‘ಗುರುವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಐದು ದರೋಡೆಕೋರರ ತಂಡ ಸುರೇಂದ್ರ ಬಾಬು ಅವರ ಮನೆಯ ಕಿಟಕಿಯನ್ನು ಮುರಿದು, ಅದರ ಮೂಲಕ ಒಳ ಪ್ರವೇಶಿಸಿದ್ದಾರೆ. ಸುರೇಂದ್ರ ಅವರ ಮೇಲೆ ಹಲ್ಲೆ ಮಾಡಿ, ಕೈ, ಕಾಲುಗಳು ಕಟ್ಟಿಹಾಕಿ, ಬಾಯಿಗೆ ಬಟ್ಟೆ ತುರುಕಿ ಮಲಗಿಸಿದ್ದಾರೆ. ಮನೆಯಲ್ಲಿದ್ದ ಮೂರು ಬೀರು ಹಾಗೂ ಕಬ್ಬಿಣದ ಪೆಟ್ಟಿಗೆಯನ್ನು ರಾಡುಗಳಿಂದ ಮೀಟಿ ತೆಗೆದು ಆಭರಣ, ಹಣಕ್ಕಾಗಿ ತಡಕಾಡಿ, ಬೀರುಗಳಲ್ಲಿದ್ದ ಬಟ್ಟೆಗಳನ್ನು ಚೆಲ್ಲಾಪಿಲ್ಲಿ ಎಸೆದಿದ್ದಾರೆ’ ಎಂದು ಪೊಲೀಸರು ತಿಳಿಸಿದರು.