ಚಿತ್ರದುರ್ಗ: ಮುರುಘಾ ಮಠದಲ್ಲಿ ಬುಧವಾರಮಠಾಧೀಶರೊಂದಿಗೆ ನಡೆದ ಸಂವಾದದಲ್ಲಿ ಕಾಂಗ್ರೆಸ್ ನಾಯಕರಾಹುಲ್ ಗಾಂಧಿ ಅವರು ಕಾಲಮೇಲೆ ಕಾಲುಹಾಕಿ ಕುಳಿತ ಚಿತ್ರ, ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ರಾಹುಲ್ ಗಾಂಧಿ ಕ್ಷಮೆ ಕೇಳುವಂತೆ ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಂವಾದ ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಈ ಪ್ರಸಂಗ ನಡೆದಿದೆ. ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಪಕ್ಕದಲ್ಲಿ ಆಸೀನರಾಗಿದ್ದ ರಾಹುಲ್ ಗಾಂಧಿ ಕಾಲಮೇಲೆ ಕಾಲುಹಾಕಿ ಕುಳಿತು ಭಾಷಣ ಆಲಿಸುತ್ತಿದ್ದರು. ಇದನ್ನು ಗಮನಿಸಿದ ಕಾಂಗ್ರೆಸ್ ಮುಖಂಡರು ರಾಹುಲ್ ಗಮನ ಸೆಳೆದು ಕಾಲಮೇಲಿನ ಕಾಲು ತೆಗೆಯುವಂತೆ ಮಾಡಿದರು.