<p><strong>ಗುಡಿಬಂಡೆ</strong>: ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಕೇವಲ ಒಂದು ಜಾತಿ ಅಥವಾ ಒಂದು ಕುಲಕ್ಕಾಗಲಿ ಸೀಮಿತವಲ್ಲ. ಅದು ಸರ್ವರಿಗೂ ಸಲ್ಲುವಂತಹುದು ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು.</p>.<p>ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಮಹರ್ಷಿ ವಾಲ್ಮೀಕಿ ನಾಯಕರ ಸಂಘದ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಮಾತನಾಡಿದರು.</p>.<p>ವಾಲ್ಮೀಕಿ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಒಟ್ಟು 1.10 ಗುಂಟೆ ಜಮೀನನ್ನು ನೀಡಲಾಗಿದೆ. ₹2 ಕೋಟಿ ಅನುದಾನದಲ್ಲಿ ಭವನ ನಿರ್ಮಾಣಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಅನುದಾನದ ಕೊರತೆಯಿಂದ ತಡವಾಗುತ್ತಿದೆ. ₹2 ಕೋಟಿ ಜೊತೆಗೆ ಅಗತ್ಯ ಬಿದ್ದರೆ ₹5 ಕೋಟಿ ವೆಚ್ಚದಲ್ಲಿ ಭವನ ನಿರ್ಮಾಣಕ್ಕಾಗಿ ಅನುದಾನ ಬಿಡುಗಡೆ ಮಾಡಿಸಲು ಪ್ರಯತ್ನ ಮಾಡುತ್ತೇನೆ ಎಂದರು.</p>.<p>ವಾಲ್ಮೀಕಿ ಸಂಘದ ಮುಖಂಡರ ಮನವಿಯಂತೆ ಭವನ ನಿರ್ಮಾಣಕ್ಕೆ ನೀಡಿದ ಜಾಗದ ಸುತ್ತಲೂ ಕಾಂಪೌಂಡ್ ನಿರ್ಮಾಣ ಮಾಡಲು ಭೂಮಿಪೂಜೆ ನೆರವೇರಿಸಿದ್ದೇನೆ. ಮುಂದಿನ ವರ್ಷದೊಳಗೆ ಭವನ ನಿರ್ಮಾಣ ಮಾಡಿಕೊಡಲು ಪ್ರಯತ್ನ ಮಾಡುತ್ತೇನೆ ಎಂದರು.</p>.<p>ವಾಲ್ಮೀಕಿ ಸಂಘದ ಅಧ್ಯಕ್ಷ ಎನ್.ವಿ.ಗಂಗಾಧರ್, ಭವನ ನಿರ್ಮಾಣಕ್ಕೆ ಸುಮಾರು ವರ್ಷಗಳಿಂದ ಬೇಡಿಕೆ ಇಡುತ್ತಿದ್ದೇವೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೆಲವೊಂದು ಸಮಸ್ಯೆಗಳಿಂದ ತಡವಾಗುತ್ತಿದೆ. ಸದ್ಯ ವಾಲ್ಮೀಕಿ ಭವನ ನಿರ್ಮಾಣದ ಜಾಗದ ಸುತ್ತಲೂ ಕಾಪೌಂಡ್ ನಿರ್ಮಾಣಕ್ಕೆ ಶಾಸಕರು ಅನುದಾನ ನೀಡಿದ್ದಾರೆ ಎಂದರು.</p>.<p>8 ಗ್ರಾಮ ಪಂಚಾಯಿತಿಗಳಿಂದ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಗಳನ್ನೊಳಗೊಂಡ ಬೆಳ್ಳಿ ರಥಗಳನ್ನು ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಮುಖ್ಯರಸ್ತೆಯಲ್ಲಿ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲಾಯಿತು. ಎಸ್ಎಸ್ಎಲ್ಸಿ, ಪಿಯುಸಿ, ಪದವಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳನ್ನು, ಸಮುದಾಯದ ಮುಖಂಡರನ್ನು ಸನ್ಮಾನಿಸಲಾಯಿತು.</p>.<p>ತಹಸೀಲ್ದಾರ್ ಸಿಗ್ಬತ್ತುಲ್ಲಾ, ಇಒ ನಾಗಮಣಿ, ಕೃಷ್ಣಕುಮಾರಿ, ವಿಕಾಸ್, ಗಂಗರಾಜು, ಕೇಶವರೆಡ್ಡಿ, ನಯಾಜ್ ಬೇಗ್, ಮುನಿಕೃಷ್ಣಪ್ಪ, ನರೇಂದ್ರ, ಮಂಜುನಾಥ್, ಹರಿಕೃಷ್ಣ, ಕೋರೆನಹಳ್ಳಿ ಶ್ರೀನಿವಾಸ್, ದಪ್ಪರ್ತಿ ನಂಜುಂಡಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಡಿಬಂಡೆ</strong>: ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಕೇವಲ ಒಂದು ಜಾತಿ ಅಥವಾ ಒಂದು ಕುಲಕ್ಕಾಗಲಿ ಸೀಮಿತವಲ್ಲ. ಅದು ಸರ್ವರಿಗೂ ಸಲ್ಲುವಂತಹುದು ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು.