<p><strong>ಗೌರಿಬಿದನೂರು: </strong>ರಾಷ್ಟ್ರೀಯ ಹೆದ್ದಾರಿ 234 ರಸ್ತೆ ಅಭಿವೃದ್ಧಿ ಸ್ಥಗಿತಗೊಂಡಿದೆ. ಇದರಿಂದ ಮಂಚೇನಹಳ್ಳಿ ಮತ್ತು ಚಿಕ್ಕಬಳ್ಳಾಪುರ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದೆ. ಇದನ್ನು ದುರಸ್ತಿಗೊಳಿಸುವಂತೆ ಒತ್ತಾಯಿಸಿ ಮಂಗಳವಾರ ಮಂಚೇನಹಳ್ಳಿ ನಾಗರಿಕ ಹಿತರಕ್ಷಣಾ ವೇದಿಕೆಯಿಂದ ಮಂಚೇನಹಳ್ಳಿ ಬಂದ್ ಹಾಗೂ ರಸ್ತೆ ತಡೆ ನಡೆಸಲಾಯಿತು.</p>.<p>ಪ್ರತಿಭಟನೆಯ ನೇತೃತ್ವವನ್ನು ವಹಿಸಿದ್ದ ಮಾಜಿ ಜಿ.ಪಂ ಸದಸ್ಯ ಪಿ.ಎನ್.ಪ್ರಕಾಶ್ ಮಾತನಾಡಿ, ಕ್ಷೇತ್ರವನ್ನುಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತೇವೆ ಎಂಬ ಸುಳ್ಳು ಭರವಸೆ ನೀಡಿ ಮತ ನೀಡಿದ ಜನತೆಗೆ ದ್ರೋಹ ಬಗೆಯುತ್ತಿರುವ ಸಚಿವರು ತಮ್ಮ ಸ್ಥಾನಕ್ಕೆ ಅನರ್ಹರಾಗಿದ್ದಾರೆ. ಕ್ಷೇತ್ರದ ಜನರ ಹಿತವನ್ನು ಕಾಪಾಡುವಲ್ಲಿ ವಿಫಲರಾಗಿದ್ದಾರೆ. 5 ವರ್ಷ ಕಳೆದರೂ ಮುಖ್ಯ ರಸ್ತೆ ಕಾಮಗಾರಿ ಪೂರೈಸಲು ಸಾಧ್ಯವಾಗದವರು ಈ ಕೂಡಲೇ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದರು.</p>.<p>ರೈತ ಸಂಘದ ಮುಖಂಡ ಎಂ.ಆರ್.ಲಕ್ಷ್ಮಿನಾರಾಯಣ್ ಮಾತನಾಡಿ, ರಸ್ತೆ ಹದಗೆಟ್ಟಿದ್ದರಿಂದಾಗಿ ಈ ಭಾಗದಲ್ಲಿನ ರೈತರು, ವಿದ್ಯಾರ್ಥಿಗಳು, ಕಾರ್ಮಿಕರಿಗೆ ಸಂಕಷ್ಟ ಎದುರಾಗಿದೆ. ಸಚಿವ ಹಾಗೂ ಜಿಲ್ಲಾಧಿಕಾರಿಗೆ ಮನವಿ ನೀಡಿದ್ದರೂ ಪ್ರಯೋಜನವಾಗಿಲ್ಲ ಎಂದು ದೂರಿದರು.</p>.<p>ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಾಯಕ ಎಂಜಿನಿಯರ್ ಮಲ್ಲಿಕಾರ್ಜುನ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ಈ ಹಿಂದೆ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿಯ ಜವಾಬ್ದಾರಿ ಹೊತ್ತಿದ್ದ ಗುತ್ತಿಗೆದಾರರು ಕಾಮಗಾರಿಯನ್ನು ಅರ್ಧಕ್ಕೆ ಬಿಟ್ಟಿದ್ದರು. ಇದರಿಂದಾಗಿ ರಸ್ತೆ ದುರಸ್ತಿಯಾಗದೆ ತೊಂದರೆಯಾಗಿದೆ. ಪುನರ್ ಟೆಂಡರ್ಗೆ ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ. ಇದು ಸರ್ಕಾರದಿಂದ ಅನುಮೋದನೆಯಾದ ಬಳಿಕ ಶೀಘ್ರವಾಗಿ ರಸ್ತೆಯ ದುರಸ್ತಿ ಮಾಡಲಾಗುವುದು ಎಂದರು.</p>.<p>ಮುಖಂಡ ಎಚ್.ಸಿ.ನಾರಾಯಣಗೌಡ, ಕಲಂದರ್, ಗುರುಶಂಕರಯ್ಯ, ಜೆ.ಮೋಹನ್, ಪ್ರಭು, ಅಜಿತ್, ನರಸಿಂಹರೆಡ್ಡಿ, ಪ್ರಿಯಾಂಕ, ಕೆ.ಪ್ರಭಾ, ಗೀತಾ, ಉಪ್ಪರಹಳ್ಳಿ ಜಗನ್ನಾಥ್, ಮಸ್ತಾನ್, ವಿ.ಎನ್.