎರಡನೇ ಹಂತದಲ್ಲಿ ₹ 33.37 ಕೋಟಿ ಬಿಡುಗಡೆಯಾಗಿದೆ.</p>.<p>ಮಾ.16ರ ಮೊದಲು ರಾಗಿಯನ್ನು ಮಾರಾಟ ಮಾಡಿದ ರೈತರಿಗೆ ಹಣ ಬಿಡುಗಡೆಯಾಗಿದೆ. ನಂತರ ಮಾರಾಟ ಮಾಡಿದ ರೈತರು ಹಣ ಬಿಡುಗಡೆಯ ನಿರೀಕ್ಷೆ ಹೊತ್ತಿದ್ದಾರೆ. ಮೇ ಮೊದಲ ವಾರದಲ್ಲಿ ಎರಡನೇ ಹಂತದ ಹಣ ಬಿಡುಗಡೆ ಆಗಿತ್ತು. ಆ ವೇಳೆ ಈ 2,232 ರೈತರು ತಮಗೆ ಮೂರನೇ ಕಂತಿನಲ್ಲಿ ಹಣ ಆದಷ್ಟು ಬೇಗ ಬಿಡುಗಡೆ ಆಗುತ್ತದೆ ಎನ್ನುವ ಆಸೆಯನ್ನು ಹೊತ್ತಿದ್ದರು. ಆದರೆ ಆ ಆಸೆ ಇನ್ನೂ ಕೈಗೂಡಿಲ್ಲ.</p>.<p>ಕೊರೊನಾ ಮತ್ತು ಲಾಕ್ಡೌನ್ನ ಈ ಸಂಕಷ್ಟದ ಸಮಯದಲ್ಲಿಯೂ ಹಣ ಬಂದಿಲ್ಲ. ಸರ್ಕಾರ ಆದಷ್ಟು ಬೇಗ ಹಣ ಬಿಡುಗಡೆಗೆ ಕ್ರಮವಹಿಸಬೇಕು ಎಂದು ರೈತರು ಆಗ್ರಹಿಸುವರು.</p>.<p>***</p>.<p><strong>ತಾಲ್ಲೂಕು; ಹಣ ಬಿಡುಗಡೆಯಾಗಬೇಕಾದ ರೈತರ ಸಂಖ್ಯೆ</strong></p>.<p>ಬಾಗೇಪಲ್ಲಿ;222<br />ಗೌರಿಬಿದನೂರು;58<br />ಚಿಂತಾಮಣಿ;434<br />ಶಿಡ್ಲಘಟ್ಟ;712<br />ಚಿಕ್ಕಬಳ್ಳಾಪುರ;806<br />ಒಟ್ಟು;2,232</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>