</p>.<p>ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಮಹರ್ಷಿ ವಾಲ್ಮೀಕಿ ನಾಯಕರ ಸಂಘದ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಮಾತನಾಡಿದರು.</p>.<p>ವಾಲ್ಮೀಕಿ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಒಟ್ಟು 1.10 ಗುಂಟೆ ಜಮೀನನ್ನು ನೀಡಲಾಗಿದೆ. ₹2 ಕೋಟಿ ಅನುದಾನದಲ್ಲಿ ಭವನ ನಿರ್ಮಾಣಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಅನುದಾನದ ಕೊರತೆಯಿಂದ ತಡವಾಗುತ್ತಿದೆ. ₹2 ಕೋಟಿ ಜೊತೆಗೆ ಅಗತ್ಯ ಬಿದ್ದರೆ ₹5 ಕೋಟಿ ವೆಚ್ಚದಲ್ಲಿ ಭವನ ನಿರ್ಮಾಣಕ್ಕಾಗಿ ಅನುದಾನ ಬಿಡುಗಡೆ ಮಾಡಿಸಲು ಪ್ರಯತ್ನ ಮಾಡುತ್ತೇನೆ ಎಂದರು.</p>.<p>ವಾಲ್ಮೀಕಿ ಸಂಘದ ಮುಖಂಡರ ಮನವಿಯಂತೆ ಭವನ ನಿರ್ಮಾಣಕ್ಕೆ ನೀಡಿದ ಜಾಗದ ಸುತ್ತಲೂ ಕಾಂಪೌಂಡ್ ನಿರ್ಮಾಣ ಮಾಡಲು ಭೂಮಿಪೂಜೆ ನೆರವೇರಿಸಿದ್ದೇನೆ. ಮುಂದಿನ ವರ್ಷದೊಳಗೆ ಭವನ ನಿರ್ಮಾಣ ಮಾಡಿಕೊಡಲು ಪ್ರಯತ್ನ ಮಾಡುತ್ತೇನೆ ಎಂದರು.</p>.<p>ವಾಲ್ಮೀಕಿ ಸಂಘದ ಅಧ್ಯಕ್ಷ ಎನ್.ವಿ.ಗಂಗಾಧರ್, ಭವನ ನಿರ್ಮಾಣಕ್ಕೆ ಸುಮಾರು ವರ್ಷಗಳಿಂದ ಬೇಡಿಕೆ ಇಡುತ್ತಿದ್ದೇವೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೆಲವೊಂದು ಸಮಸ್ಯೆಗಳಿಂದ ತಡವಾಗುತ್ತಿದೆ. ಸದ್ಯ ವಾಲ್ಮೀಕಿ ಭವನ ನಿರ್ಮಾಣದ ಜಾಗದ ಸುತ್ತಲೂ ಕಾಪೌಂಡ್ ನಿರ್ಮಾಣಕ್ಕೆ ಶಾಸಕರು ಅನುದಾನ ನೀಡಿದ್ದಾರೆ ಎಂದರು.</p>.<p>8 ಗ್ರಾಮ ಪಂಚಾಯಿತಿಗಳಿಂದ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಗಳನ್ನೊಳಗೊಂಡ ಬೆಳ್ಳಿ ರಥಗಳನ್ನು ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಮುಖ್ಯರಸ್ತೆಯಲ್ಲಿ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲಾಯಿತು. ಎಸ್ಎಸ್ಎಲ್ಸಿ, ಪಿಯುಸಿ, ಪದವಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳನ್ನು, ಸಮುದಾಯದ ಮುಖಂಡರನ್ನು ಸನ್ಮಾನಿಸಲಾಯಿತು.</p>.<p>ತಹಸೀಲ್ದಾರ್ ಸಿಗ್ಬತ್ತುಲ್ಲಾ, ಇಒ ನಾಗಮಣಿ, ಕೃಷ್ಣಕುಮಾರಿ, ವಿಕಾಸ್, ಗಂಗರಾಜು, ಕೇಶವರೆಡ್ಡಿ, ನಯಾಜ್ ಬೇಗ್, ಮುನಿಕೃಷ್ಣಪ್ಪ, ನರೇಂದ್ರ, ಮಂಜುನಾಥ್, ಹರಿಕೃಷ್ಣ, ಕೋರೆನಹಳ್ಳಿ ಶ್ರೀನಿವಾಸ್, ದಪ್ಪರ್ತಿ ನಂಜುಂಡಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>