ಚಿಕ್ಕಬಳ್ಳಾಪುರ: ಜಿಲ್ಲೆಯ ಹಲವು ತಾಲೂಕುಗಳಲ್ಲಿ ಶುಕ್ರವಾರ ಸಂಜೆ ಅಕಾಲಿಕ ಮಳೆಯಾಗಿದೆ.
ಹೊತ್ತಲ್ಲದ ಹೊತ್ತಿನಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ರಾಗಿ ಒಕ್ಕಣೆ ಮಾಡಿದ್ದ ರೈತರಿಗೆ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿತು. ದ್ವಿಚಕ್ರ ವಾಹನ ಸವಾರರು ಸಂಚಾರದ ವೇಳೆ ತೊಂದರೆ ಅನುಭವಿಸಿದರು.
ಜಿಲ್ಲೆಯಾದ್ಯಂತ ಬೆಳಿಗ್ಗೆಯಿಂದ ದಟ್ಟ ಕಾರ್ಮೋಡ ಕವಿದು, ತಂಗಾಳಿ ಬೀಸುತ್ತಿತ್ತು. ಸಂಜೆ ಸುರಿದ ಮಳೆಯಿಂದಾಗಿ ವಾತಾವರಣ ಸಂಪೂರ್ಣ ತಂಪಾಯಿತು.