<p>ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲ್ಲೂಕಿನ ಕೆಂಚಾರ್ಲಹಳ್ಳಿ, ಬಟ್ಲಹಳ್ಳಿ ಹಾಗೂ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ವಿವಿಧ ಕಡೆಗಳಲ್ಲಿ ರೈತರು ಬೆಳೆದಿದ್ದ ಶ್ರೀಗಂಧದ ಮರಗಳನ್ನು ಕಳ್ಳತನ ಮಾಡಿದ ಆರೋಪದ ಮೇಲೆ 7 ಮಂದಿಯನ್ನು ಚಿಂತಾಮಣಿ ಪೊಲೀಸರು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ತಿಳಿಸಿದರು.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಂತಾಮಣಿ ತಾಲ್ಲೂಕಿನ ದಬರಗಾನಹಳ್ಳಿಯ ಮುನಿರಾಜು, ಪ್ರಸನ್ನ, ಪ್ರದೀಪ್, ಕೃಷ್ಣಮೂರ್ತಿ, ನರಸಿಂಹಮೂರ್ತಿ, ಮುನಿಯಪ್ಪ, ಹೊಸಕೋಟೆ ತಾಲ್ಲೂಕಿನ ಕಟ್ಟಿಗೇನಹಳ್ಳಿಯ ಮಹಮ್ಮದ್ ಇಸ್ಮಾಯಿಲ್<br />ಬಂಧಿತರು.</p>.<p>ಸೋಮವಾರ ಸಂಜೆ ಚಿಂತಾಮಣಿ ಗ್ರಾಮಾಂತರ ಠಾಣೆ ಪಿಎಸ್ಐ ನಾರಾಯಣಸ್ವಾಮಿ ಹಾಗೂ ಸಿಬ್ಬಂದಿ ಕಡಪ–ಬೆಂಗಳೂರು ರಸ್ತೆಯ ಮಾಡಿಕೆರೆ ಕ್ರಾಸ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಐದು ಮಂದಿ ದ್ವಿಚಕ್ರವಾಹನದಲ್ಲಿ ಮದನಪಲ್ಲಿ ಕಡೆಯಿಂದ ಬರುತ್ತಿದ್ದರು. ಪೊಲೀಸರನ್ನು ಕಂಡ ತಕ್ಷಣ ವಾಹನಗಳನ್ನು ತಿರುಗಿಸಿಕೊಂಡಿದ್ದಾರೆ ಎಂದು ಹೇಳಿದರು.</p>.<p>ಇದನ್ನು ಕಂಡ ಪೊಲೀಸರು ತಕ್ಷಣವೇ ಇವರನ್ನು ಬೆನ್ನತ್ತಿದರು. ಈ ವೇಳೆ ದ್ವಿಚಕ್ರವಾಹನದಿಂದ ವ್ಯಕ್ತಿಯೊಬ್ಬ ಗೋಣಿ ಚೀಲವನ್ನು ಬೀಳಿಸಿದ್ದಾನೆ. ಇವರನ್ನು ವಶಕ್ಕೆ ಪಡೆದು ಗೋಣಿಚೀಲ ಪರಿಶೀಲಿಸಿದಾಗ ಅದರಲ್ಲಿ ಶ್ರೀಗಂಧದ ತುಂಡುಗಳು ಇದ್ದವು. ಬಂಧಿತರು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧೆಡೆ ರೈತರ ತೋಟಗಳಲ್ಲಿದ್ದ ಶ್ರೀಗಂಧದ ಮರಗಳನ್ನು ಕಳ್ಳತನ ಮಾಡಿದ್ದಾರೆ ಎಂದು ಹೇಳಿದರು.</p>.<p>ಮೊದಲಿಗೆ ಐದು ಮಂದಿಯನ್ನು ಬಂಧಿಸಿದ್ದು ಅವರು ನೀಡಿದ ಮಾಹಿತಿ ಆಧರಿಸಿ ಮತ್ತಿಬ್ಬರನ್ನು ಬಂಧಿಸಲಾಗಿದೆ. ಶ್ರೀಗಂಧವನ್ನು ಯಾರಿಗೆ ಮಾರಾಟ ಮಾಡುತ್ತಿದ್ದರು. ಮತ್ತಷ್ಟು ಮಂದಿ ಈ ತಂಡದಲ್ಲಿ ಇದ್ದಾರೆಯೇ ಎನ್ನುವುದು ಮತ್ತಷ್ಟು ತನಿಖೆಯಿಂದ ತಿಳಿಯಲಿದೆ ಎಂದು ಹೇಳಿದರು.</p>.<p>ಒಟ್ಟು 70 ಕೆ.ಜಿ ಗಂಧವನ್ನು ವಶಕ್ಕೆ ಪಡೆದಿದ್ದು, ಇದರ ಮೌಲ್ಯ ₹ 21 ಲಕ್ಷ ಎಂದು ಅಂದಾಜಿಸಲಾಗಿದೆ.ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ಬಹುಮಾನನೀಡಲಾಗುವುದು ಎಂದರು.</p>.<p>ಚಿಂತಾಮಣಿ ಡಿವೈಎಸ್ಪಿ ಕುಶಾಲ್ ಚೌಕ್ಸೆ, ಚಿಂತಾಮಣಿ ನಗರ ಠಾಣೆ ಇನ್ಸ್ಪೆಕ್ಟರ್ ಎ.ಎಸ್. ವಿಶ್ವಾಸ್, ಕೆಂಚಾರ್ಲಹಳ್ಳಿ ಪಿಎಸ್ಐ ಪುರುಷೋತ್ತಮ್, ಗ್ರಾಮಾಂತರ ಠಾಣೆ ಪಿಎಸ್ಐ ನಾರಾಯಣಸ್ವಾಮಿ ಸುದ್ದಿಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲ್ಲೂಕಿನ ಕೆಂಚಾರ್ಲಹಳ್ಳಿ, ಬಟ್ಲಹಳ್ಳಿ ಹಾಗೂ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ವಿವಿಧ ಕಡೆಗಳಲ್ಲಿ ರೈತರು ಬೆಳೆದಿದ್ದ ಶ್ರೀಗಂಧದ ಮರಗಳನ್ನು ಕಳ್ಳತನ ಮಾಡಿದ ಆರೋಪದ ಮೇಲೆ 7 ಮಂದಿಯನ್ನು ಚಿಂತಾಮಣಿ ಪೊಲೀಸರು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ತಿಳಿಸಿದರು.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಂತಾಮಣಿ ತಾಲ್ಲೂಕಿನ ದಬರಗಾನಹಳ್ಳಿಯ ಮುನಿರಾಜು, ಪ್ರಸನ್ನ, ಪ್ರದೀಪ್, ಕೃಷ್ಣಮೂರ್ತಿ, ನರಸಿಂಹಮೂರ್ತಿ, ಮುನಿಯಪ್ಪ, ಹೊಸಕೋಟೆ ತಾಲ್ಲೂಕಿನ ಕಟ್ಟಿಗೇನಹಳ್ಳಿಯ ಮಹಮ್ಮದ್ ಇಸ್ಮಾಯಿಲ್<br />ಬಂಧಿತರು.</p>.<p>ಸೋಮವಾರ ಸಂಜೆ ಚಿಂತಾಮಣಿ ಗ್ರಾಮಾಂತರ ಠಾಣೆ ಪಿಎಸ್ಐ ನಾರಾಯಣಸ್ವಾಮಿ ಹಾಗೂ ಸಿಬ್ಬಂದಿ ಕಡಪ–ಬೆಂಗಳೂರು ರಸ್ತೆಯ ಮಾಡಿಕೆರೆ ಕ್ರಾಸ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಐದು ಮಂದಿ ದ್ವಿಚಕ್ರವಾಹನದಲ್ಲಿ ಮದನಪಲ್ಲಿ ಕಡೆಯಿಂದ ಬರುತ್ತಿದ್ದರು. ಪೊಲೀಸರನ್ನು ಕಂಡ ತಕ್ಷಣ ವಾಹನಗಳನ್ನು ತಿರುಗಿಸಿಕೊಂಡಿದ್ದಾರೆ ಎಂದು ಹೇಳಿದರು.</p>.<p>ಇದನ್ನು ಕಂಡ ಪೊಲೀಸರು ತಕ್ಷಣವೇ ಇವರನ್ನು ಬೆನ್ನತ್ತಿದರು. ಈ ವೇಳೆ ದ್ವಿಚಕ್ರವಾಹನದಿಂದ ವ್ಯಕ್ತಿಯೊಬ್ಬ ಗೋಣಿ ಚೀಲವನ್ನು ಬೀಳಿಸಿದ್ದಾನೆ. ಇವರನ್ನು ವಶಕ್ಕೆ ಪಡೆದು ಗೋಣಿಚೀಲ ಪರಿಶೀಲಿಸಿದಾಗ ಅದರಲ್ಲಿ ಶ್ರೀಗಂಧದ ತುಂಡುಗಳು ಇದ್ದವು. ಬಂಧಿತರು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧೆಡೆ ರೈತರ ತೋಟಗಳಲ್ಲಿದ್ದ ಶ್ರೀಗಂಧದ ಮರಗಳನ್ನು ಕಳ್ಳತನ ಮಾಡಿದ್ದಾರೆ ಎಂದು ಹೇಳಿದರು.</p>.<p>ಮೊದಲಿಗೆ ಐದು ಮಂದಿಯನ್ನು ಬಂಧಿಸಿದ್ದು ಅವರು ನೀಡಿದ ಮಾಹಿತಿ ಆಧರಿಸಿ ಮತ್ತಿಬ್ಬರನ್ನು ಬಂಧಿಸಲಾಗಿದೆ. ಶ್ರೀಗಂಧವನ್ನು ಯಾರಿಗೆ ಮಾರಾಟ ಮಾಡುತ್ತಿದ್ದರು. ಮತ್ತಷ್ಟು ಮಂದಿ ಈ ತಂಡದಲ್ಲಿ ಇದ್ದಾರೆಯೇ ಎನ್ನುವುದು ಮತ್ತಷ್ಟು ತನಿಖೆಯಿಂದ ತಿಳಿಯಲಿದೆ ಎಂದು ಹೇಳಿದರು.</p>.<p>ಒಟ್ಟು 70 ಕೆ.ಜಿ ಗಂಧವನ್ನು ವಶಕ್ಕೆ ಪಡೆದಿದ್ದು, ಇದರ ಮೌಲ್ಯ ₹ 21 ಲಕ್ಷ ಎಂದು ಅಂದಾಜಿಸಲಾಗಿದೆ.ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ಬಹುಮಾನನೀಡಲಾಗುವುದು ಎಂದರು.</p>.<p>ಚಿಂತಾಮಣಿ ಡಿವೈಎಸ್ಪಿ ಕುಶಾಲ್ ಚೌಕ್ಸೆ, ಚಿಂತಾಮಣಿ ನಗರ ಠಾಣೆ ಇನ್ಸ್ಪೆಕ್ಟರ್ ಎ.ಎಸ್. ವಿಶ್ವಾಸ್, ಕೆಂಚಾರ್ಲಹಳ್ಳಿ ಪಿಎಸ್ಐ ಪುರುಷೋತ್ತಮ್, ಗ್ರಾಮಾಂತರ ಠಾಣೆ ಪಿಎಸ್ಐ ನಾರಾಯಣಸ್ವಾಮಿ ಸುದ್ದಿಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>