ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಯಾಲೆಂಡರ್ ಬಿಡುಗಡೆ

Last Updated 15 ಡಿಸೆಂಬರ್ 2020, 7:51 IST
ಅಕ್ಷರ ಗಾತ್ರ

ಬಾಗೇಪಲ್ಲಿ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಿ.ಎನ್. ಸತ್ಯನಾರಾಯಣರೆಡ್ಡಿ ಹಾಗೂ ಕೊರೊನಾ ವಾರಿಯರ್ಸ್‌ 2021ರ ‘ಪ್ರಜಾವಾಣಿ’ ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಸತ್ಯನಾರಾಯಣರೆಡ್ಡಿ ಮಾತನಾಡಿ, ಅನೇಕ ದಶಕಗಳಿಂದ ‘ಪ್ರಜಾವಾಣಿ’ಯು ನಾಡಿನ ಅತ್ಯಂತ ವಿಶ್ವಾಸಾರ್ಹ ಪತ್ರಿಕೆಯಾಗಿದೆ. ಸುದ್ದಿಸ್ವಾರಸ್ಯ, ಸಾಹಿತ್ಯಿಕ, ರಾಜಕೀಯ ಸೇರಿದಂತೆ ಹೋಬಳಿಮಟ್ಟದಿಂದ ಹಿಡಿದು ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳು ಪತ್ರಿಕೆಯಲ್ಲಿ ಪ್ರಕಟವಾಗುತ್ತಿವೆ
ಎಂದರು.

ಇಂದಿಗೂ ಅದೇ ಮೌಲ್ಯ ಹಾಗೂ ಗುಣಮಟ್ಟ ಕಾಪಾಡಿಕೊಂಡು ಬಂದಿದೆ. ಗ್ರಾಮೀಣರ ಸಮಸ್ಯೆಗಳ ಬಗ್ಗೆ ಸುದ್ದಿಗಳು ಪ್ರಕಟವಾಗುತ್ತಿವೆ ಎಂದರು.

‌ಕೊರೊನಾ ವಾರಿಯರ್ಸ್‌ಗಳಾದ ಆಸ್ಪತ್ರೆಯ ಹಿರಿಯ ಆರೋಗ್ಯ ಸಹಾಯಕ ಸುಬಾನ್ ಸಾಬ್, ಹಿರಿಯ ತಂತ್ರಜ್ಞ ವೆಂಕಟೇಶ್, ಶುಶ್ರೂಷಕಿಯರಾದ ಮುಶ್ರ ಹಾಗೂ ಅಶ್ವಿನಿ ಅವರು ಕ್ಯಾಲೆಂಡರ್ ಬಿಡುಗಡೆಗೊಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT