<p><strong>ಶಿಡ್ಲಘಟ್ಟ</strong>: ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಆದಾಯಕ್ಕಿಂತಲೂ ಹೆಚ್ಚಿನ ವೆಚ್ಚ ಆಗಿರುವುದು ಕಂಡುಬಂದಿದೆ ಎಂದು ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಟಿ.ಎಂ. ವಿಜಯಭಾಸ್ಕರ್<br />ತಿಳಿಸಿದರು.</p>.<p>ತಾಲ್ಲೂಕಿನ ಅಬ್ಲೂಡು ಮತ್ತು ಭಕ್ತರಹಳ್ಳಿ ಗ್ರಾಮ ಪಂಚಾಯಿತಿಗಳಿಗೆ ಹಾಗೂ ನಗರಸಭೆಗೆ ಭೇಟಿ ನೀಡಿ ಆಡಳಿತ ಸುಧಾರಣೆಯ ಬಗ್ಗೆ ಸಲಹೆ ಸೂಚನೆಗಳನ್ನು ಪಡೆದು ಮಾತನಾಡಿದರು.</p>.<p>ತಾಲ್ಲೂಕಿನ ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ₹6 ಲಕ್ಷ ಇದ್ದರೆ, ಆ ಗ್ರಾಮ ಪಂಚಾಯಿತಿಯ ವಿದ್ಯುತ್ ಬಿಲ್ ಬಾಕಿ ₹5 ಕೋಟಿಗಳಷ್ಟಿರುವುದು ಗಮನಕ್ಕೆ ಬಂದಿತು ಎಂದರು.</p>.<p>ನಗರಸಭೆಯು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಇಲ್ಲಿ ಪೌರ ಕಾರ್ಮಿಕರ ಸಂಬಳದ ವಿಳಂಬ ಮತ್ತು ಅಭಿವೃದ್ಧಿಯ ಬಗ್ಗೆ ಮಾಹಿತಿ ಪಡೆದಿದ್ದೇವೆ. ಜಿಲ್ಲೆಯ ಎಲ್ಲ ನಗರಸಭೆಯ ಹಾಗೂ ಪುರಸಭಾ ಅಧಿಕಾರಿಗಳು ಆಗಮಿಸಿದ್ದು ಅವರ ಸಮಸ್ಯೆಯನ್ನು ಆಲಿಸಿ ಸೂಕ್ತವಾದ ಸಲಹೆ ಮತ್ತು ಪರಿಹಾರವನ್ನು ಸೂಚಿಸಿದ್ದಾಗಿ ಹೇಳಿದರು.</p>.<p>ಸಾರ್ವಜನಿಕರಿಗೆ ಸರ್ಕಾರದ ಸೇವೆಗಳು ಶೀಘ್ರವಾಗಿ, ಯಾವುದೇ ವಿಳಂಬ ಅಥವಾ ತೊಂದರೆಯಿಲ್ಲದೆ ಸುಗಮವಾಗಿ ಸಿಗಬೇಕು. ಸಾರ್ವಜನಿಕ ಕುಂದುಕೊರತೆಗಳು ತ್ವರಿತವಾಗಿ ವಿಲೇವಾರಿ ಆಗಬೇಕು ಎನ್ನುವುದು ನಮ್ಮ ಆಶಯ ಎಂದರು.</p>.<p>ಉಪವಿಭಾಗಾಧಿಕಾರಿ ರಘುನಂದನ್, ತಹಶೀಲ್ದಾರ್ ಬಿ.ಎಸ್. ರಾಜೀವ್, ಯೋಜನಾ ನಿರ್ದೇಶಕಿ ರೇಣುಕಾ, ನಗರಸಭೆಯ ಪೌರಾಯುಕ್ತ ಶ್ರೀಕಾಂತ್, ಅಧ್ಯಕ್ಷೆ ಸುಮಿತ್ರಾ ರಮೇಶ್, ಉಪಾಧ್ಯಕ್ಷ ಅಫ್ಸರ್ ಪಾಷ, ರಾಜ್ಯ ಆಡಳಿತ ಸುಧಾರಣಾ ಆಯೋಗದ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ</strong>: ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಆದಾಯಕ್ಕಿಂತಲೂ ಹೆಚ್ಚಿನ ವೆಚ್ಚ ಆಗಿರುವುದು ಕಂಡುಬಂದಿದೆ ಎಂದು ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಟಿ.ಎಂ. ವಿಜಯಭಾಸ್ಕರ್<br />ತಿಳಿಸಿದರು.</p>.<p>ತಾಲ್ಲೂಕಿನ ಅಬ್ಲೂಡು ಮತ್ತು ಭಕ್ತರಹಳ್ಳಿ ಗ್ರಾಮ ಪಂಚಾಯಿತಿಗಳಿಗೆ ಹಾಗೂ ನಗರಸಭೆಗೆ ಭೇಟಿ ನೀಡಿ ಆಡಳಿತ ಸುಧಾರಣೆಯ ಬಗ್ಗೆ ಸಲಹೆ ಸೂಚನೆಗಳನ್ನು ಪಡೆದು ಮಾತನಾಡಿದರು.</p>.<p>ತಾಲ್ಲೂಕಿನ ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ₹6 ಲಕ್ಷ ಇದ್ದರೆ, ಆ ಗ್ರಾಮ ಪಂಚಾಯಿತಿಯ ವಿದ್ಯುತ್ ಬಿಲ್ ಬಾಕಿ ₹5 ಕೋಟಿಗಳಷ್ಟಿರುವುದು ಗಮನಕ್ಕೆ ಬಂದಿತು ಎಂದರು.</p>.<p>ನಗರಸಭೆಯು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಇಲ್ಲಿ ಪೌರ ಕಾರ್ಮಿಕರ ಸಂಬಳದ ವಿಳಂಬ ಮತ್ತು ಅಭಿವೃದ್ಧಿಯ ಬಗ್ಗೆ ಮಾಹಿತಿ ಪಡೆದಿದ್ದೇವೆ. ಜಿಲ್ಲೆಯ ಎಲ್ಲ ನಗರಸಭೆಯ ಹಾಗೂ ಪುರಸಭಾ ಅಧಿಕಾರಿಗಳು ಆಗಮಿಸಿದ್ದು ಅವರ ಸಮಸ್ಯೆಯನ್ನು ಆಲಿಸಿ ಸೂಕ್ತವಾದ ಸಲಹೆ ಮತ್ತು ಪರಿಹಾರವನ್ನು ಸೂಚಿಸಿದ್ದಾಗಿ ಹೇಳಿದರು.</p>.<p>ಸಾರ್ವಜನಿಕರಿಗೆ ಸರ್ಕಾರದ ಸೇವೆಗಳು ಶೀಘ್ರವಾಗಿ, ಯಾವುದೇ ವಿಳಂಬ ಅಥವಾ ತೊಂದರೆಯಿಲ್ಲದೆ ಸುಗಮವಾಗಿ ಸಿಗಬೇಕು. ಸಾರ್ವಜನಿಕ ಕುಂದುಕೊರತೆಗಳು ತ್ವರಿತವಾಗಿ ವಿಲೇವಾರಿ ಆಗಬೇಕು ಎನ್ನುವುದು ನಮ್ಮ ಆಶಯ ಎಂದರು.</p>.<p>ಉಪವಿಭಾಗಾಧಿಕಾರಿ ರಘುನಂದನ್, ತಹಶೀಲ್ದಾರ್ ಬಿ.ಎಸ್. ರಾಜೀವ್, ಯೋಜನಾ ನಿರ್ದೇಶಕಿ ರೇಣುಕಾ, ನಗರಸಭೆಯ ಪೌರಾಯುಕ್ತ ಶ್ರೀಕಾಂತ್, ಅಧ್ಯಕ್ಷೆ ಸುಮಿತ್ರಾ ರಮೇಶ್, ಉಪಾಧ್ಯಕ್ಷ ಅಫ್ಸರ್ ಪಾಷ, ರಾಜ್ಯ ಆಡಳಿತ ಸುಧಾರಣಾ ಆಯೋಗದ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>