<p><strong>ಶಿಡ್ಲಘಟ್ಟ: </strong>ಪರಿಶಿಷ್ಟರ ಸ್ಮಶಾನಕ್ಕೆ ಹೊಂದಿಕೊಂಡಿರುವ ಜಮೀನನ್ನು ಸ್ಮಶಾನಕ್ಕಾಗಿಯೇ ಮೀಸಲಿಡಬೇಕು ಎಂದು ಒತ್ತಾಯಿಸಿ ಪರಿಶಿಷ್ಟ ಸಮುದಾಯದ ಮುಖಂಡರು ಪ್ರತಿಭಟನೆ ನಡೆಸಿದರು. ನಂತರ ತಹಶೀಲ್ದಾರ್ ಕೆ.ಅರುಂಧತಿ ಹಾಗೂ ಡಿವೈಎಸ್ಪಿ ಲಕ್ಷ್ಮಯ್ಯ ಅವರನ್ನು ಭೇಟಿ ಮಾಡಿ ಪರಿಶೀಲಿಸಿದರು.</p>.<p>ನಗರದ ಸಿದ್ಧಾರ್ಥ ನಗರಕ್ಕೆ ಹೊಂದಿಕೊಂಡಿರುವ ದಿಬ್ಬೂರಹಳ್ಳಿ ಬೈಪಾಸ್ ರಸ್ತೆಯಲ್ಲಿರುವ ಸರ್ವೆ ನಂಬರ್ 554ರ ಸರ್ಕಾರಿ ಜಾಗವನ್ನು ಹಿಂದಿನಿಂದಲೂ ಸ್ಮಶಾನಕ್ಕಾಗಿ ಉಪಯೋಗಿಸಲಾಗಿತ್ತು. ಇದರ ಪಕ್ಕದಲ್ಲಿರುವ ಸ್ಥಳದಲ್ಲಿಯೂ ಕೆಲವರ ಅಂತ್ಯ ಸಂಸ್ಕಾರ ನಡೆಸಿದ್ದು ಈ ಸ್ಥಳವನ್ನು ಸ್ಮಶಾನಕ್ಕಾಗಿ ಮಂಜೂರು ಮಾಡಲು ಕೋರಿದ್ದ ಪ್ರಕರಣ ಇದೀಗ ಎಸಿ ಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿದೆ. ಇದೀಗ ಪಕ್ಕದಲ್ಲಿಯೇ ಇರುವ ನಿವಾಸಿ ರಾಜ್ಕುಮಾರ್ ಅವರು ಈ ಸ್ಥಳವನ್ನು ಖರೀದಿಸಿದ್ದೇನೆ ಎಂದು ಹೇಳಿ ನಿವೇಶನ ಸ್ವಚ್ಛಗೊಳಿಸುತ್ತಿದ್ದಾಗ ಸ್ಥಳಕ್ಕೆ ಹೋದ ಪರಿಶಿಷ್ಟ ಸಮುದಾಯದ ಮುಖಂಡರು ಹಾಗೂ ರಾಜ್ಕುಮಾರ್ ಕುಟುಂಬದ ನಡುವೆ ಶನಿವಾರ ಬೆಳಗ್ಗೆ ಗಲಾಟೆಯಾಗಿ, ಎರಡೂ ಕಡೆಯವರಿಗೂ ಸಣ್ಣ, ಪುಟ್ಟ ಗಾಯಗಳಾಗಿವೆ.</p>.<p>ಡಿವೈಎಸ್ಪಿ ಲಕ್ಷ್ಮಯ್ಯ ಮಾತನಾಡಿ, ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿರುವ ಸ್ಥಳದ ಬಗ್ಗೆ ಎಸಿ ಯಾವ ರೀತಿ ಆದೇಶ ನೀಡುತ್ತಾರೊ ಅದನ್ನು ಎಲ್ಲರೂ ಪಾಲಿಸಬೇಕು. ನ್ಯಾಯಾಲಯದ ಮುಂದಿನ ಆದೇಶ ಬರುವವರೆಗೂ ಎರಡೂ ಕಡೆಯವರು ಈ ಸ್ಥಳದಲ್ಲಿ ಯಾವುದೇ ಕೆಲಸ ನಡೆಸಬಾರದು ಎಂದು ಸೂಚಿಸಿದರು.</p>.<p>ತಹಶೀಲ್ದಾರ್ ಕೆ.