<p><strong>ಶಿಡ್ಲಘಟ್ಟ:</strong> ತಾಲ್ಲೂಕಿನ ಹೊಸಪೇಟೆಯಲ್ಲಿರುವ ಉನ್ನತೀಕರಿಸಿದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಎಫ್ಎಲ್ಎನ್ ಕಲಿಕಾ ಹಬ್ಬ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಯಿತು. </p>.<p>ತಾಲ್ಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಆಂಜನೇಯ ಮಾತನಾಡಿ, ‘ವಿದ್ಯಾರ್ಥಿಯು ಪರೀಕ್ಷೆಯಲ್ಲಿ ತಾನು ಉತ್ತೀರ್ಣನಾದ ಹೊರತಾಗಿಯೂ ಬುನಾದಿ ಸಾಮರ್ಥ್ಯ ಗಳಿಕೆಯಲ್ಲಿ ಹಿನ್ನಡೆ ಹೊಂದಿದ್ದರೆ, ಅದು ಆಯಾ ತರಗತಿ ಮಟ್ಟದ ಕಲಿಕೆ ಸಾಧಿಸಲು ತೊಡಕಾಗುತ್ತದೆ. ರಾಷ್ಟ್ರಮಟ್ಟದಲ್ಲಿ ನಡೆದ ಬೇರೆ-ಬೇರೆ ಸಮೀಕ್ಷೆಗಳು ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾ ಜ್ಞಾನದಲ್ಲಿನ ಕೊರತೆ ಬಗ್ಗೆ ಮಾಹಿತಿ ನೀಡುತ್ತಲೇ ಇವೆ. ಬುನಾದಿ ಸಾಕ್ಷರತೆ ಮತ್ತು ಸಂಖ್ಯಾಜ್ಞಾನ ಗಳಿಕೆಯು ವಿದ್ಯಾರ್ಥಿಯ ಶೈಕ್ಷಣಿಕ ಪ್ರಗತಿಯ ಬಹುಮುಖ್ಯ ಘಟ್ಟ’ ಎಂದು ಹೇಳಿದರು. </p>.<p>ನಮ್ಮ ದೇಶ ಮತ್ತು ರಾಜ್ಯದಲ್ಲಿ ಮಕ್ಕಳ ಹಂತದಲ್ಲಿ ಕಲಿಕಾ ಕೊರತೆ ಮತ್ತು ದೋಷಗಳ ಸವಾಲು ನಿರ್ವಹಿಸಲು ಅನೇಕ ರೀತಿಯ ಶೈಕ್ಷಣಿಕ ಪ್ರಯತ್ನಗಳು ನಡೆದಿವೆ. ಆದಾಗ್ಯೂ, ಇನ್ನೂ ಈ ನಿಟ್ಟಿನಲ್ಲಿ ಸಾಧಿಸಬೇಕಿರುವುದು ಬಹಳಷ್ಟಿದೆ ಎಂದರು. </p>.<p>ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಕಾರ್ಯದರ್ಶಿ ಎಚ್.ಎಸ್.ರುದ್ರೇಶಮೂರ್ತಿ ಮಾತನಾಡಿ, ಮಕ್ಕಳನ್ನು ಕಲಿಕಾ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಸಿ ಸಂತೋಷದಾಯಕ ಕಲಿಕೆಗೆ ಹೆಚ್ಚೆಚ್ಚು ಅವಕಾಶಗಳನ್ನು ಒದಗಿಸಬೇಕು. 2024–25ನೇ ಶೈಕ್ಷಣಿಕ ವರ್ಷವನ್ನು ಇಲಾಖೆಯು ‘ಶೈಕ್ಷಣಿಕ ಬಲವರ್ಧನೆ ವರ್ಷ’ ಎಂದು ಘೋಷಿಸಿದ್ದು, ಈ ವರ್ಷ ಶೈಕ್ಷಣಿಕ ಚಟುವಟಿಕೆಗಳೆಲ್ಲವೂ ಇದರ ಅನುಗುಣವಾಗಿಯೇ ನಡೆಯಲಿವೆ. ಈ ಪೈಕಿ ಕಲಿಕಾ ಹಬ್ಬವೂ ಒಂದಾಗಿದೆ ಎಂದರು. </p>.<p>ಸಿಆರ್ಪಿ ಎಂ.ರಮೇಶ್ಕುಮಾರ್ ಮಾತನಾಡಿ, ಎಫ್ಎಲ್ಎನ್ ಅಭಿಯಾನವು ಮಕ್ಕಳಲ್ಲಿ ಬುನಾದಿ ಸಾಮರ್ಥ್ಯ ಗಳಿಕೆ ಖಾತ್ರಿಪಡಿಸಲು ಒಂದು ಮಹತ್ತರ ಹೆಜ್ಜೆಯಾಗಿದೆ ಎಂದರು.</p>.