<p><strong>ಚಿಂತಾಮಣಿ:</strong> ತಾಲ್ಲೂಕಿನ ಬಡಗವಾರಹಳ್ಳಿ ಬಳಿ ಶ್ರೀಗಂಧವನ್ನು ಕದ್ದು ಸಾಗಿಸುತ್ತಿದ್ದ ಗುಂಪಿನ ಮೇಲೆ ದಾಳಿ ನಡೆಸಿರುವ ಪೊಲೀಸರು ಇಬ್ಬರನ್ನು ಬಂಧಿಸಿ, ₹ 1.36 ಲಕ್ಷ ಮೌಲ್ಯದ 91 ಕೆ.ಜಿ ಶ್ರೀಗಂಧ ವಶಪಡಿಸಿಕೊಂಡಿದ್ದಾರೆ.</p>.<p>ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಶ್ರೀನಿವಾಸಪ್ಪ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಯೊಂದಿಗೆ ಕೆರೆಯ ಅಂಗಳಕ್ಕೆ ತೆರಳಿ ಪರಿಶೀಲಿಸಿದಾಗ ಗಂಧದ ಮರಗಳನ್ನು ಕದಿಯುತ್ತಿರುವುದು ಕಾಣಿಸಿದೆ. ತಂಡದಲ್ಲಿದ್ದ ಮತ್ತಿಬ್ಬರು ತಪ್ಪಿಸಿಕೊಂಡು ಹೋಗಿದ್ದಾರೆ.</p>.<p>ಬಶೆಟ್ಟಹಳ್ಳಿ ಹೋಬಳಿಯ ದೊಡ್ಡತೇಕಹಳ್ಳಿ ಗ್ರಾಮದ ಗಜೇಂದ್ರ, ಬಡಗವಾರಹಳ್ಳಿ ಗ್ರಾಮದ ವೆಂಕಟಸ್ವಾಮಿ ಬಂಧಿತರು. ಬಡಗವಾರಹಳ್ಳಿ ಗ್ರಾಮದ ಪ್ರಸಾದ್, ಕೋಲಾರ ತಾಲ್ಲೂಕಿನ ಕಾಕಿನೆತ್ತ ಗ್ರಾಮದ ಮುನಿರಾಜು ಪರಾರಿಯಾಗಿದ್ದಾರೆ.</p>.<p>ಆರೋಪಿಗಳು ಬೇರೆಡೆಯಿಂದ ಶ್ರೀಗಂಧ ಕದ್ದು ತಂದು ಇಲ್ಲಿ ಕತ್ತರಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸಬ್ಇನ್ಸ್ಪೆಕ್ಟರ್ ನರೇಶನಾಯಕ್, ಎಸ್.ನಾರಾಯಣಸ್ವಾಮಿ, ಸಿಬ್ಬಂದಿ ಸಿ.ಜಗದೀಶ್, ನರಸಿಂಹಯ್ಯ, ರಾಜೇಶ್ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ತಾಲ್ಲೂಕಿನ ಬಡಗವಾರಹಳ್ಳಿ ಬಳಿ ಶ್ರೀಗಂಧವನ್ನು ಕದ್ದು ಸಾಗಿಸುತ್ತಿದ್ದ ಗುಂಪಿನ ಮೇಲೆ ದಾಳಿ ನಡೆಸಿರುವ ಪೊಲೀಸರು ಇಬ್ಬರನ್ನು ಬಂಧಿಸಿ, ₹ 1.36 ಲಕ್ಷ ಮೌಲ್ಯದ 91 ಕೆ.ಜಿ ಶ್ರೀಗಂಧ ವಶಪಡಿಸಿಕೊಂಡಿದ್ದಾರೆ.</p>.<p>ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಶ್ರೀನಿವಾಸಪ್ಪ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಯೊಂದಿಗೆ ಕೆರೆಯ ಅಂಗಳಕ್ಕೆ ತೆರಳಿ ಪರಿಶೀಲಿಸಿದಾಗ ಗಂಧದ ಮರಗಳನ್ನು ಕದಿಯುತ್ತಿರುವುದು ಕಾಣಿಸಿದೆ. ತಂಡದಲ್ಲಿದ್ದ ಮತ್ತಿಬ್ಬರು ತಪ್ಪಿಸಿಕೊಂಡು ಹೋಗಿದ್ದಾರೆ.</p>.<p>ಬಶೆಟ್ಟಹಳ್ಳಿ ಹೋಬಳಿಯ ದೊಡ್ಡತೇಕಹಳ್ಳಿ ಗ್ರಾಮದ ಗಜೇಂದ್ರ, ಬಡಗವಾರಹಳ್ಳಿ ಗ್ರಾಮದ ವೆಂಕಟಸ್ವಾಮಿ ಬಂಧಿತರು. ಬಡಗವಾರಹಳ್ಳಿ ಗ್ರಾಮದ ಪ್ರಸಾದ್, ಕೋಲಾರ ತಾಲ್ಲೂಕಿನ ಕಾಕಿನೆತ್ತ ಗ್ರಾಮದ ಮುನಿರಾಜು ಪರಾರಿಯಾಗಿದ್ದಾರೆ.</p>.<p>ಆರೋಪಿಗಳು ಬೇರೆಡೆಯಿಂದ ಶ್ರೀಗಂಧ ಕದ್ದು ತಂದು ಇಲ್ಲಿ ಕತ್ತರಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸಬ್ಇನ್ಸ್ಪೆಕ್ಟರ್ ನರೇಶನಾಯಕ್, ಎಸ್.ನಾರಾಯಣಸ್ವಾಮಿ, ಸಿಬ್ಬಂದಿ ಸಿ.ಜಗದೀಶ್, ನರಸಿಂಹಯ್ಯ, ರಾಜೇಶ್ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>