<p><strong>ಚಿಕ್ಕಬಳ್ಳಾಪುರ</strong>: ಅಯೋಧ್ಯೆಯಲ್ಲಿ ಬುಧವಾರ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನಡೆದ ಪ್ರಯುಕ್ತ ಜಿಲ್ಲೆಯಾದ್ಯಂತ ರಾಮನ ಭಕ್ತರು, ಬಿಜೆಪಿ, ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮನೆ ಮನೆಗಳಲ್ಲಿ, ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು.</p>.<p>ಜಿಲ್ಲೆಯ ಪ್ರಮುಖ ದೇವಾಲಯಗಳಲ್ಲಿ ಬುಧವಾರ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ಅನೇಕರು ಮನೆಗಳಲ್ಲಿ ದೀಪ ಬೆಳಗಿ, ಮನೆಗಳ ಮೇಲೆ ಭಗವಾ ಧ್ವಜಗಳನ್ನು ಕಟ್ಟಿ ಅಭಿಮಾನ ಮೆರೆದರು. ಕೆಲವೆಡೆ ಕರಸೇವಕರು ಮತ್ತವರ ಕುಟುಂಬದವರನ್ನು ಸನ್ಮಾನಿಸಲಾಯಿತು.</p>.<p>ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿರುವುದರಿಂದ ಜಿಲ್ಲೆಯಾದ್ಯಂತ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿ, ಕಟ್ಟೆಚ್ಚರ ವಹಿಸಿದ್ದರು. ಹೀಗಾಗಿ, ಸಾರ್ವಜನಿಕವಾಗಿ ಮೆರವಣಿಗೆ, ವಿಜಯೋತ್ಸವ ಆಚರಿಸಲು, ಸಿಹಿ ಹಂಚಲು ಪೊಲೀಸರು ಅವಕಾಶ ನೀಡಲಿಲ್ಲ.</p>.<p>ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಿ, ಜನರ ಓಡಾಟದ ಮೇಲೆ ನಿಗಾ ಇರಿಸಲಾಗಿತ್ತು. ಭದ್ರತೆಗಾಗಿ ಮೂರು ಜಿಲ್ಲಾ ಸಶಸ್ತ್ರ ಮೀಸಲು ಪಡೆಗಳು ಮತ್ತು ಒಂದು ರಾಜ್ಯ ಮೀಸಲು ಪೊಲೀಸ್ ಪಡೆ ಪೊಲೀಸರನ್ನು ನಿಯೋಜಿಸಲಾಗಿತ್ತು.</p>.<p>ಚಿಕ್ಕಬಳ್ಳಾಪುರದ 24ನೇ ವಾರ್ಡನಲ್ಲಿರುವ ಪ್ರಸನ್ನ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಬಿಜೆಪಿ, ವಿಶ್ವ ಹಿಂದೂ ಪರಿಷತ್, ಭಜರಂಗದಳದ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು.</p>.<p>ಬಿಜೆಪಿ ನಗರ ಘಕಟದ ಕಾರ್ಯದರ್ಶಿ ನರೇಂದ್ರಬಾಬು ಮಾತನಾಡಿ, ‘ಅಯೋಧ್ಯೆಯಲ್ಲಿ ನಿರ್ಮಾಣ ಆಗುವ ಶ್ರೀರಾಮ ಮಂದಿರವು ಭಾರತೀಯ ಬಹುಸಂಖ್ಯಾತ ಹಿಂದೂಗಳ ಸ್ವಾಭಿಮಾನದ ಸಂಕೇತ’ ಎಂದು ಹೇಳಿದರು.</p>.<p>‘ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಶಿಲಾನ್ಯಾಸ ಆಗುತ್ತಿರುವುದು ದೇಶದ ದೃಷ್ಟಿಕೋನ ಬದಲಾಗುತ್ತಿರುವ ಸಂಕೇತ. ರಾಮ ಮಂದಿರ ನಿರ್ಮಾಣಕ್ಕಾಗಿ ಬಿಜೆಪಿ ಮತ್ತು ಅನೇಕ ಸಂಘಟನೆಗಳು ಸಾಕಷ್ಟು ಚಳವಳಿ, ಹೋರಾಟಗಳು ನಡೆಸಿದ್ದವು. ಕರ ಸೇವಕರ ತ್ಯಾಗ ಬಲಿದಾನದಿಂದ ಪ್ರಸ್ತುತ ಮಂದಿರ ನಿರ್ಮಾಣವಾಗುತ್ತಿದೆ’ ಎಂದರು.</p>.<p>ಬಿಜೆಪಿ ಜಿಲ್ಲಾ ಘಟಕದ ಕಾರ್ಯದರ್ಶಿ ಅಶೋಕ್, ಮುಖಂಡರಾದ ಕೆ.ಎಲ್.ಸುರೇಶ್, ಜೆಸಿಬಿ ಮಂಜುನಾಥ್, ಬೀಡ ಸ್ವಾಮಿ, ಮಧುಚಂದ್ರ, ದಿವಾಕರ್ ಬಾಬು ಕೆ.ಎನ್.ಟಿ ಲಕ್ಷ್ಮಣ್,ಕೆ.