<p>ಮುಖ್ಯ ಶಿಕ್ಷಕಿ ಜಿ.ಎನ್.ನೇತ್ರಾವತಿ ಮಾತನಾಡಿ, ಬುನಾದಿ ಸಾಮರ್ಥ್ಯ ಗಳಿಕೆಗಾಗಿ ತರಗತಿ ಪ್ರಕ್ರಿಯೆಯನ್ನು ಅನುಕೂಲಗೊಳಿಸಲು ಕಲಿಕಾ ಹಬ್ಬದಂತಹ ಚಟುವಟಿಕೆಗಳು ಶಿಕ್ಷಕರಿಗೆ ನೆರವಾಗಲಿವೆ. ಶಿಕ್ಷಕರು ಭಾಷೆ ಮತ್ತು ಗಣಿತ ತರಗತಿಗಳನ್ನು ನಿರ್ವಹಿಸುವಾಗ ಮಕ್ಕಳ ಸಾಮರ್ಥ್ಯ ವರ್ಧನೆಗೆ ಪ್ರಯತ್ನಿಸಬೇಕು ಎಂದರು.</p>.<p>ವಿದ್ಯಾರ್ಥಿಗಳಿಗಾಗಿ ಗಟ್ಟಿ ಓದು, ಶುದ್ಧ ಬರಹ, ಸರಳ ಗಣಿತ, ಕತೆ, ಜ್ಞಾಪಕ ಸ್ಪರ್ಧೆಗಳನ್ನು ನಡೆಸಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಕಿ ಎನ್.ಶೈಲಜ ಮಾರ್ಗದರ್ಶನದಲ್ಲಿ ಮಕ್ಕಳು ತಯಾರಿಸಿದ ವಿಜ್ಞಾನ ಪ್ರಯೋಗ, ಮಾದರಿಗಳ ಪ್ರದರ್ಶನ ಎಲ್ಲರ ಗಮನ ಸೆಳೆಯಿತು.</p>.<p>ಎಸ್ಡಿಎಂಸಿ ಅಧ್ಯಕ್ಷ ಎಚ್.ಸಿ.ಆಂಜಿನಪ್ಪ ಅಧ್ಯಕ್ಷತೆ ವಹಿಸಿದ್ದರು. ಗ್ರಾಮಪಂಚಾಯಿತಿ ಅಧ್ಯಕ್ಷೆ ದ್ಯಾವಮ್ಮ ಕೆಂಪಣ್ಣ, ಮುಖ್ಯಶಿಕ್ಷಕಿ ಪಿ.ಗೀತಾ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು, ವಿಧ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ:</strong> ತಾಲ್ಲೂಕಿನ ಹೊಸಪೇಟೆಯಲ್ಲಿರುವ ಉನ್ನತೀಕರಿಸಿದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಎಫ್ಎಲ್ಎನ್ ಕಲಿಕಾ ಹಬ್ಬ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಯಿತು. </p>.<p>ತಾಲ್ಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಆಂಜನೇಯ ಮಾತನಾಡಿ, ‘ವಿದ್ಯಾರ್ಥಿಯು ಪರೀಕ್ಷೆಯಲ್ಲಿ ತಾನು ಉತ್ತೀರ್ಣನಾದ ಹೊರತಾಗಿಯೂ ಬುನಾದಿ ಸಾಮರ್ಥ್ಯ ಗಳಿಕೆಯಲ್ಲಿ ಹಿನ್ನಡೆ ಹೊಂದಿದ್ದರೆ, ಅದು ಆಯಾ ತರಗತಿ ಮಟ್ಟದ ಕಲಿಕೆ ಸಾಧಿಸಲು ತೊಡಕಾಗುತ್ತದೆ. ರಾಷ್ಟ್ರಮಟ್ಟದಲ್ಲಿ ನಡೆದ ಬೇರೆ-ಬೇರೆ ಸಮೀಕ್ಷೆಗಳು ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾ ಜ್ಞಾನದಲ್ಲಿನ ಕೊರತೆ ಬಗ್ಗೆ ಮಾಹಿತಿ ನೀಡುತ್ತಲೇ ಇವೆ. ಬುನಾದಿ ಸಾಕ್ಷರತೆ ಮತ್ತು ಸಂಖ್ಯಾಜ್ಞಾನ ಗಳಿಕೆಯು ವಿದ್ಯಾರ್ಥಿಯ ಶೈಕ್ಷಣಿಕ ಪ್ರಗತಿಯ ಬಹುಮುಖ್ಯ ಘಟ್ಟ’ ಎಂದು ಹೇಳಿದರು. </p>.