ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜ್ಞಾನ ಕಾಂಗ್ರೆಸ್‌ಗೆ ಸಜ್ಜಾಗುತ್ತಿದೆ ಜಿಕೆವಿಕೆ

15 ಸಾವಿರ ಚ.ಮೀ. ವಿಸ್ತೀರ್ಣದಲ್ಲಿ ಪ್ರದರ್ಶನ
Last Updated 30 ಡಿಸೆಂಬರ್ 2019, 21:51 IST
ಅಕ್ಷರ ಗಾತ್ರ

ಬೆಂಗಳೂರು: ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿನ ಆವಿಷ್ಕಾರಗಳು ಹಾಗೂ ಸಂಶೋಧನೆಗಳ ಬಗ್ಗೆ ತಿಳಿಸಿ ಕೊಡಲು15 ಸಾವಿರ ಚದರ ಮೀಟರ್ ವಿಸ್ತೀರ್ಣದಲ್ಲಿನಗರದ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (ಜಿಕೆವಿಕೆ) ಆವರಣ ಸಜ್ಜಾಗುತ್ತಿದೆ.

ಜ. 3ರಿಂದ 7ರ ವರೆಗೆ ನಡೆಯಲಿದೆ. ಭಾರತೀಯವಿಜ್ಞಾನಕಾಂಗ್ರೆಸ್‌ನ 107ನೇ ಸಮಾವೇಶಕ್ಕೆಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದು, ಐದು ದಿನಗಳ ಸಮ್ಮೇಳನದಲ್ಲಿ ದೇಶದ 150ಕ್ಕೂ ಅಧಿಕ ಸಂಸ್ಥೆಗಳು ಭಾಗವಹಿಸಲಿವೆ. ‘ವಿಜ್ಞಾನ ಮತ್ತು ತಂತ್ರಜ್ಞಾನ: ಗ್ರಾಮೀಣಾಭಿವೃದ್ಧಿ’ ಸಮ್ಮೇಳನದ ಮುಖ್ಯ ವಿಷಯವಾಗಿದ್ದು, ದೇಶ–ವಿದೇಶಗಳಿಂದ ವಿಜ್ಞಾನಿಗಳು, ನೊಬೆಲ್ ಪ್ರಶಸ್ತಿ ಪುರಸ್ಕ್ಖೃತರು, ವಿಷಯ ತಜ್ಞರು, ಉಪನ್ಯಾಸಕರು, ಕಾರ್ಯನೀತಿ ರಚನಾಕಾರರು, ವಿದ್ಯಾರ್ಥಿ ಗಳು, ರೈತರು, ಸಂಘ–ಸಂಸ್ಥೆ ಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

‘ನಗರ ಮತ್ತು ಗ್ರಾಮೀಣ ಪ್ರದೇಶದ ನಡುವೆ ಕಂದಕ ಸೃಷ್ಟಿಯಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಸಹಾಯದಿಂದ ಗ್ರಾಮೀಣ ಪ್ರದೇಶವನ್ನು ಅಭಿವೃದ್ಧಿ ಪಡಿಸಲು ನೆರವಾಗುವುದು ಸಮ್ಮೇಳನದ ಆಶಯವಾಗಿದೆ. ರೈತರಿಗೆ ಕೃಷಿ ಕ್ಷೇತ್ರದಲ್ಲಿನ ಹೊಸ ಆವಿಷ್ಕಾರಗಳ ಮಾಹಿತಿಗಳೂ ಸಮ್ಮೇಳನ ದಲ್ಲಿ ದೊರೆಯಲಿವೆ. 15 ಸಾವಿರ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ. ವಿಜ್ಞಾನದ 14 ವಿಭಾಗಗಳ ಸಂಶೋಧನೆ ಮತ್ತು ಆವಿಷ್ಕಾರದ ಮೇಲೆ ಬೆಳಕು ಹರಿಸಲಾಗುವುದು’ ಎಂದುಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಕುಲಪತಿ ಡಾ.ಎಸ್.ರಾಜೇಂದ್ರ ಪ್ರಸಾದ್‌ ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಮಹಿಳಾ ವಿಜ್ಞಾನ ಸಮ್ಮೇಳನ, ಮಕ್ಕಳ ವಿಜ್ಞಾನ ಸಮ್ಮೇಳನ, ವಿಜ್ಞಾನ ಸಂವಾಹಕ ಸಮ್ಮೇಳನ ಹಾಗೂ ರೈತ ವಿಜ್ಞಾನ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ. ‘ಪ್ರೈಡ್‌ ಆಫ್ ಇಂಡಿಯಾ’ ಎಂಬ ಶೀರ್ಷಿಕೆಯಡಿ ವಿವಿಧ ತಂತ್ರಜ್ಞಾನಗಳು, ನವೋದ್ಯಮಗಳು, ಯಂತ್ರೋಪಕರಣಗಳು ಹಾಗೂ ಮಾದರಿಗಳನ್ನು ಪ್ರದರ್ಶನ ಮಾಡಲಾಗುತ್ತದೆ. ಜ. 4ರಿಂದ ನಡೆಯಲಿರುವ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಉಚಿತ ಪ್ರವೇಶವಿದೆ ಎಂದು ಮಾಹಿತಿ ನೀಡಿದರು.