ಎಲ್. ಜಗನ್ನಾಥ್, ನೂತನ್, ವಿಚ್ಪಿ ಶಿವಕುಮಾರ್, ಭಜರಂಗದಳ ಸುನೀಲ್ ವಿವೇಕ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ಅಯೋಧ್ಯೆಯಲ್ಲಿ ಬುಧವಾರ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನಡೆದ ಪ್ರಯುಕ್ತ ಜಿಲ್ಲೆಯಾದ್ಯಂತ ರಾಮನ ಭಕ್ತರು, ಬಿಜೆಪಿ, ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮನೆ ಮನೆಗಳಲ್ಲಿ, ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು.</p>.<p>ಜಿಲ್ಲೆಯ ಪ್ರಮುಖ ದೇವಾಲಯಗಳಲ್ಲಿ ಬುಧವಾರ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ಅನೇಕರು ಮನೆಗಳಲ್ಲಿ ದೀಪ ಬೆಳಗಿ, ಮನೆಗಳ ಮೇಲೆ ಭಗವಾ ಧ್ವಜಗಳನ್ನು ಕಟ್ಟಿ ಅಭಿಮಾನ ಮೆರೆದರು. ಕೆಲವೆಡೆ ಕರಸೇವಕರು ಮತ್ತವರ ಕುಟುಂಬದವರನ್ನು ಸನ್ಮಾನಿಸಲಾಯಿತು.</p>.<p>ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿರುವುದರಿಂದ ಜಿಲ್ಲೆಯಾದ್ಯಂತ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿ, ಕಟ್ಟೆಚ್ಚರ ವಹಿಸಿದ್ದರು. ಹೀಗಾಗಿ, ಸಾರ್ವಜನಿಕವಾಗಿ ಮೆರವಣಿಗೆ, ವಿಜಯೋತ್ಸವ ಆಚರಿಸಲು, ಸಿಹಿ ಹಂಚಲು ಪೊಲೀಸರು ಅವಕಾಶ ನೀಡಲಿಲ್ಲ.</p>.<p>ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಿ, ಜನರ ಓಡಾಟದ ಮೇಲೆ ನಿಗಾ ಇರಿಸಲಾಗಿತ್ತು. ಭದ್ರತೆಗಾಗಿ ಮೂರು ಜಿಲ್ಲಾ ಸಶಸ್ತ್ರ ಮೀಸಲು ಪಡೆಗಳು ಮತ್ತು ಒಂದು ರಾಜ್ಯ ಮೀಸಲು ಪೊಲೀಸ್ ಪಡೆ ಪೊಲೀಸರನ್ನು ನಿಯೋಜಿಸಲಾಗಿತ್ತು.</p>.<p>ಚಿಕ್ಕಬಳ್ಳಾಪುರದ 24ನೇ ವಾರ್ಡನಲ್ಲಿರುವ ಪ್ರಸನ್ನ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಬಿಜೆಪಿ, ವಿಶ್ವ ಹಿಂದೂ ಪರಿಷತ್, ಭಜರಂಗದಳದ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು.</p>.<p>ಬಿಜೆಪಿ ನಗರ ಘಕಟದ ಕಾರ್ಯದರ್ಶಿ ನರೇಂದ್ರಬಾಬು ಮಾತನಾಡಿ, ‘ಅಯೋಧ್ಯೆಯಲ್ಲಿ ನಿರ್ಮಾಣ ಆಗುವ ಶ್ರೀರಾಮ ಮಂದಿರವು ಭಾರತೀಯ ಬಹುಸಂಖ್ಯಾತ ಹಿಂದೂಗಳ ಸ್ವಾಭಿಮಾನದ ಸಂಕೇತ’ ಎಂದು ಹೇಳಿದರು.</p>.<p>‘ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಶಿಲಾನ್ಯಾಸ ಆಗುತ್ತಿರುವುದು ದೇಶದ ದೃಷ್ಟಿಕೋನ ಬದಲಾಗುತ್ತಿರುವ ಸಂಕೇತ. ರಾಮ ಮಂದಿರ ನಿರ್ಮಾಣಕ್ಕಾಗಿ ಬಿಜೆಪಿ ಮತ್ತು ಅನೇಕ ಸಂಘಟನೆಗಳು ಸಾಕಷ್ಟು ಚಳವಳಿ, ಹೋರಾಟಗಳು ನಡೆಸಿದ್ದವು. ಕರ ಸೇವಕರ ತ್ಯಾಗ ಬಲಿದಾನದಿಂದ ಪ್ರಸ್ತುತ ಮಂದಿರ ನಿರ್ಮಾಣವಾಗುತ್ತಿದೆ’ ಎಂದರು.</p>.<p>ಬಿಜೆಪಿ ಜಿಲ್ಲಾ ಘಟಕದ ಕಾರ್ಯದರ್ಶಿ ಅಶೋಕ್, ಮುಖಂಡರಾದ ಕೆ.ಎಲ್.ಸುರೇಶ್, ಜೆಸಿಬಿ ಮಂಜುನಾಥ್, ಬೀಡ ಸ್ವಾಮಿ, ಮಧುಚಂದ್ರ, ದಿವಾಕರ್ ಬಾಬು ಕೆ.ಎನ್.ಟಿ ಲಕ್ಷ್ಮಣ್,ಕೆ.ಎಲ್. ಜಗನ್ನಾಥ್, ನೂತನ್, ವಿಚ್ಪಿ ಶಿವಕುಮಾರ್, ಭಜರಂಗದಳ ಸುನೀಲ್ ವಿವೇಕ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>