<p>ನಮ್ಮ ದೇಶ ಮತ್ತು ರಾಜ್ಯದಲ್ಲಿ ಮಕ್ಕಳ ಹಂತದಲ್ಲಿ ಕಲಿಕಾ ಕೊರತೆ ಮತ್ತು ದೋಷಗಳ ಸವಾಲು ನಿರ್ವಹಿಸಲು ಅನೇಕ ರೀತಿಯ ಶೈಕ್ಷಣಿಕ ಪ್ರಯತ್ನಗಳು ನಡೆದಿವೆ. ಆದಾಗ್ಯೂ, ಇನ್ನೂ ಈ ನಿಟ್ಟಿನಲ್ಲಿ ಸಾಧಿಸಬೇಕಿರುವುದು ಬಹಳಷ್ಟಿದೆ ಎಂದರು. </p>.<p>ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಕಾರ್ಯದರ್ಶಿ ಎಚ್.ಎಸ್.ರುದ್ರೇಶಮೂರ್ತಿ ಮಾತನಾಡಿ, ಮಕ್ಕಳನ್ನು ಕಲಿಕಾ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಸಿ ಸಂತೋಷದಾಯಕ ಕಲಿಕೆಗೆ ಹೆಚ್ಚೆಚ್ಚು ಅವಕಾಶಗಳನ್ನು ಒದಗಿಸಬೇಕು. 2024–25ನೇ ಶೈಕ್ಷಣಿಕ ವರ್ಷವನ್ನು ಇಲಾಖೆಯು ‘ಶೈಕ್ಷಣಿಕ ಬಲವರ್ಧನೆ ವರ್ಷ’ ಎಂದು ಘೋಷಿಸಿದ್ದು, ಈ ವರ್ಷ ಶೈಕ್ಷಣಿಕ ಚಟುವಟಿಕೆಗಳೆಲ್ಲವೂ ಇದರ ಅನುಗುಣವಾಗಿಯೇ ನಡೆಯಲಿವೆ. ಈ ಪೈಕಿ ಕಲಿಕಾ ಹಬ್ಬವೂ ಒಂದಾಗಿದೆ ಎಂದರು. </p>.<p>ಸಿಆರ್ಪಿ ಎಂ.ರಮೇಶ್ಕುಮಾರ್ ಮಾತನಾಡಿ, ಎಫ್ಎಲ್ಎನ್ ಅಭಿಯಾನವು ಮಕ್ಕಳಲ್ಲಿ ಬುನಾದಿ ಸಾಮರ್ಥ್ಯ ಗಳಿಕೆ ಖಾತ್ರಿಪಡಿಸಲು ಒಂದು ಮಹತ್ತರ ಹೆಜ್ಜೆಯಾಗಿದೆ ಎಂದರು.</p>.<p>ಮುಖ್ಯ ಶಿಕ್ಷಕಿ ಜಿ.ಎನ್.ನೇತ್ರಾವತಿ ಮಾತನಾಡಿ, ಬುನಾದಿ ಸಾಮರ್ಥ್ಯ ಗಳಿಕೆಗಾಗಿ ತರಗತಿ ಪ್ರಕ್ರಿಯೆಯನ್ನು ಅನುಕೂಲಗೊಳಿಸಲು ಕಲಿಕಾ ಹಬ್ಬದಂತಹ ಚಟುವಟಿಕೆಗಳು ಶಿಕ್ಷಕರಿಗೆ ನೆರವಾಗಲಿವೆ. ಶಿಕ್ಷಕರು ಭಾಷೆ ಮತ್ತು ಗಣಿತ ತರಗತಿಗಳನ್ನು ನಿರ್ವಹಿಸುವಾಗ ಮಕ್ಕಳ ಸಾಮರ್ಥ್ಯ ವರ್ಧನೆಗೆ ಪ್ರಯತ್ನಿಸಬೇಕು ಎಂದರು.</p>.<p>ವಿದ್ಯಾರ್ಥಿಗಳಿಗಾಗಿ ಗಟ್ಟಿ ಓದು, ಶುದ್ಧ ಬರಹ, ಸರಳ ಗಣಿತ, ಕತೆ, ಜ್ಞಾಪಕ ಸ್ಪರ್ಧೆಗಳನ್ನು ನಡೆಸಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಕಿ ಎನ್.ಶೈಲಜ ಮಾರ್ಗದರ್ಶನದಲ್ಲಿ ಮಕ್ಕಳು ತಯಾರಿಸಿದ ವಿಜ್ಞಾನ ಪ್ರಯೋಗ, ಮಾದರಿಗಳ ಪ್ರದರ್ಶನ ಎಲ್ಲರ ಗಮನ ಸೆಳೆಯಿತು.</p>.<p>ಎಸ್ಡಿಎಂಸಿ ಅಧ್ಯಕ್ಷ ಎಚ್.ಸಿ.ಆಂಜಿನಪ್ಪ ಅಧ್ಯಕ್ಷತೆ ವಹಿಸಿದ್ದರು. ಗ್ರಾಮಪಂಚಾಯಿತಿ ಅಧ್ಯಕ್ಷೆ ದ್ಯಾವಮ್ಮ ಕೆಂಪಣ್ಣ, ಮುಖ್ಯಶಿಕ್ಷಕಿ ಪಿ.ಗೀತಾ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು, ವಿಧ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>