<p><strong>ಚಿಕ್ಕಬಳ್ಳಾಪುರ</strong>: ನಗರದ ಹೊರವಲಯದ ಚೊಕ್ಕಹಳ್ಳಿ ಸಮೀಪ ಕಂದಾಯ ಸೇವೆಗಳ ಸಮರ್ಪಣಾ ಸಮಾವೇಶಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಚಾಲನೆ ನೀಡಿದರು.</p><p>ಜಿಲ್ಲೆಯ 154 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೋಡಿ ದುರಸ್ತಿ, ಇ ಪೌತಿ ಖಾತೆ, ಕಂದಾಯ ಗ್ರಾಮ ಮತ್ತು ಸಾಮಾಜಿಕ ಸೇವಾ ಭದ್ರತಾ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲಾಗುತ್ತದೆ. ಒಟ್ಟು 25 ಸಾವಿರ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಲಾಗುತ್ತದೆ.</p><p>ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ ಸುಧಾಕರ್ ಮಾತನಾಡಿ, ಕಂದಾಯ ಇಲಾಖೆಗೆ ಹೊಸ ದಿಕ್ಕು ತೋರಿಸಿರುವುದು ಕೃಷ್ಣ ಬೈರೇಗೌಡ. </p><p>ಸುಮಾರು 20 ವರ್ಷಗಳ ಕನಸು ಇದು. ಕಂದಾಯ ಇಲಾಖೆಯ ಸಮಸ್ಯೆಗಳ ಬಗ್ಗೆ ನಾನು ಕೃಷ್ಣ ಬೈರೇಗೌಡ ಅವರು ಬಹಳಷ್ಟು ಚರ್ಚಿಸಿದ್ದೇವೆ. ದುರಸ್ತಿ ಆಗಿಲ್ಲ ಪೋಡಿ ಆಗಿಲ್ಲ ಎಂದು ಜನರು ಸಮಸ್ಯೆ ಹೇಳಿಕೊಳ್ಳುತ್ತಿದ್ದರು. ಆ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ನಿಶ್ಚಯಿಸಿದ್ದೆವು ಎಂದರು.</p><p>ಪೌತಿ ಖಾತೆ ನಿರಂತರವಾಗಿ ಇರುವ ಸಮಸ್ಯೆ. ನಿಮ್ಮ ಮನೆ ಬಾಗಿಲಿಗೆ ಬಂದು ಅಧಿಕಾರಿಗಳು ಪೌತಿ ಖಾತೆ ಮಾಡಿಕೊಡುತ್ತಿದ್ದಾರೆ. ಹೀಗೆ ಕಂದಾಯ ಇಲಾಖೆ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲಾಗುತ್ತಿದೆ ಎಂದು ಹೇಳಿದರು.</p><p>ಶಾಸಕರಾದ ಪ್ರದೀಪ್ ಈಶ್ವರ್, ಕೆ.ಎಚ್.ಪುಟ್ಟ ಸ್ವಾಮಿಗೌಡ, ವಿವಿಧ ನಿಗಮಗಳ ಅಧ್ಯಕ್ಷರು, ಜಿಲ್ಲಾಧಿಕಾರಿ ಜಿ.ಪ್ರಭು, ಜಿ.ಪಂ ಸಿಇಒ ನವೀನ್ ಭಟ್ ಮತ್ತಿತರರು ಪಾಲ್ಗೊಂಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ನಗರದ ಹೊರವಲಯದ ಚೊಕ್ಕಹಳ್ಳಿ ಸಮೀಪ ಕಂದಾಯ ಸೇವೆಗಳ ಸಮರ್ಪಣಾ ಸಮಾವೇಶಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಚಾಲನೆ ನೀಡಿದರು.</p><p>ಜಿಲ್ಲೆಯ 154 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೋಡಿ ದುರಸ್ತಿ, ಇ ಪೌತಿ ಖಾತೆ, ಕಂದಾಯ ಗ್ರಾಮ ಮತ್ತು ಸಾಮಾಜಿಕ ಸೇವಾ ಭದ್ರತಾ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲಾಗುತ್ತದೆ. ಒಟ್ಟು 25 ಸಾವಿರ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಲಾಗುತ್ತದೆ.</p><p>ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ ಸುಧಾಕರ್ ಮಾತನಾಡಿ, ಕಂದಾಯ ಇಲಾಖೆಗೆ ಹೊಸ ದಿಕ್ಕು ತೋರಿಸಿರುವುದು ಕೃಷ್ಣ ಬೈರೇಗೌಡ. </p><p>ಸುಮಾರು 20 ವರ್ಷಗಳ ಕನಸು ಇದು. ಕಂದಾಯ ಇಲಾಖೆಯ ಸಮಸ್ಯೆಗಳ ಬಗ್ಗೆ ನಾನು ಕೃಷ್ಣ ಬೈರೇಗೌಡ ಅವರು ಬಹಳಷ್ಟು ಚರ್ಚಿಸಿದ್ದೇವೆ. ದುರಸ್ತಿ ಆಗಿಲ್ಲ ಪೋಡಿ ಆಗಿಲ್ಲ ಎಂದು ಜನರು ಸಮಸ್ಯೆ ಹೇಳಿಕೊಳ್ಳುತ್ತಿದ್ದರು. ಆ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ನಿಶ್ಚಯಿಸಿದ್ದೆವು ಎಂದರು.</p><p>ಪೌತಿ ಖಾತೆ ನಿರಂತರವಾಗಿ ಇರುವ ಸಮಸ್ಯೆ. ನಿಮ್ಮ ಮನೆ ಬಾಗಿಲಿಗೆ ಬಂದು ಅಧಿಕಾರಿಗಳು ಪೌತಿ ಖಾತೆ ಮಾಡಿಕೊಡುತ್ತಿದ್ದಾರೆ. ಹೀಗೆ ಕಂದಾಯ ಇಲಾಖೆ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲಾಗುತ್ತಿದೆ ಎಂದು ಹೇಳಿದರು.</p><p>ಶಾಸಕರಾದ ಪ್ರದೀಪ್ ಈಶ್ವರ್, ಕೆ.ಎಚ್.ಪುಟ್ಟ ಸ್ವಾಮಿಗೌಡ, ವಿವಿಧ ನಿಗಮಗಳ ಅಧ್ಯಕ್ಷರು, ಜಿಲ್ಲಾಧಿಕಾರಿ ಜಿ.ಪ್ರಭು, ಜಿ.ಪಂ ಸಿಇಒ ನವೀನ್ ಭಟ್ ಮತ್ತಿತರರು ಪಾಲ್ಗೊಂಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>