ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಕಿ ವೇತನ ಬಿಡುಗಡೆಗೆ ಆಗ್ರಹ

ಜಿಲ್ಲಾಡಳಿತ ಭವನದ ಎದುರು ರಾಜ್ಯ ಸರ್ಕಾರಿ ವಿದ್ಯಾರ್ಥಿ ನಿಲಯ ಹಾಗೂ ವಸತಿ ನಿಲಯಗಳ ಹೊರ ಗುತ್ತಿಗೆ ನೌಕರರ ಪ್ರತಿಭಟನೆ
Last Updated 20 ಜೂನ್ 2020, 15:09 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಬಾಕಿಯಿರುವ ವೇತನ ಬಿಡುಗಡೆ ಸೇರಿದಂತೆ ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ವಿದ್ಯಾರ್ಥಿ ನಿಲಯ ಹಾಗೂ ವಸತಿ ನಿಲಯಗಳ ಹೊರ ಗುತ್ತಿಗೆ ನೌಕರರ ಸಂಘದ ನೌಕರರು ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಆಂಜನೇಯರೆಡ್ಡಿ, ‘ಸರ್ಕಾರಿ ಹಾಸ್ಟೆಲ್ ಹಾಗೂ ವಸತಿ ನಿಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಕಳೆದ ಮಾರ್ಚ್‍ನಿಂದ ವೇತನ ನೀಡಿಲ್ಲ. ಇದರಿಂದ ನೌಕರರು ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದು ಹೇಳಿದರು.

‘ಕೂಡಲೇ ನೌಕರರಿಗೆ ಬಾಕಿ ವೇತನ, ಪಿಎಫ್ ಇಎಸ್‍ಐ ಕಾರ್ಡ್ ಒದಗಿಸಿ ನೆಮ್ಮದಿ ಜೀವನ ಕಲ್ಪಿಸಬೇಕಿದೆ. ಲಾಕ್‍ಡೌನ್ ಕಾರಣಕ್ಕೆ ಇತರೆ ಇಲಾಖೆಗಳ ನೌಕರರಿಗೆ ನೀಡಿರುವ ಪಡಿತರ ಕಿಟ್‍ಗಳನ್ನು ಅಡುಗೆ ನೌಕರರಿಗೂ ನೀಡಬೇಕು‘ ಎಂದು ಒತ್ತಾಯಿಸಿದರು.

‘ಕಳೆದ 12 ವರ್ಷಗಳಿಂದ ಕರ್ತವ್ಯ ನಿರ್ವಹಿಸಿ ಕೆಲಸ ಕಳೆದುಕೊಂಡಿರುವ ಬಿಸಿಎಂ ಇಲಾಖೆ ನೌಕರರನ್ನು ನೂತನವಾಗಿ ಪ್ರಾರಂಭಿಸುವ ವಸತಿ ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ನೇಮಿಸಿಕೊಳ್ಳಬೇಕು. ಕಾರ್ಮಿಕ ವಿರೋಧಿ ತಿದ್ದುಪಡಿಗಳನ್ನು ರದ್ದುಗೊಳಿಸಬೇಕು. ನೌಕರರ ವೇತನವನ್ನು ₹25 ಸಾವಿರಕ್ಕೆ ಏರಿಸಬೇಕು. ಹೊರಗುತ್ತಿಗೆ ನೌಕರರಿಗೆ ಉದ್ಯೋಗ ಭದ್ರತೆ ಕಲ್ಪಿಸಬೇಕು’ ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಮುನಿಯಪ್ಪ, ಪದಾಧಿಕಾರಿಗಳಾದ ನಾರಾಯಣಸ್ವಾಮಿ, ಕದಿರಪ್ಪ, ನವೀನ, ಮಂಜುನಾಥ್, ವೆಂಕಟರವಣಪ್ಪ, ಶಿವಣ್ಣ, ವೆಂಕಟಲಕ್ಷ್ಮಮ್ಮ, ಆದಿಲಕ್ಷ್ಮಮ್ಮ, ರಮಾಮಣಿ, ಶೋಭಾ, ರತ್ನಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT