ಅರಣ್ಯ ಇಲಾಖೆ ಅನುಮತಿ ಪಡೆದು, ಮರಿಮಾಕಲಹಳ್ಳಿಯ ನನ್ನ ಜಮೀನಿನಲ್ಲಿ ಒಂಬತ್ತು ವರ್ಷಗಳ ಹಿಂದೆ 170 ಶ್ರೀಗಂಧದ ಸಸಿಗಳನ್ನು ನಾಟಿ ಮಾಡಿ ಬೆಳೆಸಿದ್ದೆ. ಆದರೆ, ಫೆಬ್ರುವರಿ 24ರಂದು ಬೆಳಿಗ್ಗೆ ಒಂಬತ್ತು ಗಂಟೆಗೆ ಜಮೀನಿನ ಬಳಿ ಬಂದಾಗ 170 ಮರಗಳ ಪೈಕಿ ಆರು ಮರಗಳನ್ನು ಗರಗಸದಿಂದ ಕತ್ತರಿಸಿ ಕಳ್ಳತನ ಮಾಡಿಕೊಂಡು ಹೋಗಿರುವುದು ಗೊತ್ತಾಗಿದೆ.
ಈ ಹಿನ್ನೆಲೆಯಲ್ಲಿ ಕಳ್ಳತನ ಮಾಡಿಕೊಂಡು ಹೋಗಿರುವವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.