<p><strong>ಚಿಕ್ಕಬಳ್ಳಾಪುರ</strong>: ರೈತರು ಪೂರೈಸುತ್ತಿರುವ ಹಾಲಿನ ದರವನ್ನು ಲೀಟರ್ಗೆ ₹ 2 ಇಳಿಕೆ ಮಾಡಿರುವ ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ (ಕೋಚಿಮುಲ್) ನಿರ್ಧಾರಕ್ಕೆ ಆಕ್ರೋಶ ವ್ಯಕ್ತಪಡಿಸಿ ಜು.10ರಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ನಡೆಸಲಾಗುವುದು ಎಂದು ಸಂಸದ ಡಾ.ಕೆ.ಸುಧಾಕರ್ ಪ್ರಕಟಿಸಿದರು.</p><p>ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ರೈತರು, ಹೈನುಗಾರರು, ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು, ಮುಖಂಡರು ಉಪವಾಸದಲ್ಲಿ ಪಾಲ್ಗೊಳ್ಳುವರು. ನಂತರ ಕೋಲಾರ ಜಿಲ್ಲೆಯ ಮುಖಂಡರ ಜೊತೆ ಚರ್ಚಿಸಿ ಅಲ್ಲಿಯೂ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.</p><p>ದರ ಇಳಿಕೆಯ ಆದೇಶವನ್ನು ಕೋಚಿಮುಲ್ ತಕ್ಷಣವೇ ವಾಪಸ್ ಪಡೆಯಬೇಕು. ಲೀಟರ್ ಹಾಲಿನ ದರವನ್ನು ₹ 3 ಹೆಚ್ಚಿಸಿ ರೈತರಿಗೆ ಒಂದು ಲೀಟರ್ ಹಾಲಿಗೆ ₹ 34.40 ನೀಡಬೇಕು ಎಂದರು. </p><p>ಈ ಹಿಂದೆ ನಿತ್ಯ 9 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿತ್ತು. ಈಗ 12.5 ಲಕ್ಷ ಲೀಟರ್ ಉತ್ಪಾದನೆ ಆಗುತ್ತಿದೆ. ಈ ಕಾರಣದಿಂದ ದರ ಇಳಿಸಲಾಗಿದೆ ಎಂದು ಕೋಚಿಮುಲ್ ಅಧ್ಯಕ್ಷ ಕೆ.ವೈ.ನಂಜೇಗೌಡ ಹೇಳುತ್ತಾರೆ. ಇದು ರೈತರನ್ನು ಉದ್ಧಾರ ಮಾಡುವ ಮಾರ್ಗವೇ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ರೈತರು ಪೂರೈಸುತ್ತಿರುವ ಹಾಲಿನ ದರವನ್ನು ಲೀಟರ್ಗೆ ₹ 2 ಇಳಿಕೆ ಮಾಡಿರುವ ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ (ಕೋಚಿಮುಲ್) ನಿರ್ಧಾರಕ್ಕೆ ಆಕ್ರೋಶ ವ್ಯಕ್ತಪಡಿಸಿ ಜು.10ರಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ನಡೆಸಲಾಗುವುದು ಎಂದು ಸಂಸದ ಡಾ.ಕೆ.ಸುಧಾಕರ್ ಪ್ರಕಟಿಸಿದರು.</p><p>ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ರೈತರು, ಹೈನುಗಾರರು, ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು, ಮುಖಂಡರು ಉಪವಾಸದಲ್ಲಿ ಪಾಲ್ಗೊಳ್ಳುವರು. ನಂತರ ಕೋಲಾರ ಜಿಲ್ಲೆಯ ಮುಖಂಡರ ಜೊತೆ ಚರ್ಚಿಸಿ ಅಲ್ಲಿಯೂ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.</p><p>ದರ ಇಳಿಕೆಯ ಆದೇಶವನ್ನು ಕೋಚಿಮುಲ್ ತಕ್ಷಣವೇ ವಾಪಸ್ ಪಡೆಯಬೇಕು. ಲೀಟರ್ ಹಾಲಿನ ದರವನ್ನು ₹ 3 ಹೆಚ್ಚಿಸಿ ರೈತರಿಗೆ ಒಂದು ಲೀಟರ್ ಹಾಲಿಗೆ ₹ 34.40 ನೀಡಬೇಕು ಎಂದರು. </p><p>ಈ ಹಿಂದೆ ನಿತ್ಯ 9 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿತ್ತು. ಈಗ 12.5 ಲಕ್ಷ ಲೀಟರ್ ಉತ್ಪಾದನೆ ಆಗುತ್ತಿದೆ. ಈ ಕಾರಣದಿಂದ ದರ ಇಳಿಸಲಾಗಿದೆ ಎಂದು ಕೋಚಿಮುಲ್ ಅಧ್ಯಕ್ಷ ಕೆ.ವೈ.ನಂಜೇಗೌಡ ಹೇಳುತ್ತಾರೆ. ಇದು ರೈತರನ್ನು ಉದ್ಧಾರ ಮಾಡುವ ಮಾರ್ಗವೇ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>