‘ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಲಾಗಿತ್ತು’ ಎನ್ನಲಾದ ₹ 4.80 ಕೋಟಿಯನ್ನು ಆದಾಯ ತೆರಿಗೆ ಮತ್ತು ಚುನಾವಣಾ ಅಧಿಕಾರಿಗಳು ಚುನಾವಣೆ ಹಿಂದಿನ ದಿನ ಬೆಂಗಳೂರಿನ ಮನೆಯೊಂದರಿಂದ ಜಪ್ತಿ ಮಾಡಿದ್ದರು. ಈ ಹಣವನ್ನು ವಾಪಸು ಕೊಡಿಸುವಂತೆ ಡಾ. ಕೆ. ಸುಧಾಕರ್, ಅಧಿಕಾರಿಗಳ ಮೇಲೆ ಪ್ರಭಾವ ಬೀರಲು ಯತ್ನಿಸಿದ್ದ ಕುರಿತು ಮಾದನಾಯಕನಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.