ಚಿಕ್ಕಬಳ್ಳಾಪುರ: ಜಿಲ್ಲಾ ಮಟ್ಟದಲ್ಲಿ ಸುಸಜ್ಜಿತವಾದ ಬಿ. ಆರ್. ಅಂಬೇಡ್ಕರ್ ಭವನವನ್ನು ಜಿಲ್ಲಾ ಕೇಂದ್ರದಲ್ಲಿ ನಿರ್ಮಿಸಲು 5 ಎಕರೆ ಜಾಗವನ್ನು ಕಾಯ್ದಿರಿಸಬೇಕು. ಆ ಕಟ್ಟಡದಲ್ಲಿ ಸಭಾಂಗಣ, ಇ-ಗ್ರಂಥಾಲಯ, ಫೋಟೊ ಗ್ಯಾಲರಿ, ಬಿ. ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರವನ್ನು ಅಭಿವೃದ್ಧಿಪಡಿಸಬೇಕು ಎಂದು ಕೋರಿ ಅಖಿಲ ಭಾರತೀಯ ಪರಿಶಿಷ್ಟ ಜಾತಿ ಯುವಜನ ಸಮಾಜದ ಜಿಲ್ಲಾ ಘಟಕ ಹಾಗೂ ಜನಪದವಾಗಲಿ ಸಂವಿಧಾನ ಅಭಿಯಾನ ವೇದಿಕೆಯ ಸದಸ್ಯರು ಇತ್ತೀಚೆಗೆ ಜಿಲ್ಲಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿದರು.