<p><strong>ಶಿಡ್ಲಘಟ್ಟ</strong>: ‘ಶಾಲಾ ಮಕ್ಕಳು ಬರೀ ಪಠ್ಯವನ್ನು ಓದುವುದಕ್ಕೆ ಸೀಮಿತವಾಗದೆ ಪ್ರಾಪಂಚಿಕ ಜ್ಞಾನ ಹೆಚ್ಚಿಸಿಕೊಳ್ಳಬೇಕು. ತಂದೆ, ತಾಯಿ ಓದಿಸಲು ಎಷ್ಟು ಕಷ್ಟ ಪಡುತ್ತಾರೆ, ಕುಟುಂಬ ನಿರ್ವಹಣೆ ಹೇಗೆ ನಿಭಾಯಿಸುತ್ತಾರೆ ಎಂದು ತಿಳಿದುಕೊಳ್ಳಬೇಕು’ ಎಂದು ಚಿಮುಲ್ನ ನೂತನ ನಿರ್ದೇಶಕ ಬಂಕ್ ಮುನಿಯಪ್ಪ ಹೇಳಿದರು.</p>.<p>ತಾಲ್ಲೂಕಿನ ಚಿಕ್ಕದಾಸರಹಳ್ಳಿಯ ಲಕ್ಷ್ಮಿ ವಿದ್ಯಾನಿಕೇತನ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ನಾವು ಸ್ಪರ್ಧಾ ಜಗತ್ತಿನಲ್ಲಿದ್ದೇವೆ. ವಿದ್ಯಾರ್ಥಿಗಳು ಕೇವಲ ಉತ್ತಮ ಅಂಕಗಳಿಸಿದರೆ ಸಾಲದು. ಉತ್ತಮ ವೃತ್ತಿ ಕೌಶಲ ಬೆಳೆಸಿಕೊಳ್ಳಬೇಕು. ಶಿಕ್ಷಣ, ಉದ್ಯೋಗ, ಸ್ವಯಂ ಉದ್ಯೋಗ, ವ್ಯಾಪಾರ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿನ ಸ್ಪರ್ಧೆಯನ್ನು ಸಮರ್ಥವಾಗಿ ಎದುರಿಸಿ ನಿಲ್ಲಬೇಕಿದೆ’ ಎಂದರು.</p>.<p>‘ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಅಂಕಗಳಿಸುವಂತೆ ಪೋಷಕರು, ಶಿಕ್ಷಕರು ಒತ್ತಡ ಹಾಕಲು ಮುಂದಾಗಬಾರದು. ಮಕ್ಕಳ ಕಲಿಕಾ ಸಾಮರ್ಥ್ಯ, ಆಸಕ್ತಿ, ಗ್ರಹಿಸುವ ಶಕ್ತಿಯನ್ನು ಅನುಸರಿಸಿ ಅವರಿಗೆ ಅವಕಾಶ ಒದಗಿಸಿಕೊಡುವ ಕೆಲಸ ಮಾಡಬೇಕಿದೆ’ ಎಂದು ಹೇಳಿದರು.</p>.<p>ಪ್ರೌಢಶಾಲಾ ವಿದ್ಯಾರ್ಥಿಗಳಿಂದ ವಿಜ್ಞಾನ ವಸ್ತು ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಬಂಕ್ ಮುನಿಯಪ್ಪ, ಹುಜಗೂರು ರಾಮಣ್ಣ, ಕೃಷ್ಣಾರೆಡ್ಡಿ, ಪತ್ರಕರ್ತರ ಸಂಘದ ಅಧ್ಯಕ್ಷ ಎ.ಶಶಿಕುಮಾರ್ ಅವರನ್ನು ಸನ್ಮಾನಿಸಲಾಯಿತು.</p>.<p>ಲಕ್ಷ್ಮಿ ವಿದ್ಯಾನಿಕೇತನ ವಿದ್ಯಾಸಂಸ್ಥೆ ಅಧ್ಯಕ್ಷ ಸ್ಕೂಲ್ ದೇವರಾಜ್, ಬ್ಯಾಟರಾಯಶೆಟ್ಟಿ, ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ</strong>: ‘ಶಾಲಾ ಮಕ್ಕಳು ಬರೀ ಪಠ್ಯವನ್ನು ಓದುವುದಕ್ಕೆ ಸೀಮಿತವಾಗದೆ ಪ್ರಾಪಂಚಿಕ ಜ್ಞಾನ ಹೆಚ್ಚಿಸಿಕೊಳ್ಳಬೇಕು. ತಂದೆ, ತಾಯಿ ಓದಿಸಲು ಎಷ್ಟು ಕಷ್ಟ ಪಡುತ್ತಾರೆ, ಕುಟುಂಬ ನಿರ್ವಹಣೆ ಹೇಗೆ ನಿಭಾಯಿಸುತ್ತಾರೆ ಎಂದು ತಿಳಿದುಕೊಳ್ಳಬೇಕು’ ಎಂದು ಚಿಮುಲ್ನ ನೂತನ ನಿರ್ದೇಶಕ ಬಂಕ್ ಮುನಿಯಪ್ಪ ಹೇಳಿದರು.</p>.<p>ತಾಲ್ಲೂಕಿನ ಚಿಕ್ಕದಾಸರಹಳ್ಳಿಯ ಲಕ್ಷ್ಮಿ ವಿದ್ಯಾನಿಕೇತನ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ನಾವು ಸ್ಪರ್ಧಾ ಜಗತ್ತಿನಲ್ಲಿದ್ದೇವೆ. ವಿದ್ಯಾರ್ಥಿಗಳು ಕೇವಲ ಉತ್ತಮ ಅಂಕಗಳಿಸಿದರೆ ಸಾಲದು. ಉತ್ತಮ ವೃತ್ತಿ ಕೌಶಲ ಬೆಳೆಸಿಕೊಳ್ಳಬೇಕು. ಶಿಕ್ಷಣ, ಉದ್ಯೋಗ, ಸ್ವಯಂ ಉದ್ಯೋಗ, ವ್ಯಾಪಾರ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿನ ಸ್ಪರ್ಧೆಯನ್ನು ಸಮರ್ಥವಾಗಿ ಎದುರಿಸಿ ನಿಲ್ಲಬೇಕಿದೆ’ ಎಂದರು.</p>.<p>‘ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಅಂಕಗಳಿಸುವಂತೆ ಪೋಷಕರು, ಶಿಕ್ಷಕರು ಒತ್ತಡ ಹಾಕಲು ಮುಂದಾಗಬಾರದು. ಮಕ್ಕಳ ಕಲಿಕಾ ಸಾಮರ್ಥ್ಯ, ಆಸಕ್ತಿ, ಗ್ರಹಿಸುವ ಶಕ್ತಿಯನ್ನು ಅನುಸರಿಸಿ ಅವರಿಗೆ ಅವಕಾಶ ಒದಗಿಸಿಕೊಡುವ ಕೆಲಸ ಮಾಡಬೇಕಿದೆ’ ಎಂದು ಹೇಳಿದರು.</p>.<p>ಪ್ರೌಢಶಾಲಾ ವಿದ್ಯಾರ್ಥಿಗಳಿಂದ ವಿಜ್ಞಾನ ವಸ್ತು ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಬಂಕ್ ಮುನಿಯಪ್ಪ, ಹುಜಗೂರು ರಾಮಣ್ಣ, ಕೃಷ್ಣಾರೆಡ್ಡಿ, ಪತ್ರಕರ್ತರ ಸಂಘದ ಅಧ್ಯಕ್ಷ ಎ.ಶಶಿಕುಮಾರ್ ಅವರನ್ನು ಸನ್ಮಾನಿಸಲಾಯಿತು.</p>.<p>ಲಕ್ಷ್ಮಿ ವಿದ್ಯಾನಿಕೇತನ ವಿದ್ಯಾಸಂಸ್ಥೆ ಅಧ್ಯಕ್ಷ ಸ್ಕೂಲ್ ದೇವರಾಜ್, ಬ್ಯಾಟರಾಯಶೆಟ್ಟಿ, ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>