<p><strong>ಚಿಕ್ಕಬಳ್ಳಾಪುರ:</strong> ಪೋಪ್ ಫ್ರಾನ್ಸಿಸ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಎರಡು ದಿನಗಳ ಕಾಲ ಶೋಕಾಚರಣೆ ಆಚರಿಸಲಾಗುತ್ತಿದೆ. ಈ ಪ್ರಯುಕ್ತ ಏ.23 ಮತ್ತು 24ರಂದು ನಗರದಲ್ಲಿ ಹಮ್ಮಿಕೊಂಡಿದ್ದ ಕನ್ನಡ ಭವನ ಉದ್ಘಾಟನೆ ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ.</p><p>ಮಂಗಳವಾರ ಸಂಜೆ ಈ ಕುರಿತು ಕಸಾಪ ಪದಾಧಿಕಾರಿಗಳು ಹಾಗೂ ಕನ್ನಡ ಸಂಘಟನೆಗಳ ಜೊತೆ ಸಭೆ ನಡೆಸಿದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಕಾರ್ಯಕ್ರಮ ಮುಂದೂಡಿಕೆಯನ್ನು ಪ್ರಕಟಿಸಿದರು.</p><p>‘ಈ ಕಾರ್ಯಕ್ರಮಗಳು ನಡೆಯುವ ಮುಂದಿನ ದಿನಾಂಕವನ್ನು ತಿಳಿಸಲಾಗುವುದು’ ಎಂದರು.</p><p>ಜಿಲ್ಲಾ ಮಟ್ಟದ 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಮತ್ತು ಕನ್ನಡ ಭವನ ಉದ್ಘಾಟನೆ ಪ್ರಯುಕ್ತ ಈಗಾಗಲೇ ಎಲ್ಲ ತಯಾರಿಗಳು ಸಹ ನಡೆದಿವೆ. ಆಹ್ವಾನ ಪತ್ರಿಕೆಗಳು ಹಂಚಿಕೆಯಾಗಿವೆ. ಊಟ ತಿಂಡಿ ವ್ಯವಸ್ಥೆಗೆ ತರಕಾರಿ ಹಾಗೂ ಆಹಾರ ಸಾಮಗ್ರಿಗಳನ್ನೂ ತರಲಾಗಿದೆ. ಹೋಳಿಗೆಗಳು ಸಹ ಸಿದ್ಧವಾಗಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಪೋಪ್ ಫ್ರಾನ್ಸಿಸ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಎರಡು ದಿನಗಳ ಕಾಲ ಶೋಕಾಚರಣೆ ಆಚರಿಸಲಾಗುತ್ತಿದೆ. ಈ ಪ್ರಯುಕ್ತ ಏ.23 ಮತ್ತು 24ರಂದು ನಗರದಲ್ಲಿ ಹಮ್ಮಿಕೊಂಡಿದ್ದ ಕನ್ನಡ ಭವನ ಉದ್ಘಾಟನೆ ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ.</p><p>ಮಂಗಳವಾರ ಸಂಜೆ ಈ ಕುರಿತು ಕಸಾಪ ಪದಾಧಿಕಾರಿಗಳು ಹಾಗೂ ಕನ್ನಡ ಸಂಘಟನೆಗಳ ಜೊತೆ ಸಭೆ ನಡೆಸಿದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಕಾರ್ಯಕ್ರಮ ಮುಂದೂಡಿಕೆಯನ್ನು ಪ್ರಕಟಿಸಿದರು.</p><p>‘ಈ ಕಾರ್ಯಕ್ರಮಗಳು ನಡೆಯುವ ಮುಂದಿನ ದಿನಾಂಕವನ್ನು ತಿಳಿಸಲಾಗುವುದು’ ಎಂದರು.</p><p>ಜಿಲ್ಲಾ ಮಟ್ಟದ 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಮತ್ತು ಕನ್ನಡ ಭವನ ಉದ್ಘಾಟನೆ ಪ್ರಯುಕ್ತ ಈಗಾಗಲೇ ಎಲ್ಲ ತಯಾರಿಗಳು ಸಹ ನಡೆದಿವೆ. ಆಹ್ವಾನ ಪತ್ರಿಕೆಗಳು ಹಂಚಿಕೆಯಾಗಿವೆ. ಊಟ ತಿಂಡಿ ವ್ಯವಸ್ಥೆಗೆ ತರಕಾರಿ ಹಾಗೂ ಆಹಾರ ಸಾಮಗ್ರಿಗಳನ್ನೂ ತರಲಾಗಿದೆ. ಹೋಳಿಗೆಗಳು ಸಹ ಸಿದ್ಧವಾಗಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>