ಚಿಕ್ಕಬಳ್ಳಾಪುರ: ವಾರ್ತಾ ಇಲಾಖೆ ಕಚೇರಿಯಲ್ಲಿ ಶುಕ್ರವಾರ ವರನಟ ಡಾ.ರಾಜ್ಕುಮಾರ್ ಅವರ 92ನೇ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.
ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎಂ. ಜುಂಜಣ್ಣ, ಜಿಲ್ಲಾಧಿಕಾರಿ ಕಚೇರಿ ಸಹಾಯಕ ರವಿ, ವಾರ್ತಾ ಸಹಾಯಕಿ ಸಿ.ಮೈನಾಶ್ರೀ ಅವರು ರಾಜ್ಕುಮಾರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಮರ್ಪಿಸಿದರು.