<p><strong>ಬಂಗಾರಪೇಟೆ</strong>: ತಾಲ್ಲೂಕಿನ ಗುಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ಸಂಗ್ರಹಿಸುವ ಸೋಗಿನಲ್ಲಿ ಸರ್ಕಾರಿ ವಾಹನದಲ್ಲಿ ಶನಿವಾರ ಧರ್ಮ ಪ್ರಚಾರದ ಕರಪತ್ರಗಳನ್ನು ಹಂಚಿಕೆ ಮಾಡಲಾಗುತ್ತಿತ್ತು. </p>.<p>ಇದನ್ನು ಗಮನಿಸಿದ ಸಾರ್ವಜನಿಕರು, ಸರ್ಕಾರಿ ವಾಹನವನ್ನು ತಡೆದು ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. </p>.<p>ತಾಲ್ಲೂಕಿನ ಬೂದಿಕೋಟೆ ಹೋಬಳಿಯ ಗುಲ್ಲಹಳ್ಳಿ ಗ್ರಾಮ ಪಂಚಾಯಿತಿ ಸ್ವಚ್ಛತಾ ವಾಹನದಲ್ಲಿ ಸಿಬ್ಬಂದಿ ಶಶಿಕಲಾ, ನಾಗವೇಣಿ ಹಾಗೂ ವೆಂಕಟರತ್ನ ಅವರು ಮನೆ, ಮನೆಗೆ ತೆರಳಿ ಕಸ ಸಂಗ್ರಹಿಸುವ ಜೊತೆಗೆ ಧಾರ್ಮಿಕ ಸಭೆಯೊಂದರ ಕರಪತ್ರಗಳನ್ನು ಹಂಚುತ್ತಿದ್ದರು ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. </p>.<p>ಇದೇ 26ರಂದು ಕೆಜಿಎಫ್ನಲ್ಲಿ ನಡೆಯಲಿರುವ ಕ್ರಿಶ್ಚಿಯನ್ ಧರ್ಮದ ಸಭೆಗೆ ಸಂಬಂಧಿಸಿದ ಕರಪತ್ರಗಳನ್ನು ಹಂಚಿಕೆ ಮಾಡಲಾಗುತ್ತಿತ್ತು ಎನ್ನಲಾಗಿದೆ. </p>.<p>ಸಾರ್ವಜನಿಕ ಕೆಲಸಕ್ಕೆ ಮೀಸಲಿರುವ ವಾಹನ ಮತ್ತು ಸಮಯವನ್ನು ಒಂದು ನಿರ್ದಿಷ್ಟ ಧರ್ಮದ ಪ್ರಚಾರಕ್ಕೆ ಬಳಸುತ್ತಿರುವುದು ಸರಿಯಲ್ಲ. ಇದು ಮತಾಂತರಕ್ಕೆ ಪ್ರಚೋದನೆ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ. ಸಿಬ್ಬಂದಿ ಕೈಯಲ್ಲಿದ್ದ ಕರಪತ್ರಗಳನ್ನು ಸಾರ್ವಜನಿಕರು ಕಸಿದರು. ಪಂಚಾಯಿತಿ ಸಿಬ್ಬಂದಿಯ ಈ ನಡೆಯನ್ನು ಜನರು ಖಂಡಿಸಿದರು. </p>.<p>ಸರ್ಕಾರಿ ವಾಹನದಲ್ಲಿ ಇಂತಹ ಧಾರ್ಮಿಕ ಪ್ರಚಾರಕ್ಕೆ ಅವಕಾಶ ನೀಡಿದ ಅಧಿಕಾರಿಗಳ ವಿರುದ್ಧ ಮತ್ತು ಕರಪತ್ರ ಹಂಚಿದ ಸಿಬ್ಬಂದಿ ವಿರುದ್ಧ ಬೂದಿಕೋಟೆ ಪೊಲೀಸರು ಹಾಗೂ ಪಂಚಾಯಿತಿ ಮೇಲಧಿಕಾರಿಗಳು ತಕ್ಷಣವೇ ಶಿಸ್ತುಕ್ರಮ ಜರುಗಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<div><blockquote>ಸರ್ಕಾರಿ ವಾಹನವನ್ನು ಧರ್ಮ ಪ್ರಚಾರಕ್ಕೆ ಬಳಸಿರುವುದು ಕಾನೂನುಬಾಹಿರ. ಈ ಕುರಿತು ಪರಿಶೀಲಿಸಿ ಸಂಬಂಧಪಟ್ಟ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ</blockquote><span class="attribution"> ಎಚ್. ರವಿಕುಮಾರ್ ಕಾರ್ಯನಿರ್ವಹಣಾಧಿಕಾರಿ ತಾಲ್ಲೂಕು ಪಂಚಾಯಿತಿ ಬಂಗಾರಪೇಟೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ</strong>: ತಾಲ್ಲೂಕಿನ ಗುಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ಸಂಗ್ರಹಿಸುವ ಸೋಗಿನಲ್ಲಿ ಸರ್ಕಾರಿ ವಾಹನದಲ್ಲಿ ಶನಿವಾರ ಧರ್ಮ ಪ್ರಚಾರದ ಕರಪತ್ರಗಳನ್ನು ಹಂಚಿಕೆ ಮಾಡಲಾಗುತ್ತಿತ್ತು. </p>.