ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ರಕ್ಷಾ ರಾಮಯ್ಯಗೆ ಜಿಲ್ಲೆಯ ಉಸ್ತುವಾರಿ

Last Updated 19 ಮಾರ್ಚ್ 2023, 6:22 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ಅವರನ್ನು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಯುವ ಕಾಂಗ್ರೆಸ್ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.

ಈ ಹಿಂದೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ರಕ್ಷಾ ರಾಮಯ್ಯ ಸ್ಪರ್ಧಿಸಬೇಕು ಎನ್ನುವ ಆಗ್ರಹ ಕಾಂಗ್ರೆಸ್ ಪಾಳಯದಿಂದ ಕೇಳಿ ಬಂದಿತ್ತು. ಎರಡೂ ಜಿಲ್ಲೆಯ ಕೆಲವು ಕ್ಷೇತ್ರಗಳಲ್ಲಿ ಬಲಿಜ ಸಮುದಾಯವು ಪ್ರಮುಖವಾಗಿದೆ. ಈ ಲೆಕ್ಕಾಚಾರದಲ್ಲಿ ಪಕ್ಷ ಸಂಘಟನೆಗೆ ಅನುಕೂಲವಾಗಲಿ ಎನ್ನುವ ದೃಷ್ಟಿಯಿಂದ ರಕ್ಷಾ ಅವರನ್ನು ನೇಮಿಸಲಾಗಿದೆ ಎನ್ನಲಾಗುತ್ತಿದೆ.

ರಕ್ಷಾ ರಾಮಯ್ಯ ಅವರ ತಂದೆ ಎಂ.ಆರ್.ಸೀತಾರಾಂ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗುವ ಆಸಕ್ತಿ ಸಹ ಹೊಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT