<p><strong>ಗೌರಿಬಿದನೂರು:</strong> ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ ಅವರು ವರಮಹಾಲಕ್ಷ್ಮಿ, ಮತ್ತು ಗೌರಿ, ಗಣೇಶ ಹಬ್ಬದ ಪ್ರಯುಕ್ತ ನೀಡಿದ ಬಾಗಿನದ ಸೀರೆಗೆ ವಾಟದಹೊಸಹಳ್ಳಿಯಲ್ಲಿ ಮಹಿಳೆಯರು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಈ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. </p>.<p>ವಾಟದಹೊಸಹಳ್ಳಿ ಕೆರೆ ನೀರನ್ನು ಗೌರಿಬಿದನೂರು ನಗರಕ್ಕೆ ಪೂರೈಸುವ ವಿಚಾರವಾಗಿ ವಾಟದಹೊಸಹಳ್ಳಿ ಹಾಗೂ ಸುತ್ತಮುತ್ತಲ ಹಳ್ಳಿಗಳ ಗ್ರಾಮಸ್ಥರು ಮತ್ತು ಶಾಸಕರ ನಡುವೆ ತೀವ್ರ ಜಟಾಪಟಿ ನಡೆದಿತ್ತು. </p>.<p>ಇತ್ತೀಚೆಗೆ ಸಚಿವ ಬೈರತಿ ಸುರೇಶ್ ಈ ಯೋಜನೆಗೆ ಶಂಕುಸ್ಥಾಪನೆ ಸಹ ನೆರವೇರಿಸಿದ್ದರು. ಈ ಕಾರ್ಯಕ್ರಮದ ವೇಳೆ ಈ ಗ್ರಾಮಗಳ ರೈತರು, ವಾಟದಹೊಸಹಳ್ಳಿ ಕೆರೆ ಅಚ್ಚುಕಟ್ಟುದಾರರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಪೊಲೀಸರು ಪ್ರತಿಭಟನಕಾರರನ್ನು ವಶಕ್ಕೆ ಪಡೆದು ಕಾರ್ಯಕ್ರಮ ಪೂರ್ಣವಾದ ತರುವಾಯ ಬಿಡುಗಡೆ ಮಾಡಿದ್ದರು.</p>.<p>ಕೆ.ಎಚ್ ಪುಟ್ಟಸ್ವಾಮಿ ಗೌಡ ಅವರು ತಾಲ್ಲೂಕಿನ ಮಹಿಳೆಯರಿಗೆ ವರಮಹಾಲಕ್ಷ್ಮಿ, ಮತ್ತು ಗೌರಿ, ಗಣೇಶ ಹಬ್ಬದ ಪ್ರಯುಕ್ತ ಬಾಗಿನ ರೂಪದಲ್ಲಿ ಸೀರೆ ವಿತರಿಸುತ್ತಿದ್ದಾರೆ. ವಾಟದಹೊಸಹಳ್ಳಿ, ಮತ್ತು ನಗರಗೆರೆ ಭಾಗದಲ್ಲಿ ಸೋಮವಾರ ಸೀರೆಗಳನ್ನು ವಿತರಿಸಲಾಗಿತ್ತು. </p>.<p>ವಾಟದಹೊಸಹಳ್ಳಿಯ ಕೆಲವು ವಾರ್ಡ್ಗಳಲ್ಲಿ ಮಹಿಳೆಯರು ಸೀರೆಗಳನ್ನು ಸುಟ್ಟು ಹಾಕಿದ್ದಾರೆ. ‘ನಮ್ಮ ಕೆರೆಯ ನೀರನ್ನು ನಗರಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ’<br />ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು:</strong> ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ ಅವರು ವರಮಹಾಲಕ್ಷ್ಮಿ, ಮತ್ತು ಗೌರಿ, ಗಣೇಶ ಹಬ್ಬದ ಪ್ರಯುಕ್ತ ನೀಡಿದ ಬಾಗಿನದ ಸೀರೆಗೆ ವಾಟದಹೊಸಹಳ್ಳಿಯಲ್ಲಿ ಮಹಿಳೆಯರು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಈ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. </p>.<p>ವಾಟದಹೊಸಹಳ್ಳಿ ಕೆರೆ ನೀರನ್ನು ಗೌರಿಬಿದನೂರು ನಗರಕ್ಕೆ ಪೂರೈಸುವ ವಿಚಾರವಾಗಿ ವಾಟದಹೊಸಹಳ್ಳಿ ಹಾಗೂ ಸುತ್ತಮುತ್ತಲ ಹಳ್ಳಿಗಳ ಗ್ರಾಮಸ್ಥರು ಮತ್ತು ಶಾಸಕರ ನಡುವೆ ತೀವ್ರ ಜಟಾಪಟಿ ನಡೆದಿತ್ತು. </p>.<p>ಇತ್ತೀಚೆಗೆ ಸಚಿವ ಬೈರತಿ ಸುರೇಶ್ ಈ ಯೋಜನೆಗೆ ಶಂಕುಸ್ಥಾಪನೆ ಸಹ ನೆರವೇರಿಸಿದ್ದರು. ಈ ಕಾರ್ಯಕ್ರಮದ ವೇಳೆ ಈ ಗ್ರಾಮಗಳ ರೈತರು, ವಾಟದಹೊಸಹಳ್ಳಿ ಕೆರೆ ಅಚ್ಚುಕಟ್ಟುದಾರರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಪೊಲೀಸರು ಪ್ರತಿಭಟನಕಾರರನ್ನು ವಶಕ್ಕೆ ಪಡೆದು ಕಾರ್ಯಕ್ರಮ ಪೂರ್ಣವಾದ ತರುವಾಯ ಬಿಡುಗಡೆ ಮಾಡಿದ್ದರು.</p>.<p>ಕೆ.ಎಚ್ ಪುಟ್ಟಸ್ವಾಮಿ ಗೌಡ ಅವರು ತಾಲ್ಲೂಕಿನ ಮಹಿಳೆಯರಿಗೆ ವರಮಹಾಲಕ್ಷ್ಮಿ, ಮತ್ತು ಗೌರಿ, ಗಣೇಶ ಹಬ್ಬದ ಪ್ರಯುಕ್ತ ಬಾಗಿನ ರೂಪದಲ್ಲಿ ಸೀರೆ ವಿತರಿಸುತ್ತಿದ್ದಾರೆ. ವಾಟದಹೊಸಹಳ್ಳಿ, ಮತ್ತು ನಗರಗೆರೆ ಭಾಗದಲ್ಲಿ ಸೋಮವಾರ ಸೀರೆಗಳನ್ನು ವಿತರಿಸಲಾಗಿತ್ತು. </p>.<p>ವಾಟದಹೊಸಹಳ್ಳಿಯ ಕೆಲವು ವಾರ್ಡ್ಗಳಲ್ಲಿ ಮಹಿಳೆಯರು ಸೀರೆಗಳನ್ನು ಸುಟ್ಟು ಹಾಕಿದ್ದಾರೆ. ‘ನಮ್ಮ ಕೆರೆಯ ನೀರನ್ನು ನಗರಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ’<br />ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>