<p><strong>ಕೈವಾರ</strong>: ಕೈವಾರದಲ್ಲಿ ಗುರುವಾರ ಮಕರ ಸಂಕ್ರಾಂತಿ ಪ್ರಯುಕ್ತ ಯೋಗಿನಾರೇಯಣ ಮಠ, ಅಮರನಾರೇಯಣ ದೇವಾಲಯ, ಭೀಮಲಿಂಗೇಶ್ವರ ದೇವಾಲಯಗಳಲ್ಲಿ ವಿಶೇಷ ಅಲಂಕಾರ, ಪೂಜೆ ಹಮ್ಮಿಕೊಳ್ಳಲಾಗಿತ್ತು.</p>.<p>ರಾಜ್ಯ ಹಾಗೂ ನೆರೆಹೊರೆಯ ರಾಜ್ಯಗಳು ಸೇರಿದಂತೆ ವಿವಿಧೆಡೆಗಳಿಂದ ವಾಹನಗಳಲ್ಲಿ ಆಗಮಿಸಿದ್ದ ಭಕ್ತರು ದೇವಾಲಯಗಳಿಗೆ ಎಡತಾಕುತ್ತಿದ್ದರು. ಸರತಿಯ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದರು.</p>.<p>ಸಂಕ್ರಾಂತಿಯ ಸಂದರ್ಭದಲ್ಲಿ ಯೋಗಿನಾರೇಯಣ ಯತೀಂದ್ರರಿಗೆ ಮಾಲೆಯನ್ನು ಹಾಕುವ ಸಂಪ್ರದಾಯ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಪ್ರತಿವರ್ಷ ತಮಿಳುನಾಡಿನ ಹೊಸೂರು, ಕೃಷ್ಣಗಿರಿ, ಆಂಧ್ರಪ್ರದೇಶ ಕದಿರಿ, ಧರ್ಮಾವರಂ, ರಾಜ್ಯದ ಆನೇಕಲ್, ಮಾಲೂರು ಕಡೆಗಳಿಂದ ಭಕ್ತರು ಮಾಲೆ ಧರಿಸಿ, ಸಂಕೀರ್ತನಾ ಪಾದಯಾತ್ರೆಯ ಮೂಲಕ ಕೈವಾರಕ್ಕೆ ಆಗಮಿಸುತ್ತಾರೆ. ಈ ಬಾರಿಯೂ ಮಾಲಾಧಾರಿಗಳು ಮಠಕ್ಕೆ ಬಂದು ತಾತಯ್ಯರ ಸೇವೆಯಲ್ಲಿ ಪಾಲ್ಗೊಂಡಿದ್ದರು. ಆನೇಕಲ್ನ ಚಿಕ್ಕತಿಮ್ಮಸಂದ್ರ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಭಕ್ತರು ಮಾಲೆ ಧರಿಸಿ ಕೈವಾರಕ್ಕೆ ಆಗಮಿಸಿದ್ದರು.</p>.<p>ಸಂಕ್ರಾಂತಿ ಹಬ್ಬದಂದು ತಾತಯ್ಯರ ಮಠದ ದೇವಾಲಯದ ಪ್ರಾಕಾರೋತ್ಸವದಲ್ಲಿ ಭಕ್ತರು ಭಾಗವಹಿಸಿದ್ದರು. ತಾತಯ್ಯರ ಬೃಂದಾವನದಲ್ಲಿ ಉತ್ಸವಮೂರ್ತಿಗೆ ಪೂಜೆ ಸಲ್ಲಿಸಲಾಯಿತು. ಮಾಲಾಧಾರಿಗಳು ಮಠದ ಆವರಣದಲ್ಲಿ ಸಂಕೀರ್ತನಾ ಭಜನೆ ಮಾಡಿದರು. ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ಗೋಪೂಜೆ ಹಮ್ಮಿಕೊಳ್ಳಲಾಗಿತ್ತು. ಗ್ರಾಮದ ಜನರು ರಾಸುಗಳನ್ನು ಸಿಂಗರಿಸಿ ಮಠಕ್ಕೆ ಕರೆತಂದು ಪೂಜೆ ಸಲ್ಲಿಸಿದರು. ಯತೀಂದ್ರರ ಮಾಲಾಧಾರಿಗಳಾಗಿದ್ದ ಭಕ್ತರು ಕೈವಾರದ ಪ್ರಮುಖ ರಸ್ತೆಗಳಲ್ಲಿ ಸಂಕೀರ್ತನೆಯೊಂದಿಗೆ ಭಜನೆಯಲ್ಲಿ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೈವಾರ</strong>: ಕೈವಾರದಲ್ಲಿ ಗುರುವಾರ ಮಕರ ಸಂಕ್ರಾಂತಿ ಪ್ರಯುಕ್ತ ಯೋಗಿನಾರೇಯಣ ಮಠ, ಅಮರನಾರೇಯಣ ದೇವಾಲಯ, ಭೀಮಲಿಂಗೇಶ್ವರ ದೇವಾಲಯಗಳಲ್ಲಿ ವಿಶೇಷ ಅಲಂಕಾರ, ಪೂಜೆ ಹಮ್ಮಿಕೊಳ್ಳಲಾಗಿತ್ತು.</p>.<p>ರಾಜ್ಯ ಹಾಗೂ ನೆರೆಹೊರೆಯ ರಾಜ್ಯಗಳು ಸೇರಿದಂತೆ ವಿವಿಧೆಡೆಗಳಿಂದ ವಾಹನಗಳಲ್ಲಿ ಆಗಮಿಸಿದ್ದ ಭಕ್ತರು ದೇವಾಲಯಗಳಿಗೆ ಎಡತಾಕುತ್ತಿದ್ದರು. ಸರತಿಯ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದರು.</p>.<p>ಸಂಕ್ರಾಂತಿಯ ಸಂದರ್ಭದಲ್ಲಿ ಯೋಗಿನಾರೇಯಣ ಯತೀಂದ್ರರಿಗೆ ಮಾಲೆಯನ್ನು ಹಾಕುವ ಸಂಪ್ರದಾಯ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಪ್ರತಿವರ್ಷ ತಮಿಳುನಾಡಿನ ಹೊಸೂರು, ಕೃಷ್ಣಗಿರಿ, ಆಂಧ್ರಪ್ರದೇಶ ಕದಿರಿ, ಧರ್ಮಾವರಂ, ರಾಜ್ಯದ ಆನೇಕಲ್, ಮಾಲೂರು ಕಡೆಗಳಿಂದ ಭಕ್ತರು ಮಾಲೆ ಧರಿಸಿ, ಸಂಕೀರ್ತನಾ ಪಾದಯಾತ್ರೆಯ ಮೂಲಕ ಕೈವಾರಕ್ಕೆ ಆಗಮಿಸುತ್ತಾರೆ. ಈ ಬಾರಿಯೂ ಮಾಲಾಧಾರಿಗಳು ಮಠಕ್ಕೆ ಬಂದು ತಾತಯ್ಯರ ಸೇವೆಯಲ್ಲಿ ಪಾಲ್ಗೊಂಡಿದ್ದರು. ಆನೇಕಲ್ನ ಚಿಕ್ಕತಿಮ್ಮಸಂದ್ರ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಭಕ್ತರು ಮಾಲೆ ಧರಿಸಿ ಕೈವಾರಕ್ಕೆ ಆಗಮಿಸಿದ್ದರು.</p>.<p>ಸಂಕ್ರಾಂತಿ ಹಬ್ಬದಂದು ತಾತಯ್ಯರ ಮಠದ ದೇವಾಲಯದ ಪ್ರಾಕಾರೋತ್ಸವದಲ್ಲಿ ಭಕ್ತರು ಭಾಗವಹಿಸಿದ್ದರು. ತಾತಯ್ಯರ ಬೃಂದಾವನದಲ್ಲಿ ಉತ್ಸವಮೂರ್ತಿಗೆ ಪೂಜೆ ಸಲ್ಲಿಸಲಾಯಿತು. ಮಾಲಾಧಾರಿಗಳು ಮಠದ ಆವರಣದಲ್ಲಿ ಸಂಕೀರ್ತನಾ ಭಜನೆ ಮಾಡಿದರು. ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ಗೋಪೂಜೆ ಹಮ್ಮಿಕೊಳ್ಳಲಾಗಿತ್ತು. ಗ್ರಾಮದ ಜನರು ರಾಸುಗಳನ್ನು ಸಿಂಗರಿಸಿ ಮಠಕ್ಕೆ ಕರೆತಂದು ಪೂಜೆ ಸಲ್ಲಿಸಿದರು. ಯತೀಂದ್ರರ ಮಾಲಾಧಾರಿಗಳಾಗಿದ್ದ ಭಕ್ತರು ಕೈವಾರದ ಪ್ರಮುಖ ರಸ್ತೆಗಳಲ್ಲಿ ಸಂಕೀರ್ತನೆಯೊಂದಿಗೆ ಭಜನೆಯಲ್ಲಿ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>