ಈ ಹಿಂದೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ರಕ್ಷಾ ರಾಮಯ್ಯ ಸ್ಪರ್ಧಿಸಬೇಕು ಎನ್ನುವ ಆಗ್ರಹ ಕಾಂಗ್ರೆಸ್ ಪಾಳಯದಿಂದ ಕೇಳಿ ಬಂದಿತ್ತು. ಎರಡೂ ಜಿಲ್ಲೆಯ ಕೆಲವು ಕ್ಷೇತ್ರಗಳಲ್ಲಿ ಬಲಿಜ ಸಮುದಾಯವು ಪ್ರಮುಖವಾಗಿದೆ. ಈ ಲೆಕ್ಕಾಚಾರದಲ್ಲಿ ಪಕ್ಷ ಸಂಘಟನೆಗೆ ಅನುಕೂಲವಾಗಲಿ ಎನ್ನುವ ದೃಷ್ಟಿಯಿಂದ ರಕ್ಷಾ ಅವರನ್ನು ನೇಮಿಸಲಾಗಿದೆ ಎನ್ನಲಾಗುತ್ತಿದೆ.