‘8 ಸಾವಿರಕ್ಕೂ ಅಧಿಕ ಮಂದಿ ಹೆಸರು ನೋಂದಣಿ ಮಾಡಿ ಕೊಂಡಿದ್ದಾರೆ ಎಂದು ತಿಳಿಸಿದರು.

ಮೊಬೈಲ್‌ ಆ್ಯಪ್ ಅಭಿವೃದ್ಧಿ
ವಿಜ್ಞಾನ ಸಮ್ಮೇಳನದ ಮಾಹಿತಿ ನೀಡುವ ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ‘ISC 2020 UASB’ ಹೆಸರಿನ ಮೊಬೈಲ್ ಆ್ಯಪ್ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿದೆ. ಅಧಿವೇಶನದ ಮಾಹಿತಿ, ವಿಷಯ ತಜ್ಞರ ವಿವರ, ವೇದಿಕೆಗಳು ಇರುವ ಸ್ಥಳ, ವಸತಿ ಹಾಗೂ ಸಾರಿಗೆ ವ್ಯವಸ್ಥೆ, ಭೋಜನಾಲಯ ಸೇರಿದಂತೆ ಸಮ್ಮೇಳನಕ್ಕೆ ಸಂಬಂಧಿಸಿದ ಹಲವು ಮಾಹಿತಿಗಳು ಇರಲಿವೆ. ಕರ್ನಾಟಕದ ಪ್ರವಾಸಿ ತಾಣಗಳ ವಿವರ ಹಾಗೂ ವೈಶಿಷ್ಟ್ಯತೆಗಳನ್ನು ನೀಡಲಾಗಿದೆ.

*
ಸಾಂಸ್ಕೃತಿಕ ಸಂಜೆ
ಸಮ್ಮೇಳನದಲ್ಲಿ ಜ. 4ರಿಂದ 6ರವರೆಗೆ ಪ್ರತಿನಿತ್ಯ ಸಂಜೆ 6.30ರಿಂದ ರಾತ್ರಿ 8 ಗಂಟೆವರೆಗೆ ಸಾಂಸ್ಕೃತಿಕ ಕಾರ್ಯುಕ್ರಮಗಳನ್ನು ಆಯೋಜಿಸಲಾಗಿದೆ. ಜ.4ಕ್ಕೆ ಪ್ರಭಾತ್ ಕಲಾವಿದರ ತಂಡ, ಜ.5ಕ್ಕೆ ವಿಜಯ್ ಪ್ರಕಾಶ್ ಕಲಾತಂಡ ಹಾಗೂ ಜ.6ಕ್ಕೆಪ್ರವೀಣ್ ಗೋಡ್ಕಿಂಡಿ ತಂಡ ಕಾರ್ಯಕ್ರಮ ನೀಡಲಿದೆ.

ವಿಮಾನ ನಿಲ್ದಾಣ, ರೈಲು ನಿಲ್ದಾಣ ಹಾಗೂ ಬಸ್‌ ನಿಲ್ದಾಣಗಳಿಂದ ಸಮ್ಮೇಳನಕ್ಕೆ ಬರುವವರಿಗೆ ವಾಹನ ವ್ಯವಸ್ಥೆ ಮಾಡಲಾಗಿದೆ ಎಂದುಡಾ.ಎಸ್.ರಾಜೇಂದ್ರ ಪ್ರಸಾದ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT