ವಿದ್ಯಾರ್ಥಿಗಳು ಅಪಾಯಕಾರಿ ರೀತಿಯಲ್ಲಿ ಪ್ರಯಾಣಿಸುತ್ತಿರುವ ಕುರಿತು ಪೋಷಕರು ಮತ್ತು ಸಂಬಂಧಿಸಿದ ಅಧಿಕಾರಿಗಳು ಗಮನ ಹರಿಸಬೇಕು. ಸ್ಥಳೀಯ ಕೆಎಸ್ಆರ್ಟಿಸಿ ಡಿಪೊದ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಸಮರ್ಪಕ ಸಾರಿಗೆ ವ್ಯವಸ್ಥೆ ತುರ್ತಾಗಿ ಕಲ್ಪಿಸಬೇಕು
ಐವಾರಪಲ್ಲಿ ಹರೀಶ್, ಸಹ ಕಾರ್ಯದರ್ಶಿ, ಡಿವೈಎಫ್ಐ ರಾಜ್ಯ ಘಟಕ
ಗ್ರಾಮೀಣ ಭಾಗದಲ್ಲಿ ಸಾರಿಗೆ ಸೌಲಭ್ಯ ಕೊರತೆಯಿಂದ ವಿಶೇಷವಾಗಿ ವಿದ್ಯಾರ್ಥಿನಿಯರಿಗೆ ತೊಂದರೆ ಆಗುತ್ತಿದೆ. ಎಷ್ಟೋ ಹೆಣ್ಣುಮಕ್ಕಳು ಸಾರಿಗೆ ಕಾರಣಕ್ಕಾಗಿಯೇ ಶಿಕ್ಷಣ ಮೊಟಕುಗೊಳಿಸಿದ್ದಾರೆ. ಸಾರಿಗೆ ಇಲಾಖೆ ಇನ್ನಾದರೂ ಎಚ್ಚೆತ್ತು ಇತ್ತ ಗಮನಹರಿಸಬೇಕು.
ನಂದಿನಿ, ತಾಲ್ಲೂಕು ಅಧ್ಯಕ್ಷೆ, ಎಸ್ಎಫ್ಐ
ಬಾಗೇಪಲ್ಲಿ ಪಟ್ಟಣದಲ್ಲಿ ಆಟೋ ಚಾಲಕ ವಿದ್ಯಾರ್ಥಿಗಳನ್ನು ಪಕ್ಕದಲ್ಲಿ ಕೂರಿಸಿ ಚಾಲನೆ ಮಾಡುತ್ತಿರುವುದು