<p>ಶಿಡ್ಲಘಟ್ಟ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ, ಭತ್ತ, ಬಿಳಿಜೋಳ ಮಾರಾಟ ಮಾಡಲು ಈಗಾಗಲೇ ತಾಲ್ಲೂಕಿನಿಂದ ನೋಂದಣಿ ಮಾಡಿಕೊಂಡಿರುವ ರೈತರಿಂದ ರಾಗಿ ಖರೀದಿ ಮಾಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಎನ್.ಗಗನಸಿಂಧು ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿ, ರೈತರ ಪ್ರತಿ ಕ್ವಿಂಟಲ್ ರಾಗಿಗೆ ₹4,866 ದರ ನಿಗದಿಪಡಿಸಲಾಗಿದೆ. ತಾಲ್ಲೂಕಿನ 2055 ನೋಂದಾಯಿತ ರೈತರು ಚಿಕ್ಕಬಳ್ಳಾಪುರ ತಾಲ್ಲೂಕಿನ ವರದಹಳ್ಳಿಯ ರಾಜ್ಯ ಉಗ್ರಾಣ ನಿಗಮದ ರಾಗಿ ಖರೀದಿ ಕೇಂದ್ರದಲ್ಲಿ ಮಾರಾಟ ಮಾಡಬಹುದು ಎಂದರು.</p>.<p>ಸರ್ಕಾರ ಜಾರಿಗೊಳಿಸಿರುವ ಬೆಂಬಲ ಬೆಲೆ ಯೋಜನೆಯಡಿ ವಿವಿಧ ಬೆಳೆಗೆ ಸರ್ಕಾರ ನಿಗದಿಪಡಿಸಿರುವ ಬೆಲೆ ಮಾರುಕಟ್ಟೆ ದರಕ್ಕಿಂತ ಹೆಚ್ಚಿದೆ. ಹಾಗಾಗಿ ತಾಲ್ಲೂಕಿನಿಂದ ಈಗಾಗಲೇ ನೋಂದಾಯಿಸಿಕೊಂಡಿರುವ ರೈತರು ತ್ವರಿತವಾಗಿ ರಾಗಿ ಮಾರಾಟ ಮಾಡಿ ಎಂದರು.</p>.<p>ರೈತರಿಗೆ ಅನುಕೂಲವಾಗುವಂತೆ ತಾಲ್ಲೂಕಿನ ನೋಂದಾಯಿತವಾಗಿರುವ ಅಧಿಕೃತ 2ವೇ ಬ್ರಿಡ್ಜ್ಗಳಾದ ತಾಲ್ಲೂಕಿನ ಹನುಮಂತಪುರ ಗೇಟ್ ಬಳಿಯಿರುವ ಸುಮುಖ ವೇ ಬ್ರಿಡ್ಜ್ ಹಾಗೂ ನಗರದ ಬೈಪಾಸ್ ರಸ್ತೆಯ ಮಾರುತಿ ವೇ ಬ್ರಿಡ್ಜ್ ಗುರುತಿಸಲಾಗಿದ್ದು, ರೈತರು ಇಲ್ಲಿ ತೂಕ ಮಾಡಿಸಿಕೊಂಡು ಖಾತ್ರಿ ಪಡೆಯಬಹುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಡ್ಲಘಟ್ಟ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ, ಭತ್ತ, ಬಿಳಿಜೋಳ ಮಾರಾಟ ಮಾಡಲು ಈಗಾಗಲೇ ತಾಲ್ಲೂಕಿನಿಂದ ನೋಂದಣಿ ಮಾಡಿಕೊಂಡಿರುವ ರೈತರಿಂದ ರಾಗಿ ಖರೀದಿ ಮಾಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಎನ್.ಗಗನಸಿಂಧು ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿ, ರೈತರ ಪ್ರತಿ ಕ್ವಿಂಟಲ್ ರಾಗಿಗೆ ₹4,866 ದರ ನಿಗದಿಪಡಿಸಲಾಗಿದೆ. ತಾಲ್ಲೂಕಿನ 2055 ನೋಂದಾಯಿತ ರೈತರು ಚಿಕ್ಕಬಳ್ಳಾಪುರ ತಾಲ್ಲೂಕಿನ ವರದಹಳ್ಳಿಯ ರಾಜ್ಯ ಉಗ್ರಾಣ ನಿಗಮದ ರಾಗಿ ಖರೀದಿ ಕೇಂದ್ರದಲ್ಲಿ ಮಾರಾಟ ಮಾಡಬಹುದು ಎಂದರು.</p>.<p>ಸರ್ಕಾರ ಜಾರಿಗೊಳಿಸಿರುವ ಬೆಂಬಲ ಬೆಲೆ ಯೋಜನೆಯಡಿ ವಿವಿಧ ಬೆಳೆಗೆ ಸರ್ಕಾರ ನಿಗದಿಪಡಿಸಿರುವ ಬೆಲೆ ಮಾರುಕಟ್ಟೆ ದರಕ್ಕಿಂತ ಹೆಚ್ಚಿದೆ. ಹಾಗಾಗಿ ತಾಲ್ಲೂಕಿನಿಂದ ಈಗಾಗಲೇ ನೋಂದಾಯಿಸಿಕೊಂಡಿರುವ ರೈತರು ತ್ವರಿತವಾಗಿ ರಾಗಿ ಮಾರಾಟ ಮಾಡಿ ಎಂದರು.</p>.<p>ರೈತರಿಗೆ ಅನುಕೂಲವಾಗುವಂತೆ ತಾಲ್ಲೂಕಿನ ನೋಂದಾಯಿತವಾಗಿರುವ ಅಧಿಕೃತ 2ವೇ ಬ್ರಿಡ್ಜ್ಗಳಾದ ತಾಲ್ಲೂಕಿನ ಹನುಮಂತಪುರ ಗೇಟ್ ಬಳಿಯಿರುವ ಸುಮುಖ ವೇ ಬ್ರಿಡ್ಜ್ ಹಾಗೂ ನಗರದ ಬೈಪಾಸ್ ರಸ್ತೆಯ ಮಾರುತಿ ವೇ ಬ್ರಿಡ್ಜ್ ಗುರುತಿಸಲಾಗಿದ್ದು, ರೈತರು ಇಲ್ಲಿ ತೂಕ ಮಾಡಿಸಿಕೊಂಡು ಖಾತ್ರಿ ಪಡೆಯಬಹುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>