<p><strong>ಶಿಡ್ಲಘಟ್ಟ:</strong> ಗ್ರಾಮಸ್ಥರ ಬಹಳ ವರ್ಷಗಳ ಬೇಡಿಕೆಯಾಗಿದ್ದ ರಸ್ತೆ ಡಾಂಬರೀಕರಣ ಕಾಮಗಾರಿ ನಡೆಯುತ್ತಿದ್ದು ಶೀಘ್ರದಲ್ಲೆ ಕಾಮಗಾರಿ ಮುಗಿದು ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.</p>.<p>ತಾಲ್ಲೂಕಿನ ಶಿಡ್ಲಘಟ್ಟ-ಚೀಮಂಗಲ ಮುಖ್ಯರಸ್ತೆಯಿಂದ ನಾರಾಯಣದಾಸರಹಳ್ಳಿ ಗ್ರಾಮಕ್ಕೆ ₹70 ಲಕ್ಷ ವೆಚ್ಚದಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣ, ಅಭಿವೃದ್ಧಿ ಹಾಗೂ ಡಾಂಬರೀಕರಣ ಕಾಮಗಾರಿಯನ್ನು ಶುಕ್ರವಾರ ವೀಕ್ಷಿಸಿ ಮಾತನಾಡಿದರು.</p>.<p>ಶಿಡ್ಲಘಟ್ಟ-ಚೀಮಂಗಲ ಮುಖ್ಯರಸ್ತೆಯಿಂದ ನಾರಾಯಣದಾಸರಹಳ್ಳಿವರೆಗೆ ಸಂಪರ್ಕಿಸುವ ರಸ್ತೆ ಬಹಳಷ್ಟು ವರ್ಷಗಳ ಹಿಂದೆ ಡಾಂಬರು ಹಾಕಿದ್ದು ರಸ್ತೆ ಹಾಳಾಗಿ ಸಂಚಾರಕ್ಕೆ ತೊಡಕಾಗಿತ್ತು. ಹಾಗಾಗಿ ಗ್ರಾಮಸ್ಥರು ರಸ್ತೆ ಅಭಿವೃದ್ಧಿಪಡಿಸಿ ಡಾಂಬರೀಕರಣ ಮಾಡಲು ಮನವಿ ಮಾಡಿದ್ದರು.</p>.<p>ಈ ಹಿನ್ನೆಲೆಯಲ್ಲಿ ರಸ್ತೆ ಅಭಿವೃದ್ಧಿ, ಅಗಲೀಕರಣ ಮತ್ತು ಡಾಂಬರೀಕರಣಕ್ಕಾಗಿ ₹70 ಲಕ್ಷ ಮಂಜೂರು ಮಾಡಿಸಿದ್ದು ಕಾಮಗಾರಿ ನಡೆಯುತ್ತಿದೆ. ಕಾಮಗಾರಿಯನ್ನು ಗುಣಮಟ್ಟ ಕಾಪಾಡಿಕೊಂಡು ನಿಗದಿತ ಸಮಯದೊಳಗೆ ಮುಗಿಸುವಂತೆ ಗುತ್ತಿಗೆದಾರರಿಗೆ ಮತ್ತು ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ನಿಮ್ಮೂರಿಗೆ ಸಂಪರ್ಕಿಸುವ ರಸ್ತೆ ಕಾಮಗಾರಿಯಾಗಿದ್ದು ಕಾಮಗಾರಿಯನ್ನು ನಿಮ್ಮ, ನಮ್ಮ ತೆರಿಗೆ ಹಣದಿಂದ ಮಾಡಲಾಗುತ್ತಿದೆ. ಕಾಮಗಾರಿಯ ಗುಣಮಟ್ಟದ ಬಗ್ಗೆ ಗಮನಿಸಬೇಕು. ಗುಣಮಟ್ಟದಲ್ಲಿ ಏನಾದರೂ ಹೆಚ್ಚು ಕಡಿಮೆ ಕಂಡು ಬಂದರೆ ಗಮನಕ್ಕೆ ತನ್ನಿ’ ಎಂದರು.</p>.<p>ಗ್ರಾಮಸ್ಥರೊಂದಿಗೆ ಗ್ರಾಮದ ಅಭಿವೃದ್ಧಿ, ಕೈಗೊಳ್ಳಬೇಕಾದ ಮೂಲ ಸೌಕರ್ಯಗಳು ಮತ್ತು ಕೈಗೊಂಡ ಕಾಮಗಾರಿಗಳ ಬಗ್ಗೆ ಚರ್ಚಿಸಿದರು. ಮುಖಂಡ ತಾದೂರು ರಘು, ಗ್ರಾಮಸ್ಥರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ:</strong> ಗ್ರಾಮಸ್ಥರ ಬಹಳ ವರ್ಷಗಳ ಬೇಡಿಕೆಯಾಗಿದ್ದ ರಸ್ತೆ ಡಾಂಬರೀಕರಣ ಕಾಮಗಾರಿ ನಡೆಯುತ್ತಿದ್ದು ಶೀಘ್ರದಲ್ಲೆ ಕಾಮಗಾರಿ ಮುಗಿದು ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.