1987ರಲ್ಲಿ ಸೈನ್ಯ ಸೇರಿದ್ದ ಶಿವಾನಂದ ಅವರಿಗೆ 1999ರ ಕಾರ್ಗಿಲ್ ಯುದ್ಧದಲ್ಲಿ ಜಮ್ಮು-ಕಾಶ್ಮೀರದ ಪೂಂಚ್ನಲ್ಲಿ ಕಾಲು ಮುರಿದಿತ್ತು. ಶಸ್ತ್ರಚಿಕಿತ್ಸೆ ಬಳಿಕ ಅವರನ್ನು ಸ್ವಗ್ರಾಮಕ್ಕೆ ಕಳಿಸಿ, ಜಮೀನು ಮಂಜೂರು ಮಾಡುವಂತೆ ಅಂದಿನ ಕರ್ನಲ್ ಎಂ.ಬಿ. ರಾಣಾ ಸರ್ಕಾರಕ್ಕೆ ಶಿಫಾರಸು ಪತ್ರ ಬರೆದಿದ್ದರು. 2001ರಲ್ಲಿ ಮತ್ತೆ ಕರ್ತವ್ಯಕ್ಕೆ ಹಾಜರಾಗಿ 2ವರ್ಷ ಗುಪ್ತಚರ ವಿಭಾಗದಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದಾರೆ.