‘ಪಂಪಾವನ, ರಾಜಾಸಿಟ್, ಉತ್ತರ ಕರ್ನಾಟಕದಲ್ಲಿರುವ ತೋಟಗಾರಿಕೆ ಕ್ಷೇತ್ರಗಳನ್ನು ಹಂತಹಂತವಾಗಿ ಅಭಿವೃದ್ಧಿಪಡಿಸಲು ನಾವು ಹೆಚ್ಚಿನ ಅನುದಾನ ತಂದಿದ್ದೇವೆ. ಸರ್ಕಾರಕ್ಕೆ ಪ್ರಸ್ತಾವಗಳನ್ನು ಸಲ್ಲಿಸಿದ್ದೇವೆ. ಪ್ರತ್ಯೇಕ ಆಯುಕ್ತರು, ಸಚಿವರನ್ನು ಹೊಂದಿರುವ ರಾಜ್ಯ ತೋಟಗಾರಿಕೆ ಇಲಾಖೆ ಮುಂಚೂಣಿಯಲ್ಲಿದೆ. ರಾಷ್ಟ್ರೀಯ ತೋಟಗಾರಿಕೆ ಯೋಜನೆ ಮುಖಾಂತರ ಇಲಾಖೆಗೆ ಗುರುತರ ಬದಲಾವಣೆ ತರಲು ಪ್ರಯತ್ನಿಸುತ್ತಿದ್ದೇವೆ’ ಎಂದು ಹೇಳಿದರು.