<p>ಇದನ್ನು ಗಮನಿಸಿದ ಸಾರ್ವಜನಿಕರು, ಸರ್ಕಾರಿ ವಾಹನವನ್ನು ತಡೆದು ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. </p>.<p>ತಾಲ್ಲೂಕಿನ ಬೂದಿಕೋಟೆ ಹೋಬಳಿಯ ಗುಲ್ಲಹಳ್ಳಿ ಗ್ರಾಮ ಪಂಚಾಯಿತಿ ಸ್ವಚ್ಛತಾ ವಾಹನದಲ್ಲಿ ಸಿಬ್ಬಂದಿ ಶಶಿಕಲಾ, ನಾಗವೇಣಿ ಹಾಗೂ ವೆಂಕಟರತ್ನ ಅವರು ಮನೆ, ಮನೆಗೆ ತೆರಳಿ ಕಸ ಸಂಗ್ರಹಿಸುವ ಜೊತೆಗೆ ಧಾರ್ಮಿಕ ಸಭೆಯೊಂದರ ಕರಪತ್ರಗಳನ್ನು ಹಂಚುತ್ತಿದ್ದರು ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. </p>.<p>ಇದೇ 26ರಂದು ಕೆಜಿಎಫ್ನಲ್ಲಿ ನಡೆಯಲಿರುವ ಕ್ರಿಶ್ಚಿಯನ್ ಧರ್ಮದ ಸಭೆಗೆ ಸಂಬಂಧಿಸಿದ ಕರಪತ್ರಗಳನ್ನು ಹಂಚಿಕೆ ಮಾಡಲಾಗುತ್ತಿತ್ತು ಎನ್ನಲಾಗಿದೆ. </p>.<p>ಸಾರ್ವಜನಿಕ ಕೆಲಸಕ್ಕೆ ಮೀಸಲಿರುವ ವಾಹನ ಮತ್ತು ಸಮಯವನ್ನು ಒಂದು ನಿರ್ದಿಷ್ಟ ಧರ್ಮದ ಪ್ರಚಾರಕ್ಕೆ ಬಳಸುತ್ತಿರುವುದು ಸರಿಯಲ್ಲ. ಇದು ಮತಾಂತರಕ್ಕೆ ಪ್ರಚೋದನೆ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ. ಸಿಬ್ಬಂದಿ ಕೈಯಲ್ಲಿದ್ದ ಕರಪತ್ರಗಳನ್ನು ಸಾರ್ವಜನಿಕರು ಕಸಿದರು. ಪಂಚಾಯಿತಿ ಸಿಬ್ಬಂದಿಯ ಈ ನಡೆಯನ್ನು ಜನರು ಖಂಡಿಸಿದರು. </p>.<p>ಸರ್ಕಾರಿ ವಾಹನದಲ್ಲಿ ಇಂತಹ ಧಾರ್ಮಿಕ ಪ್ರಚಾರಕ್ಕೆ ಅವಕಾಶ ನೀಡಿದ ಅಧಿಕಾರಿಗಳ ವಿರುದ್ಧ ಮತ್ತು ಕರಪತ್ರ ಹಂಚಿದ ಸಿಬ್ಬಂದಿ ವಿರುದ್ಧ ಬೂದಿಕೋಟೆ ಪೊಲೀಸರು ಹಾಗೂ ಪಂಚಾಯಿತಿ ಮೇಲಧಿಕಾರಿಗಳು ತಕ್ಷಣವೇ ಶಿಸ್ತುಕ್ರಮ ಜರುಗಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<div><blockquote>ಸರ್ಕಾರಿ ವಾಹನವನ್ನು ಧರ್ಮ ಪ್ರಚಾರಕ್ಕೆ ಬಳಸಿರುವುದು ಕಾನೂನುಬಾಹಿರ. ಈ ಕುರಿತು ಪರಿಶೀಲಿಸಿ ಸಂಬಂಧಪಟ್ಟ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ</blockquote><span class="attribution"> ಎಚ್. ರವಿಕುಮಾರ್ ಕಾರ್ಯನಿರ್ವಹಣಾಧಿಕಾರಿ ತಾಲ್ಲೂಕು ಪಂಚಾಯಿತಿ ಬಂಗಾರಪೇಟೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>