ಚಿಕ್ಕಬಳ್ಳಾಪುರ: ‘ಸಾಹಿತ್ಯ ಪರಂಪರೆಯಲ್ಲಿ ಹಳಗನ್ನಡ, ನಡುಗನ್ನಡ, ಆಧುನಿಕ ಕನ್ನಡದ ಜತೆಗೆ ವಚನ ಸಾಹಿತ್ಯ, ದಾಸ ಸಾಹಿತ್ಯ ಹಾಗೂ ನವೋದಯ, ನವ್ಯ, ಪ್ರಗತಿಶೀಲ, ದಲಿತ, ಬಂಡಾಯ ಸಾಹಿತ್ಯದ ಅಧ್ಯಯನದಿಂದ ಮಾನವನ ವ್ಯಕ್ತಿತ್ವ ರೂಪುಗೊಳ್ಳುವ ಜತೆಗೆ ಉತ್ತಮ ಸಮಾಜ ನಿರ್ಮಾಣಕ್ಕೂ ಕಾರಣವಾಗುತ್ತದೆ’ ಎಂದು ಉಪನ್ಯಾಸಕ ಎನ್.ಚಂದ್ರಶೇಖರ್ ಹೇಳಿದರು.