<p><strong>ಚಿಕ್ಕಬಳ್ಳಾಪುರ:</strong> ಇಲ್ಲಿನ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸುವ ಮೂಲಕ ಗಣ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.</p><p>ಪೊಲೀಸ್, ಅರಣ್ಯ ಇಲಾಖೆ ಸೇರಿದಂತೆ ವಿವಿಧ ಶಾಲೆಗಳ ತಂಡಗಳು ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು.</p><p>ಚಿಕ್ಕಬಳ್ಳಾಪುರ ದಲ್ಲಿ ಶೀಘ್ರದಲ್ಲಿ ಹೂ ಮಾರುಕಟ್ಟೆಗೆ ಟೆಂಡರ್ ಆಗಲಿದೆ. ಜಿಲ್ಲೆಯ ವೈದ್ಯಕೀಯ ಕಾಲೇಜಿನ ಕಾಮಗಾರಿಗೆ ನಮ್ಮ ಸರ್ಕಾರ ₹ 375 ಕೋಟಿಗಿಂತ ಹೆಚ್ಚು ಹಣ ಬಿಡುಗಡೆ ಮಾಡಿದೆ ಎಂದು ಸಚಿವರು ಹೇಳಿದರು.</p><p>ನಂದಿ ಗಿರಿಧಾಮಕ್ಕೆ ರೋಪ್ ವೇ ನಿರ್ಮಾಣಕ್ಕೆ ಎದುರಾಗಿದ್ದ ಸಮಸ್ಯೆಗಳನ್ನು ಪರಿಸಿದ್ದೇವೆ. ಒಂದೂವರೆ ವರ್ಷದ ಒಳಗೆ ನಂದಿ ಬೆಟ್ಟ ಕ್ಕೆ ರೋಪ್ ವೇ ನಿರ್ಮಾಣ ಆಗಲಿದೆ ಎಂದರು.</p><p>ಶಾಸಕ ಪ್ರದೀಪ್ ಈಶ್ವರ್, ಜಿಲ್ಲಾಧಿಕಾರಿ ಪ್ರಭು ಜಿ.,ಜಿ.ಪಂ ಸಿಇಒ ಡಾ.ನವೀನ್ ಭಟ್, ಎಸ್ಪಿ ಕುಶಾಲ್ ಚೌಕ್ಸೆ, ಮಾವು ನಿಗಮದ ಅಧ್ಯಕ್ಷ ಮುದ್ದು ಗಂಗಾಧರ್ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಇಲ್ಲಿನ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸುವ ಮೂಲಕ ಗಣ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.</p><p>ಪೊಲೀಸ್, ಅರಣ್ಯ ಇಲಾಖೆ ಸೇರಿದಂತೆ ವಿವಿಧ ಶಾಲೆಗಳ ತಂಡಗಳು ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು.</p><p>ಚಿಕ್ಕಬಳ್ಳಾಪುರ ದಲ್ಲಿ ಶೀಘ್ರದಲ್ಲಿ ಹೂ ಮಾರುಕಟ್ಟೆಗೆ ಟೆಂಡರ್ ಆಗಲಿದೆ. ಜಿಲ್ಲೆಯ ವೈದ್ಯಕೀಯ ಕಾಲೇಜಿನ ಕಾಮಗಾರಿಗೆ ನಮ್ಮ ಸರ್ಕಾರ ₹ 375 ಕೋಟಿಗಿಂತ ಹೆಚ್ಚು ಹಣ ಬಿಡುಗಡೆ ಮಾಡಿದೆ ಎಂದು ಸಚಿವರು ಹೇಳಿದರು.</p><p>ನಂದಿ ಗಿರಿಧಾಮಕ್ಕೆ ರೋಪ್ ವೇ ನಿರ್ಮಾಣಕ್ಕೆ ಎದುರಾಗಿದ್ದ ಸಮಸ್ಯೆಗಳನ್ನು ಪರಿಸಿದ್ದೇವೆ. ಒಂದೂವರೆ ವರ್ಷದ ಒಳಗೆ ನಂದಿ ಬೆಟ್ಟ ಕ್ಕೆ ರೋಪ್ ವೇ ನಿರ್ಮಾಣ ಆಗಲಿದೆ ಎಂದರು.</p><p>ಶಾಸಕ ಪ್ರದೀಪ್ ಈಶ್ವರ್, ಜಿಲ್ಲಾಧಿಕಾರಿ ಪ್ರಭು ಜಿ.,ಜಿ.ಪಂ ಸಿಇಒ ಡಾ.ನವೀನ್ ಭಟ್, ಎಸ್ಪಿ ಕುಶಾಲ್ ಚೌಕ್ಸೆ, ಮಾವು ನಿಗಮದ ಅಧ್ಯಕ್ಷ ಮುದ್ದು ಗಂಗಾಧರ್ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>