<p><strong>ಶಿಡ್ಲಘಟ್ಟ</strong>: ತಾಲ್ಲೂಕಿನ ತಾದೂರು ಗ್ರಾಮದ ರೇಷ್ಮೆ ಸಾಕಾಣಿಕೆ ಮನೆಯೊಂದರಲ್ಲಿ ನಕಲಿ ಮದ್ಯ ತಯಾರಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಭಾನುವಾರ ಮುಂಜಾನೆ ದಾಳಿ ನಡೆಸಿದ ಅಬಕಾರಿ ಇಲಾಖೆಯ ಸಿಬ್ಬಂದಿ ₹ 10 ಲಕ್ಷ ಮೌಲ್ಯದ ನಕಲಿ ಮದ್ಯ, ಮದ್ಯಸಾರ, ಬಾಟಲಿ ಹಾಗೂ ಮುಚ್ಚಳಗಳನ್ನು ವಶಪಡಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.</p>.<p>ಟಿ.ಎಂ. ಮಂಜುನಾಥ್ ಬಂಧಿತ. ಅಬಕಾರಿ ಉಪ ಆಯುಕ್ತ ಜಿ.ಪಿ. ನರೇಂದ್ರಕುಮಾರ್ ನೇತೃತ್ವದ ಅಬಕಾರಿ ಇಲಾಖೆಯ ಸಿಬ್ಬಂದಿ ನಕಲಿ ಮದ್ಯ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ್ದಾರೆ. 1,290 ಲೀಟರ್ ಸ್ಪಿರಿಟ್ ಸೇರಿದಂತೆ 62 ಲೀಟರ್ ಬ್ಲೆಂಡ್, 32 ಕೆ.ಜಿಯಷ್ಟು ಕ್ಯಾಪ್, ಲೇಬಲ್ ಹಾಗೂ ತಯಾರಿಸಿಟ್ಟಿದ್ದ 37.800 ಲೀಟರ್ನಷ್ಟು ನಕಲಿ ಮದ್ಯ ವಶಪಡಿಸಿಕೊಂಡಿದ್ದಾರೆ.</p>.<p>ಅಬಕಾರಿ ಇನ್ಸ್ಪೆಕ್ಟರ್ ವಿಶ್ವನಾಥಬಾಬು, ಫಿರೋಜ್ಖಾನ್, ಲಂಕೇ ಹನುಮಯ್ಯ, ಶಂಕರಪ್ರಸಾದ್, ಮಂಜುಳಾ, ಸಿಬ್ಬಂದಿಯಾದ ನಿತಿನ್, ರಾಘವೇಂದ್ರ, ಕರಿಲಿಂಗ, ಪ್ರಶಾಂತ್, ರಾಘವೇಂದ್ರ ಪಾಟೀಲ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ</strong>: ತಾಲ್ಲೂಕಿನ ತಾದೂರು ಗ್ರಾಮದ ರೇಷ್ಮೆ ಸಾಕಾಣಿಕೆ ಮನೆಯೊಂದರಲ್ಲಿ ನಕಲಿ ಮದ್ಯ ತಯಾರಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಭಾನುವಾರ ಮುಂಜಾನೆ ದಾಳಿ ನಡೆಸಿದ ಅಬಕಾರಿ ಇಲಾಖೆಯ ಸಿಬ್ಬಂದಿ ₹ 10 ಲಕ್ಷ ಮೌಲ್ಯದ ನಕಲಿ ಮದ್ಯ, ಮದ್ಯಸಾರ, ಬಾಟಲಿ ಹಾಗೂ ಮುಚ್ಚಳಗಳನ್ನು ವಶಪಡಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.</p>.<p>ಟಿ.ಎಂ. ಮಂಜುನಾಥ್ ಬಂಧಿತ. ಅಬಕಾರಿ ಉಪ ಆಯುಕ್ತ ಜಿ.ಪಿ. ನರೇಂದ್ರಕುಮಾರ್ ನೇತೃತ್ವದ ಅಬಕಾರಿ ಇಲಾಖೆಯ ಸಿಬ್ಬಂದಿ ನಕಲಿ ಮದ್ಯ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ್ದಾರೆ. 1,290 ಲೀಟರ್ ಸ್ಪಿರಿಟ್ ಸೇರಿದಂತೆ 62 ಲೀಟರ್ ಬ್ಲೆಂಡ್, 32 ಕೆ.ಜಿಯಷ್ಟು ಕ್ಯಾಪ್, ಲೇಬಲ್ ಹಾಗೂ ತಯಾರಿಸಿಟ್ಟಿದ್ದ 37.800 ಲೀಟರ್ನಷ್ಟು ನಕಲಿ ಮದ್ಯ ವಶಪಡಿಸಿಕೊಂಡಿದ್ದಾರೆ.</p>.<p>ಅಬಕಾರಿ ಇನ್ಸ್ಪೆಕ್ಟರ್ ವಿಶ್ವನಾಥಬಾಬು, ಫಿರೋಜ್ಖಾನ್, ಲಂಕೇ ಹನುಮಯ್ಯ, ಶಂಕರಪ್ರಸಾದ್, ಮಂಜುಳಾ, ಸಿಬ್ಬಂದಿಯಾದ ನಿತಿನ್, ರಾಘವೇಂದ್ರ, ಕರಿಲಿಂಗ, ಪ್ರಶಾಂತ್, ರಾಘವೇಂದ್ರ ಪಾಟೀಲ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>