‘ಇದೀಗ ತಾಲ್ಲೂಕು ಮಟ್ಟದಲ್ಲೂ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆ ನಡೆಸಲಾಗುತ್ತಿದೆ. ಆದರೆ ಪ್ರಚಾರದ ಕೊರತೆಯಿಂದ ನಿರೀಕ್ಷಿತ ಮಟ್ಟದಲ್ಲಿ ಸಾರ್ವಜನಿಕರಿಂದ ಅಹವಾಲುಗಳು ಬರುತ್ತಿಲ್ಲ. ಮುಂದಿನ ಸಭೆಗಳಲ್ಲಿ ರೈತ ಸಂಘಟನೆಗಳು, ಲಾರಿ, ಖಾಸಗಿ ಬಸ್ ಮಾಲೀಕರ ಸಂಘ, ಆಟೋ ಚಾಲಕರ ಸಂಘ, ಎನ್ಜಿಒಗಳು ಸೇರಿದಂತೆ ಹಲವು ಸಂಘ -ಸಂಸ್ಥೆಗಳ ಸಹಯೋಗದಲ್ಲಿ ಈ ಸಭೆಯ ಉದ್ದೇಶದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ’ ಎಂದು ತಿಳಿಸಿದರು.