<p><strong>ಚಿಕ್ಕಬಳ್ಳಾಪುರ:</strong> ಜನಸಂಘದ ಸಂಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜನ್ಮದಿನದ ಅಂಗವಾಗಿ ಭಾನುವಾರ ಬಿಜೆಪಿ ಯುವ ಮೋರ್ಚಾದಿಂದ ತಾಲ್ಲೂಕಿನ ಅಗಲಗುರ್ಕಿ ಬೆಟ್ಟದಲ್ಲಿ ಬೀಜದ ಉಂಡೆಗಳನ್ನು ಪ್ರಸರಣ ಮಾಡಲಾಯಿತು. ಸುಮಾರು 8,000 ಬೀಜದ ಉಂಡೆಗಳನ್ನು ತಯಾರಿಸಿ ಬೆಟ್ಟದ ತುದಿಯಲ್ಲಿ ಎಸೆಯಲಾಯಿತು.</p>.<p>ಈಗ ಮಳೆಗಾಲ ಆರಂಭವಾಗಿದೆ. ಬೀಜದ ಉಂಡೆಗಳನ್ನು ಪ್ರಸರಣ ಮಾಡಿದರೆ ಮೊಳಕೆಯೊಡೆದು ಬೆಳೆಯುತ್ತವೆ. ಬೀಜ ಪ್ರಸರಣಕ್ಕೆ ಇದು ಸಕಾಲ. ಪರಿಸರ ಕಾಳಜಿಯನ್ನು ಬೆಳೆಸಿಕೊಳ್ಳುವ ಮೂಲಕ ಸಮತೋಲನ ಕಾಪಾಡಿಕೊಳ್ಳಬೇಕು ಎಂದು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಣಜಿತ್ ಕುಮಾರ್ ತಿಳಿಸಿದರು.</p>.<p>ಪರಿಸರವನ್ನು ಉಳಿಸಿ ಬೆಳೆಸಬೇಕು. ವಾತಾವರಣವನ್ನು ಕಾಪಾಡಿದರೆ ನಮ್ಮ ಭವಿಷ್ಯವನ್ನು ಪರಿಸರ ಕಾಪಾಡುತ್ತದೆ ಎಂದು ಹೇಳಿದರು.</p>.<p>ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಅಭಿಷೇಕ್, ಉಪಾಧ್ಯಕ್ಷ ಸದಾಶಿವ, ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಬಾಗೇಪಲ್ಲಿ ಸತೀಶ್ ಹಾಗೂ ಜಿಲ್ಲಾ ಪದಾಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಜನಸಂಘದ ಸಂಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜನ್ಮದಿನದ ಅಂಗವಾಗಿ ಭಾನುವಾರ ಬಿಜೆಪಿ ಯುವ ಮೋರ್ಚಾದಿಂದ ತಾಲ್ಲೂಕಿನ ಅಗಲಗುರ್ಕಿ ಬೆಟ್ಟದಲ್ಲಿ ಬೀಜದ ಉಂಡೆಗಳನ್ನು ಪ್ರಸರಣ ಮಾಡಲಾಯಿತು. ಸುಮಾರು 8,000 ಬೀಜದ ಉಂಡೆಗಳನ್ನು ತಯಾರಿಸಿ ಬೆಟ್ಟದ ತುದಿಯಲ್ಲಿ ಎಸೆಯಲಾಯಿತು.</p>.<p>ಈಗ ಮಳೆಗಾಲ ಆರಂಭವಾಗಿದೆ. ಬೀಜದ ಉಂಡೆಗಳನ್ನು ಪ್ರಸರಣ ಮಾಡಿದರೆ ಮೊಳಕೆಯೊಡೆದು ಬೆಳೆಯುತ್ತವೆ. ಬೀಜ ಪ್ರಸರಣಕ್ಕೆ ಇದು ಸಕಾಲ. ಪರಿಸರ ಕಾಳಜಿಯನ್ನು ಬೆಳೆಸಿಕೊಳ್ಳುವ ಮೂಲಕ ಸಮತೋಲನ ಕಾಪಾಡಿಕೊಳ್ಳಬೇಕು ಎಂದು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಣಜಿತ್ ಕುಮಾರ್ ತಿಳಿಸಿದರು.</p>.<p>ಪರಿಸರವನ್ನು ಉಳಿಸಿ ಬೆಳೆಸಬೇಕು. ವಾತಾವರಣವನ್ನು ಕಾಪಾಡಿದರೆ ನಮ್ಮ ಭವಿಷ್ಯವನ್ನು ಪರಿಸರ ಕಾಪಾಡುತ್ತದೆ ಎಂದು ಹೇಳಿದರು.</p>.<p>ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಅಭಿಷೇಕ್, ಉಪಾಧ್ಯಕ್ಷ ಸದಾಶಿವ, ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಬಾಗೇಪಲ್ಲಿ ಸತೀಶ್ ಹಾಗೂ ಜಿಲ್ಲಾ ಪದಾಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>