ಸಮಸ್ಯೆ ಅರಿವಿದ್ದರೂ ಚುನಾಯಿತ ಜನಪ್ರತಿನಿಧಿಗಳು, ಅಧಿಕಾರಿಗಳು ಮೌನಕ್ಕೆ ಶರಣಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸಾದಲಿ ಹೋಬಳಿ ಕೇಂದ್ರ. ಜನಸಂಖ್ಯೆಯೂ ಹೆಚ್ಚಿದೆ. ಕಳೆದ ಆರು ತಿಂಗಳಿಂದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾಯಂ ವೈದ್ಯರು ನೇಮಕವಾಗಿಲ್ಲ. ತುರ್ತು ಸಂದರ್ಭದಲ್ಲಿ 108 ವಾಹನ ಸಿಗುತ್ತಿಲ್ಲ. ರಾತ್ರಿ ವೇಳೆ ಜನರು ತುರ್ತು ಚಿಕಿತ್ಸೆಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಅಥವಾ ಖಾಸಗಿ ಆಸ್ಪತ್ರೆ ಅವಲಂಬಿಸಬೇಕಾದ ಪರಿಸ್ಥಿತಿ ಇದೆ.