ಕೃಷ್ಣಮೂರ್ತಿ, ಅನಿಲ್ ಕುಮಾರ್, ಗುಂಡಾಪುರ ಲೋಕೇಶ್ ಗೌಡ, ಸುಬ್ರಮಣಿ, ಹನುಮಂತು, ಮಧುಸೂದನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು: </strong>ರಾಷ್ಟ್ರೀಯ ಹೆದ್ದಾರಿ 234 ರಸ್ತೆ ಅಭಿವೃದ್ಧಿ ಸ್ಥಗಿತಗೊಂಡಿದೆ. ಇದರಿಂದ ಮಂಚೇನಹಳ್ಳಿ ಮತ್ತು ಚಿಕ್ಕಬಳ್ಳಾಪುರ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದೆ. ಇದನ್ನು ದುರಸ್ತಿಗೊಳಿಸುವಂತೆ ಒತ್ತಾಯಿಸಿ ಮಂಗಳವಾರ ಮಂಚೇನಹಳ್ಳಿ ನಾಗರಿಕ ಹಿತರಕ್ಷಣಾ ವೇದಿಕೆಯಿಂದ ಮಂಚೇನಹಳ್ಳಿ ಬಂದ್ ಹಾಗೂ ರಸ್ತೆ ತಡೆ ನಡೆಸಲಾಯಿತು.</p>.<p>ಪ್ರತಿಭಟನೆಯ ನೇತೃತ್ವವನ್ನು ವಹಿಸಿದ್ದ ಮಾಜಿ ಜಿ.ಪಂ ಸದಸ್ಯ ಪಿ.ಎನ್.ಪ್ರಕಾಶ್ ಮಾತನಾಡಿ, ಕ್ಷೇತ್ರವನ್ನುಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತೇವೆ ಎಂಬ ಸುಳ್ಳು ಭರವಸೆ ನೀಡಿ ಮತ ನೀಡಿದ ಜನತೆಗೆ ದ್ರೋಹ ಬಗೆಯುತ್ತಿರುವ ಸಚಿವರು ತಮ್ಮ ಸ್ಥಾನಕ್ಕೆ ಅನರ್ಹರಾಗಿದ್ದಾರೆ. ಕ್ಷೇತ್ರದ ಜನರ ಹಿತವನ್ನು ಕಾಪಾಡುವಲ್ಲಿ ವಿಫಲರಾಗಿದ್ದಾರೆ. 5 ವರ್ಷ ಕಳೆದರೂ ಮುಖ್ಯ ರಸ್ತೆ ಕಾಮಗಾರಿ ಪೂರೈಸಲು ಸಾಧ್ಯವಾಗದವರು ಈ ಕೂಡಲೇ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದರು.</p>.<p>ರೈತ ಸಂಘದ ಮುಖಂಡ ಎಂ.ಆರ್.ಲಕ್ಷ್ಮಿನಾರಾಯಣ್ ಮಾತನಾಡಿ, ರಸ್ತೆ ಹದಗೆಟ್ಟಿದ್ದರಿಂದಾಗಿ ಈ ಭಾಗದಲ್ಲಿನ ರೈತರು, ವಿದ್ಯಾರ್ಥಿಗಳು, ಕಾರ್ಮಿಕರಿಗೆ ಸಂಕಷ್ಟ ಎದುರಾಗಿದೆ. ಸಚಿವ ಹಾಗೂ ಜಿಲ್ಲಾಧಿಕಾರಿಗೆ ಮನವಿ ನೀಡಿದ್ದರೂ ಪ್ರಯೋಜನವಾಗಿಲ್ಲ ಎಂದು ದೂರಿದರು.</p>.<p>ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಾಯಕ ಎಂಜಿನಿಯರ್ ಮಲ್ಲಿಕಾರ್ಜುನ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ಈ ಹಿಂದೆ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿಯ ಜವಾಬ್ದಾರಿ ಹೊತ್ತಿದ್ದ ಗುತ್ತಿಗೆದಾರರು ಕಾಮಗಾರಿಯನ್ನು ಅರ್ಧಕ್ಕೆ ಬಿಟ್ಟಿದ್ದರು. ಇದರಿಂದಾಗಿ ರಸ್ತೆ ದುರಸ್ತಿಯಾಗದೆ ತೊಂದರೆಯಾಗಿದೆ. ಪುನರ್ ಟೆಂಡರ್ಗೆ ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ. ಇದು ಸರ್ಕಾರದಿಂದ ಅನುಮೋದನೆಯಾದ ಬಳಿಕ ಶೀಘ್ರವಾಗಿ ರಸ್ತೆಯ ದುರಸ್ತಿ ಮಾಡಲಾಗುವುದು ಎಂದರು.</p>.<p>ಮುಖಂಡ ಎಚ್.ಸಿ.ನಾರಾಯಣಗೌಡ, ಕಲಂದರ್, ಗುರುಶಂಕರಯ್ಯ, ಜೆ.ಮೋಹನ್, ಪ್ರಭು, ಅಜಿತ್, ನರಸಿಂಹರೆಡ್ಡಿ, ಪ್ರಿಯಾಂಕ, ಕೆ.ಪ್ರಭಾ, ಗೀತಾ, ಉಪ್ಪರಹಳ್ಳಿ ಜಗನ್ನಾಥ್, ಮಸ್ತಾನ್, ವಿ.ಎನ್.ಕೃಷ್ಣಮೂರ್ತಿ, ಅನಿಲ್ ಕುಮಾರ್, ಗುಂಡಾಪುರ ಲೋಕೇಶ್ ಗೌಡ, ಸುಬ್ರಮಣಿ, ಹನುಮಂತು, ಮಧುಸೂದನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>