<p><strong>ಚಿಂತಾಮಣಿ:</strong> ತಾಲ್ಲೂಕಿನ ಕೈವಾರ ಹೋಬಳಿಯ ಗುಟ್ಟಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಶಾಲಾ ಪ್ರಾರಂಭೋತ್ಸವ ಸಡಗರ ಸಂಭ್ರಮದಿಂದ ನಡೆಯಿತು.</p>.<p>ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಮುಖ್ಯ ಶಿಕ್ಷಕ ಮಸ್ತನವಲಿ ಮಕ್ಕಳಿಗೆ ಗುಲಾಬಿ ಹೂವು ಮತ್ತು ಪಠ್ಯಪುಸ್ತಕ ನೀಡಿ ಬರಮಾಡಿಕೊಂಡರು. ಮಧ್ಯಾಹ್ನ ಸಿಹಿ ಊಟದ ವ್ಯವಸ್ಥೆ ಮಾಡಲಾಗಿತ್ತು.</p>.<p>ಕಳೆದ ಎರಡು ತಿಂಗಳಿಂದ ರಜೆಯಲ್ಲಿದ್ದ ಮಕ್ಕಳು ಖುಷಿಯಾಗಿ ಶಾಲೆಗೆ ಆಗಮಿಸಿ ಸ್ನೇಹಿತರ ಜತೆ ಬೆರೆತರು. ಆಟ–ಪಾಠಗಳಲ್ಲಿ ಭಾಗವಹಿಸಿ ಸಂತಸ ಹಂಚಿಕೊಂಡರು.</p>.<p>ಕೈವಾರ ಅಂಬೇಡ್ಕರ್ ಅನುದಾನಿತ ಶಾಲೆ: ತಾಲ್ಲೂಕಿನ ಕೈವಾರದ ಅಂಬೇಡ್ಕರ್ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಅದ್ದೂರಿಯಾಗಿ ಮಾಡಲಾಯಿತು. ಶಾಲೆಯನ್ನು ತಳಿರು ತೋರಣ, ರಂಗೋಲಿ ಮತ್ತು ಬಲೂನ್ಗಳಿಂದ ಅಲಂಕರಿಸಲಾಗಿತ್ತು.</p>.<p>ಸಂಸ್ಥೆಯ ಅಧ್ಯಕ್ಷೆ ಎಸ್.ಎಂ ರೋಜ ಮತ್ತು ಶಿಕ್ಷಕರು ಮಕ್ಕಳಿಗೆ ಹೂವು ನೀಡಿ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಸುರೇಶ ಪಠ್ಯಪುಸ್ತಕ ನೀಡಿ ಬರಮಾಡಿಕೊಂಡರು.</p>.<p>ಮೊದಲು ದಿನ ಮಧ್ಯಾಹ್ನ ಸಿಹಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಶಿಕ್ಷಕ ಲೋಕೇಶಪ್ಪ, ಉಮೇಶ, ಶ್ರೀಧರ ಹಿರೇಮಠ, ಮಂಜುಳ, ಗೋಪಮ್ಮ, ಭಾಗ್ಯಮ್ಮ, ದಿವ್ಯ, ಯೋಗಮ್ಮ, ವೆಂಕಟರತ್ನಮ್ಮ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ತಾಲ್ಲೂಕಿನ ಕೈವಾರ ಹೋಬಳಿಯ ಗುಟ್ಟಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಶಾಲಾ ಪ್ರಾರಂಭೋತ್ಸವ ಸಡಗರ ಸಂಭ್ರಮದಿಂದ ನಡೆಯಿತು.</p>.<p>ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಮುಖ್ಯ ಶಿಕ್ಷಕ ಮಸ್ತನವಲಿ ಮಕ್ಕಳಿಗೆ ಗುಲಾಬಿ ಹೂವು ಮತ್ತು ಪಠ್ಯಪುಸ್ತಕ ನೀಡಿ ಬರಮಾಡಿಕೊಂಡರು. ಮಧ್ಯಾಹ್ನ ಸಿಹಿ ಊಟದ ವ್ಯವಸ್ಥೆ ಮಾಡಲಾಗಿತ್ತು.</p>.<p>ಕಳೆದ ಎರಡು ತಿಂಗಳಿಂದ ರಜೆಯಲ್ಲಿದ್ದ ಮಕ್ಕಳು ಖುಷಿಯಾಗಿ ಶಾಲೆಗೆ ಆಗಮಿಸಿ ಸ್ನೇಹಿತರ ಜತೆ ಬೆರೆತರು. ಆಟ–ಪಾಠಗಳಲ್ಲಿ ಭಾಗವಹಿಸಿ ಸಂತಸ ಹಂಚಿಕೊಂಡರು.</p>.<p>ಕೈವಾರ ಅಂಬೇಡ್ಕರ್ ಅನುದಾನಿತ ಶಾಲೆ: ತಾಲ್ಲೂಕಿನ ಕೈವಾರದ ಅಂಬೇಡ್ಕರ್ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಅದ್ದೂರಿಯಾಗಿ ಮಾಡಲಾಯಿತು. ಶಾಲೆಯನ್ನು ತಳಿರು ತೋರಣ, ರಂಗೋಲಿ ಮತ್ತು ಬಲೂನ್ಗಳಿಂದ ಅಲಂಕರಿಸಲಾಗಿತ್ತು.</p>.<p>ಸಂಸ್ಥೆಯ ಅಧ್ಯಕ್ಷೆ ಎಸ್.ಎಂ ರೋಜ ಮತ್ತು ಶಿಕ್ಷಕರು ಮಕ್ಕಳಿಗೆ ಹೂವು ನೀಡಿ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಸುರೇಶ ಪಠ್ಯಪುಸ್ತಕ ನೀಡಿ ಬರಮಾಡಿಕೊಂಡರು.</p>.<p>ಮೊದಲು ದಿನ ಮಧ್ಯಾಹ್ನ ಸಿಹಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಶಿಕ್ಷಕ ಲೋಕೇಶಪ್ಪ, ಉಮೇಶ, ಶ್ರೀಧರ ಹಿರೇಮಠ, ಮಂಜುಳ, ಗೋಪಮ್ಮ, ಭಾಗ್ಯಮ್ಮ, ದಿವ್ಯ, ಯೋಗಮ್ಮ, ವೆಂಕಟರತ್ನಮ್ಮ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>