ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದ ಸುಮಾರು 30 ವಯಸ್ಸಿನ ವ್ಯಕ್ತಿಯ ಶವವನ್ನು ರೈಲ್ವೆ ಪೊಲೀಸರು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿ, ಒಂದು ವಾರದಿಂದ ವಾರಸುದಾರರ ಪತ್ತೆಗಾಗಿ ಪ್ರಯತ್ನಪಟ್ಟಿದ್ದರು. ಆದರೆ ಕೊನೆಗೆ ವಾರಸುದಾರರು ಪತ್ತೆಯಾಗದ ಕಾರಣ, ಅಂತಿಮವಾಗಿ ನಾಗೇಂದ್ರಸ್ವಾಮಿ ಅವರು ಅನಾಥ ಶವವನ್ನು ಸ್ಮಶಾನಕ್ಕೆ ತೆಗೆದುಕೊಂಡು ಹೋಗಿ, ಜೆಸಿಬಿ ಮೂಲಕ ಗುಂಡಿ ತೆಗೆಸಿ ಶಾಸ್ತ್ರೋಕ್ತವಾಗಿ ಅಂತ್ಯಸಂಸ್ಕಾರ ಮಾಡುವ ಮೂಲಕ ಇತರ ಅಧಿಕಾರಿಗಳಿಗೆ ಮಾದರಿಯಾಗಿದ್ದಾರೆ.