<p><strong>ಚಿಂತಾಮಣಿ:</strong> ಶ್ರೀಗಂಧದ ಕಳ್ಳತನ ಪ್ರಕರಣ ಭೇದಿಸಿರುವ ತಾಲ್ಲೂಕಿನ ಬಟ್ಲಹಳ್ಳಿ ಠಾಣೆ ಪೊಲೀಸರು, ಎಂಟು ಮಂದಿ ಆರೋಪಿಗಳನ್ನು ಸೋಮವಾರ ಬಂಧಿಸಿದ್ದಾರೆ. </p>.<p>ಬಂಧಿತರದಿಂದ ₹3.20 ಲಕ್ಷ ಮೌಲ್ಯದ 32 ಕೆ.ಜಿ. ಶ್ರೀಗಂಧದ ಮರದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಬಂಧಿತರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಹೊಸಹಳ್ಳಿಯ ತೀರ್ಥಕುಮಾರ್ ಮತ್ತು ಮೂರ್ತಿ, ಮಾಯಸಂದ್ರದ ಗೌಸ್ ಪಾಷಾ ಮತ್ತು ಅಪ್ಸರ್ ಪಾಷಾ, ಮಾಯಸಂದ್ರ ತಾಲ್ಲೂಕಿನ ಬ್ಯಾಟರಹಳ್ಳಿಯ ಮನೋಜ್, ಹಾಸನದ ಚನ್ನರಾಯಪಟ್ಟಣ ತಾಲ್ಲೂಕಿನ ಕರಿಮಾರನಹಳ್ಳಿಯ ಭರತ್ ಮತ್ತು ಶಿವ, ವಿಜಯನಗರದ ಏಜಾಜ್ ಬಂಧಿತರು. </p>.<p>ಆರೋಪಿಗಳನ್ನು ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಟ್ಲಹಳ್ಳಿ ಪಿಎಸ್ಐ ಶಿವಕುಮಾರ್ ಸಿಬ್ಬಂದಿ ಮಂಜುನಾಥ್, ವೆಂಕಟೇಶ್, ಪ್ರವೀಣ್ ಕುಮಾರ್, ನವೀನ್ ಕುಮಾರ್ ತಂಡದಲ್ಲಿದ್ದರು. </p>.<p>ನಲ್ಲಗುಟ್ಟಹಳ್ಳಿ, ಬೊಮ್ಮೆಪಲ್ಲಿ ಗ್ರಾಮಗಳಲ್ಲಿ ಶ್ರೀಗಂಧದ ಮರಗಳ ತೋಟದಲ್ಲಿ ಶ್ರೀಗಂಧದ ಮರಗಳನ್ನು ಬುಡ ಸಹಿತ ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ಜುಲೈ 22 ಮತ್ತು 24ರಂದು ದೂರು ದಾಖಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ಶ್ರೀಗಂಧದ ಕಳ್ಳತನ ಪ್ರಕರಣ ಭೇದಿಸಿರುವ ತಾಲ್ಲೂಕಿನ ಬಟ್ಲಹಳ್ಳಿ ಠಾಣೆ ಪೊಲೀಸರು, ಎಂಟು ಮಂದಿ ಆರೋಪಿಗಳನ್ನು ಸೋಮವಾರ ಬಂಧಿಸಿದ್ದಾರೆ. </p>.<p>ಬಂಧಿತರದಿಂದ ₹3.20 ಲಕ್ಷ ಮೌಲ್ಯದ 32 ಕೆ.ಜಿ. ಶ್ರೀಗಂಧದ ಮರದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಬಂಧಿತರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಹೊಸಹಳ್ಳಿಯ ತೀರ್ಥಕುಮಾರ್ ಮತ್ತು ಮೂರ್ತಿ, ಮಾಯಸಂದ್ರದ ಗೌಸ್ ಪಾಷಾ ಮತ್ತು ಅಪ್ಸರ್ ಪಾಷಾ, ಮಾಯಸಂದ್ರ ತಾಲ್ಲೂಕಿನ ಬ್ಯಾಟರಹಳ್ಳಿಯ ಮನೋಜ್, ಹಾಸನದ ಚನ್ನರಾಯಪಟ್ಟಣ ತಾಲ್ಲೂಕಿನ ಕರಿಮಾರನಹಳ್ಳಿಯ ಭರತ್ ಮತ್ತು ಶಿವ, ವಿಜಯನಗರದ ಏಜಾಜ್ ಬಂಧಿತರು. </p>.<p>ಆರೋಪಿಗಳನ್ನು ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಟ್ಲಹಳ್ಳಿ ಪಿಎಸ್ಐ ಶಿವಕುಮಾರ್ ಸಿಬ್ಬಂದಿ ಮಂಜುನಾಥ್, ವೆಂಕಟೇಶ್, ಪ್ರವೀಣ್ ಕುಮಾರ್, ನವೀನ್ ಕುಮಾರ್ ತಂಡದಲ್ಲಿದ್ದರು. </p>.<p>ನಲ್ಲಗುಟ್ಟಹಳ್ಳಿ, ಬೊಮ್ಮೆಪಲ್ಲಿ ಗ್ರಾಮಗಳಲ್ಲಿ ಶ್ರೀಗಂಧದ ಮರಗಳ ತೋಟದಲ್ಲಿ ಶ್ರೀಗಂಧದ ಮರಗಳನ್ನು ಬುಡ ಸಹಿತ ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ಜುಲೈ 22 ಮತ್ತು 24ರಂದು ದೂರು ದಾಖಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>