ತಕ್ಷಣ ಟೆಂಡರ್ ಕರೆದು ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ.ಇದರ ಜೊತೆಗೆ ಇಕೊ ಟೂರಿಸಂ, ಸುತ್ತಮುತ್ತಲಿನ ಐದು ಬೆಟ್ಟಗಳಿಗೆ ಚಾರಣ ದಾರಿ, ಪುರಾತತ್ವ ಸ್ಮಾರಕ, ನೆಲ್ಲಿಕಾಯಿ ಬಸವಣ್ಣ ಮತ್ತು ಮಂಟಪಗಳ ಸಂರಕ್ಷಣೆ, ಸುಂದರೀಕರಣ ಸೇರಿದಂತೆ ವಿಶ್ವ ದರ್ಜೆಯ ಪ್ರವಾಸಿ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಮುಖ್ಯಮಂತ್ರಿಗಳು ಮಂಡಿಸಲಿರುವ ಆಯವ್ಯಯದಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.