ರಾಜ್ಯದಲ್ಲಿ ಸುಮಾರು 2.5 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಇರುವ ಜವಾಬ್ದಾರಿಯ ಜತೆಗೆ ಹೆಚ್ಚುವರಿ ಕೆಲಸವನ್ನು ಹಾಲಿ ನೌಕರರು ನಿರ್ವಹಿಸುತ್ತಿದ್ದಾರೆ. ಸರ್ಕಾರ ನೌಕರರಿಗೆ ಮಾತ್ರ ಆರ್ಥಿಕ ಮಿತವ್ಯಯದ ನೆಪ ಹೇಳುತ್ತಿದೆ. ನಿಗಮ, ಮಂಡಳಿಗಳಿಗೆ ಅಧ್ಯಕ್ಷ, ನಿರ್ದೇಶಕರನ್ನು ನೇಮಕ ಮಾಡಲಾಗುತ್ತಿದೆ. ಅವರ ಮನೆ ಬಾಡಿಗೆ, ಸಾರಿಗೆ ವೆಚ್ಚ, ವೇತನ, ದೂರವಾಣಿ, ವಿದ್ಯುತ್, ನೀರಿನ ಶುಲ್ಕ, ಪ್ರವಾಸ ಭತ್ಯೆ ಮತ್ತಿತರ ಸೌಲಭ್ಯಗಳಿಗಾಗಿ ನೂರಾರು ಕೋಟಿ ರೂಪಾಯಿಯನ್ನು ವ್ಯಯ ಮಾಡುತ್ತಿದೆ ಎಂದಿದ್ದಾರೆ.