</p>.<p>ತಾಲ್ಲೂಕಿನ ಶಿಡ್ಲಘಟ್ಟ-ಚೀಮಂಗಲ ಮುಖ್ಯರಸ್ತೆಯಿಂದ ನಾರಾಯಣದಾಸರಹಳ್ಳಿ ಗ್ರಾಮಕ್ಕೆ ₹70 ಲಕ್ಷ ವೆಚ್ಚದಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣ, ಅಭಿವೃದ್ಧಿ ಹಾಗೂ ಡಾಂಬರೀಕರಣ ಕಾಮಗಾರಿಯನ್ನು ಶುಕ್ರವಾರ ವೀಕ್ಷಿಸಿ ಮಾತನಾಡಿದರು.</p>.<p>ಶಿಡ್ಲಘಟ್ಟ-ಚೀಮಂಗಲ ಮುಖ್ಯರಸ್ತೆಯಿಂದ ನಾರಾಯಣದಾಸರಹಳ್ಳಿವರೆಗೆ ಸಂಪರ್ಕಿಸುವ ರಸ್ತೆ ಬಹಳಷ್ಟು ವರ್ಷಗಳ ಹಿಂದೆ ಡಾಂಬರು ಹಾಕಿದ್ದು ರಸ್ತೆ ಹಾಳಾಗಿ ಸಂಚಾರಕ್ಕೆ ತೊಡಕಾಗಿತ್ತು. ಹಾಗಾಗಿ ಗ್ರಾಮಸ್ಥರು ರಸ್ತೆ ಅಭಿವೃದ್ಧಿಪಡಿಸಿ ಡಾಂಬರೀಕರಣ ಮಾಡಲು ಮನವಿ ಮಾಡಿದ್ದರು.</p>.<p>ಈ ಹಿನ್ನೆಲೆಯಲ್ಲಿ ರಸ್ತೆ ಅಭಿವೃದ್ಧಿ, ಅಗಲೀಕರಣ ಮತ್ತು ಡಾಂಬರೀಕರಣಕ್ಕಾಗಿ ₹70 ಲಕ್ಷ ಮಂಜೂರು ಮಾಡಿಸಿದ್ದು ಕಾಮಗಾರಿ ನಡೆಯುತ್ತಿದೆ. ಕಾಮಗಾರಿಯನ್ನು ಗುಣಮಟ್ಟ ಕಾಪಾಡಿಕೊಂಡು ನಿಗದಿತ ಸಮಯದೊಳಗೆ ಮುಗಿಸುವಂತೆ ಗುತ್ತಿಗೆದಾರರಿಗೆ ಮತ್ತು ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ನಿಮ್ಮೂರಿಗೆ ಸಂಪರ್ಕಿಸುವ ರಸ್ತೆ ಕಾಮಗಾರಿಯಾಗಿದ್ದು ಕಾಮಗಾರಿಯನ್ನು ನಿಮ್ಮ, ನಮ್ಮ ತೆರಿಗೆ ಹಣದಿಂದ ಮಾಡಲಾಗುತ್ತಿದೆ. ಕಾಮಗಾರಿಯ ಗುಣಮಟ್ಟದ ಬಗ್ಗೆ ಗಮನಿಸಬೇಕು. ಗುಣಮಟ್ಟದಲ್ಲಿ ಏನಾದರೂ ಹೆಚ್ಚು ಕಡಿಮೆ ಕಂಡು ಬಂದರೆ ಗಮನಕ್ಕೆ ತನ್ನಿ’ ಎಂದರು.</p>.<p>ಗ್ರಾಮಸ್ಥರೊಂದಿಗೆ ಗ್ರಾಮದ ಅಭಿವೃದ್ಧಿ, ಕೈಗೊಳ್ಳಬೇಕಾದ ಮೂಲ ಸೌಕರ್ಯಗಳು ಮತ್ತು ಕೈಗೊಂಡ ಕಾಮಗಾರಿಗಳ ಬಗ್ಗೆ ಚರ್ಚಿಸಿದರು. ಮುಖಂಡ ತಾದೂರು ರಘು, ಗ್ರಾಮಸ್ಥರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>