ಅರುಂಧತಿ, ಸರ್ಕಲ್ ಇನ್ಸ್ಪೆಕ್ಟರ್ ಸುರೇಶ್, ಗ್ರಾಮಾಂತರ ಠಾಣೆ ಪಿಎಸ್ಐ ಲಿಯಾಕತ್ ಉಲ್ಲಾ, ನಗರಠಾಣೆ ಪಿಎಸ್ವೈ ಸಂಗಮೇಶ್ ಮೇಟಿ, ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ: </strong>ಪರಿಶಿಷ್ಟರ ಸ್ಮಶಾನಕ್ಕೆ ಹೊಂದಿಕೊಂಡಿರುವ ಜಮೀನನ್ನು ಸ್ಮಶಾನಕ್ಕಾಗಿಯೇ ಮೀಸಲಿಡಬೇಕು ಎಂದು ಒತ್ತಾಯಿಸಿ ಪರಿಶಿಷ್ಟ ಸಮುದಾಯದ ಮುಖಂಡರು ಪ್ರತಿಭಟನೆ ನಡೆಸಿದರು. ನಂತರ ತಹಶೀಲ್ದಾರ್ ಕೆ.ಅರುಂಧತಿ ಹಾಗೂ ಡಿವೈಎಸ್ಪಿ ಲಕ್ಷ್ಮಯ್ಯ ಅವರನ್ನು ಭೇಟಿ ಮಾಡಿ ಪರಿಶೀಲಿಸಿದರು.</p>.<p>ನಗರದ ಸಿದ್ಧಾರ್ಥ ನಗರಕ್ಕೆ ಹೊಂದಿಕೊಂಡಿರುವ ದಿಬ್ಬೂರಹಳ್ಳಿ ಬೈಪಾಸ್ ರಸ್ತೆಯಲ್ಲಿರುವ ಸರ್ವೆ ನಂಬರ್ 554ರ ಸರ್ಕಾರಿ ಜಾಗವನ್ನು ಹಿಂದಿನಿಂದಲೂ ಸ್ಮಶಾನಕ್ಕಾಗಿ ಉಪಯೋಗಿಸಲಾಗಿತ್ತು. ಇದರ ಪಕ್ಕದಲ್ಲಿರುವ ಸ್ಥಳದಲ್ಲಿಯೂ ಕೆಲವರ ಅಂತ್ಯ ಸಂಸ್ಕಾರ ನಡೆಸಿದ್ದು ಈ ಸ್ಥಳವನ್ನು ಸ್ಮಶಾನಕ್ಕಾಗಿ ಮಂಜೂರು ಮಾಡಲು ಕೋರಿದ್ದ ಪ್ರಕರಣ ಇದೀಗ ಎಸಿ ಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿದೆ. ಇದೀಗ ಪಕ್ಕದಲ್ಲಿಯೇ ಇರುವ ನಿವಾಸಿ ರಾಜ್ಕುಮಾರ್ ಅವರು ಈ ಸ್ಥಳವನ್ನು ಖರೀದಿಸಿದ್ದೇನೆ ಎಂದು ಹೇಳಿ ನಿವೇಶನ ಸ್ವಚ್ಛಗೊಳಿಸುತ್ತಿದ್ದಾಗ ಸ್ಥಳಕ್ಕೆ ಹೋದ ಪರಿಶಿಷ್ಟ ಸಮುದಾಯದ ಮುಖಂಡರು ಹಾಗೂ ರಾಜ್ಕುಮಾರ್ ಕುಟುಂಬದ ನಡುವೆ ಶನಿವಾರ ಬೆಳಗ್ಗೆ ಗಲಾಟೆಯಾಗಿ, ಎರಡೂ ಕಡೆಯವರಿಗೂ ಸಣ್ಣ, ಪುಟ್ಟ ಗಾಯಗಳಾಗಿವೆ.</p>.<p>ಡಿವೈಎಸ್ಪಿ ಲಕ್ಷ್ಮಯ್ಯ ಮಾತನಾಡಿ, ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿರುವ ಸ್ಥಳದ ಬಗ್ಗೆ ಎಸಿ ಯಾವ ರೀತಿ ಆದೇಶ ನೀಡುತ್ತಾರೊ ಅದನ್ನು ಎಲ್ಲರೂ ಪಾಲಿಸಬೇಕು. ನ್ಯಾಯಾಲಯದ ಮುಂದಿನ ಆದೇಶ ಬರುವವರೆಗೂ ಎರಡೂ ಕಡೆಯವರು ಈ ಸ್ಥಳದಲ್ಲಿ ಯಾವುದೇ ಕೆಲಸ ನಡೆಸಬಾರದು ಎಂದು ಸೂಚಿಸಿದರು.</p>.<p>ತಹಶೀಲ್ದಾರ್ ಕೆ.ಅರುಂಧತಿ, ಸರ್ಕಲ್ ಇನ್ಸ್ಪೆಕ್ಟರ್ ಸುರೇಶ್, ಗ್ರಾಮಾಂತರ ಠಾಣೆ ಪಿಎಸ್ಐ ಲಿಯಾಕತ್ ಉಲ್ಲಾ, ನಗರಠಾಣೆ ಪಿಎಸ್ವೈ ಸಂಗಮೇಶ್ ಮೇಟಿ, ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>